ರಾಜಕೀಯ ಗುರು ಪೂಜಾರಿಯವರ ಆಶೀರ್ವಾದ ಪಡೆದ ಆರೋಗ್ಯ ಸಚಿವ ಯು.ಟಿ. ಖಾದರ್‘ಜಿಲ್ಲೆಗೆ ಗೌರವ ತರುವ ಕೆಲಸ ಮಾಡುತ್ತೇನೆ’

ಬಂಟ್ವಾಳ, ಜೂ. 8: ಜಿಲ್ಲೆಯ ಹಿಂದಿನ ಜನಪ್ರತಿನಿಧಿಗಳಂತೆ ತಾನೂ ಕಾರ್ಯನಿರ್ವಹಿಸಿ ಜಿಲ್ಲೆಗೆ ಗೌರವ ತರುವ ಕೆಲಸ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಭಾನುವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ ಅವರು ಮಾತನಾಡಿದರು. “ಜನಾರ್ಧನ ಪೂಜಾರಿಯವರು ನನ್ನ ರಾಜಕೀಯ ಗುರುಗಳು. ಕಾಲೇಜು ದಿನಗಳಿಂದಲೇ ತಂದೆಯಷ್ಟೇ ಪ್ರೀತಿ, ಮಾರ್ಗದರ್ಶನ ನೀಡಿ ರಾಜಕೀಯವಾಗಿ ಬೆಳೆಸಿದ್ದಾರೆ. ತಪ್ಪು ಮಾಡಿದಾಗ ತಿದ್ದಿ, ಉತ್ತಮ…

Read More

ಮಳೆಗಾಲದ ಅಬ್ಬರ: ಮಲ್ಪೆ ಬೀಚ್‌ನಲ್ಲಿ ಸಮುದ್ರ ಪ್ರವೇಶ ನಿಷೇಧ

ಉಡುಪಿ: ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಅಪಾಯಕಾರಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿಯುವುದನ್ನು ಜಿಲ್ಲಾಡಳಿತ ನಿಷೇಧಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಡೆಬೇಲಿ ಅಳವಡಿಸಲಾಗಿದೆ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಮಲ್ಪೆ ಬೀಚ್‌ಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಮಳೆಗಾಲದಲ್ಲಿ ಸಮುದ್ರದ ಸ್ವಭಾವ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಗಾಳಿ ಒತ್ತಡ ಹೆಚ್ಚಾದಂತೆ ಅಲೆಗಳ ಅಬ್ಬರ ತೀವ್ರಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಸಂಭವನೀಯ ಅಪಾಯಗಳನ್ನು…

Read More

ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಯರ ಬ್ಯಾಗ್ ಕಳವು ಮಡಗಾಂವ್ ನಿಲ್ದಾಣದಲ್ಲಿ ನಡೆದ ಘಟನೆ; ಭದ್ರತೆ ಕೊರತೆ ಬಗ್ಗೆ ಪ್ರಯಾಣಿಕರ ಆಕ್ರೋಶ

