ರಾಜಕೀಯ ಗುರು ಪೂಜಾರಿಯವರ ಆಶೀರ್ವಾದ ಪಡೆದ ಆರೋಗ್ಯ ಸಚಿವ ಯು.ಟಿ. ಖಾದರ್‘ಜಿಲ್ಲೆಗೆ ಗೌರವ ತರುವ ಕೆಲಸ ಮಾಡುತ್ತೇನೆ’
ಬಂಟ್ವಾಳ, ಜೂ. 8: ಜಿಲ್ಲೆಯ ಹಿಂದಿನ ಜನಪ್ರತಿನಿಧಿಗಳಂತೆ ತಾನೂ ಕಾರ್ಯನಿರ್ವಹಿಸಿ ಜಿಲ್ಲೆಗೆ ಗೌರವ ತರುವ ಕೆಲಸ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಭಾನುವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ ಅವರು ಮಾತನಾಡಿದರು. “ಜನಾರ್ಧನ ಪೂಜಾರಿಯವರು ನನ್ನ ರಾಜಕೀಯ ಗುರುಗಳು. ಕಾಲೇಜು ದಿನಗಳಿಂದಲೇ ತಂದೆಯಷ್ಟೇ ಪ್ರೀತಿ, ಮಾರ್ಗದರ್ಶನ ನೀಡಿ ರಾಜಕೀಯವಾಗಿ ಬೆಳೆಸಿದ್ದಾರೆ. ತಪ್ಪು ಮಾಡಿದಾಗ ತಿದ್ದಿ, ಉತ್ತಮ…