ಬಂಟ್ವಾಳ: ಮುಂಬಾಯಿಂದ ಮಂಗಳೂರಿಗೆ ತೆರಳುವ ಮತ್ಸ್ಯಗಂಧ ಎಕ್ಸ್ ಪ್ರೆಸ್ ರೈಲಿನಲ್ಲಿ ಬೇರೆ ಬೇರೆ ಬೋಗಿನಲ್ಲಿ ಪ್ರಯಾಣಿಸುತ್ತಿದ್ದ ಮಂಗಳೂರು ಮೂಲದ ಇಬ್ಬರು ಮಹಿಳಾ ಪ್ರಯಾಣಿಕರ ಅಮೂಲ್ಯ ವಸ್ತುಗಳಿದ್ದ ಬ್ಯಾಗ್ ಕಳವು ನಡೆದಿದೆ. ಮಡಗಾಂವ್ ರೈಲು ನಿಲ್ದಾಣದಲ್ಲಿ ಹತ್ತು ನಿಮಿಷಗಳ ರೈಲು ನಿಲ್ಲಿಸಿದ್ದ ವೇಳೆ ಕಳವು ನಡೆದಿದೆ. ರೈಲು ಸಂಖ್ಯೆ 12619 ರಲ್ಲಿ ಪ್ರಯಾಣಿಸುತ್ತಿದ್ದ ಮೂಲ್ಕಿ ಮೂಲದ ರಜನಿ ಶೆಟ್ಟಿ ಹಾಗೂ ಸುರತ್ಕಲ್ ಮೂಲದ ವಿನಯ ಶೆಟ್ಟಿ ಎಂಬಿಬ್ಬರ ಬ್ಯಾಗ್ ಕಳವು ನಡೆದಿದೆ. ಬೋಗಿ ಸಂಖ್ಯೆ ಎಸ್. ೫ ಹಾಗೂ…

Read More

“ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಹೊಸಂಗಡಿಯಲ್ಲಿ CITU ಧರಣಿ”

ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಗೆದುರಾಗಿ citu ಹೊಸಂಗಡಿ ಪೋಸ್ಟ್ ಆಫೀಸ್ ಬಳಿ ಧರಣಿ ಸಂಘಟಿಸಲಾಯಿತು. ಧರಣಿ ಯನ್ನು citu ಜಿಲ್ಲಾ ಉಪಾಧ್ಯಕ್ಷೆ ಕಾo ಬೇಬಿ ಶೆಟ್ಟಿ ಉದ್ಘಾಟಿಸಿ ,ಕೇಂದ್ರ ಸರ್ಕಾರ ಪಶ್ಚಿಮ ಏಷ್ಯಾ ಯುದ್ದದ ಕಾರಣ ನೀಡಿ ಬಂಡವಾಳ ಶಾಹಿಗಳಿಗೆ ದೇಶದ ಬಡಜನತೆಯನ್ನೂ ಕೊಳ್ಳೆ ಒಡೆಯಲು ಲೈಸೆನ್ಸ್ ಕೊಟ್ಟಂತಾಗಿದೆ . ನಗರ ಪ್ರದೇಶದಲ್ಲಿ ಹೋಟೆಲ್ ಗಳು ಬಂದ್ ಮಾಡಲಾಗಿದೆ ,ಆಹಾರ ಸಮೇತ ಸಿಗದ ಪರಿಸ್ಥಿತಿ ಬಂದಿದೆ .ಇದರಿಂದಾಗಿ ಕಾರ್ಮಿಕ ಕೆಲಸ ನಷ್ಟ ವಾಗಿದೆ,…

Read More

ಕಣ್ಣೂರು ವಾರ್ಡಿನಲ್ಲಿ ₹45 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 52ನೇ ಕಣ್ಣೂರು ವಾರ್ಡಿನ ಶ್ರೀ ವೈದ್ಯನಾಥ ದೇವಸ್ಥಾನದ ಬಳಿ ಕಾವೇರಂಗಡಿ ಯೋಗೀಶ್ ಮನೆಯವರೆಗೆ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗಾಗಿಯು 45ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರದ ಮಾತನಾಡಿದ ಶಾಸಕರು, ಇಲ್ಲಿನ ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಯಂತೆ ಸುಮಾರು 300 ಮೀಟರ್ ಉದ್ದದ ರಸ್ತೆ ಹಾಗೂ ಚರಂಡಿ ನಿರ್ಮಾಣವಾಗಲಿದ್ದು, ಸ್ಥಳೀಯ ನಿಕಟಪೂರ್ವ ಪಾಲಿಕೆ ಸದಸ್ಯರಾದ ಶ್ರೀಮತಿ ಚಂದ್ರಾವತಿ ವಿಶ್ವನಾಥ್ ರವರ…

Read More

ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ 14.2 ಕೆ.ಜಿ ಗೃಹಬಳಕೆ ಸಿಲಿಂಡರ್‌ಗೆ ₹29 ಹೆಚ್ಚಳ; ಗ್ರಾಹಕರಿಗೆ ಮತ್ತೊಂದು ಹೊರೆ

ನವದೆಹಲಿ : ಗೃಹಬಳಕೆಯ 14.2 ಕೆ.ಜಿ ತೂಕದ ಎಲ್‌ಪಿಜಿ (LPG) ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ ದರ ದುಬಾರಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.ಈ ದಿಢೀರ್ ಬೆಲೆ ಏರಿಕೆಯಿಂದಾಗಿ ದೇಶದ ರಾಜಧಾನಿ ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್ ದರವು 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ. ಜೂನ್ 7ರಿಂದಲೇ ಈ ಪರಿಷ್ಕೃತ ದರ ದೇಶಾದ್ಯಂತ…

Read More

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನುಕ್ರಮ ಕ್ರಮಕ್ಕೆ ಆಗ್ರಹಿಸಿ ಹಕ್ಕೋತ್ತಾಯ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಅಧ್ಯಕ್ಷ ಭುವನೇಶ್ ಪಚಿನಡ್ಕ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಉಪಸ್ಥಿತಿಯಲ್ಲಿ ತಾಲೂಕು ಕಛೇರಿ ಬಂಟ್ವಾಳ ದಲ್ಲಿ ಹರಿಕೃಷ್ಣ ಬಂಟ್ವಾಳ ಖಂಡನಾ ನಿರ್ಣಯ ಹಕ್ಕೋತ್ತಾಯವನ್ನು ಮಂಡಿಸಿ ಬಂಟ್ವಾಳ ತಹಶೀಲ್ದಾರರು ಮಂಜುನಾಥ್ ಇವರಿಗೆ ಮನವಿ ನೀಡಲಾಯಿತು ಹಾಗೂ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧಿಕಾರಿ ಯಶ್ ಕುಮಾರ್ ಶರ್ಮಾ ಇವರಿಗೂ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಬೂಡದ ಅದ್ಯಕ್ಷರು ಬೇಬಿ ಕುಂದರ್, ಸಂಘದ ಮಾಜಿ ಅಧ್ಯಕ್ಷರುಗಳು ರಾಮಪ್ಪ…

Read More

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಮೊದಲ ಹಂತದಲ್ಲಿ ಆರ್ಡಿನರಿ ಬಸ್‌ಗಳಿಗೆ ಮಾತ್ರ ಸೀಮಿತ?100 ದಿನಗಳ ಪ್ರಾಯೋಗಿಕ ಜಾರಿ ಕುರಿತು ಸರ್ಕಾರ ಚಿಂತನೆ

ತಿರುವನಂತಪುರ: ರಾಜ್ಯದಲ್ಲಿ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ಮೊದಲ ಹಂತದಲ್ಲಿ ಸಾಮಾನ್ಯ (ಆರ್ಡಿನರಿ) ಬಸ್‌ಗಳಿಗೆ ಮಾತ್ರ ಸೀಮಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ತಾಂತ್ರಿಕ ಹಾಗೂ ಆರ್ಥಿಕ ಅಂಶಗಳ ಕುರಿತು ಸಾರಿಗೆ ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ಆರಂಭಿಕ ಹಂತದಲ್ಲಿ ಆರ್ಡಿನರಿ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಕುರಿತು ಒಮ್ಮತ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು 100 ದಿನಗಳ ಕಾಲ ಜಾರಿಗೆ ತಂದು, ಅದರ ಕಾರ್ಯಸಾಧ್ಯತೆ, ಪ್ರಯಾಣಿಕರ…

Read More

ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ತನಿಖೆ ಆರಂಭ

ವಿಜಯಪುರದ ಪಾನ್ ಶಾಪ್ ನಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್ ಇದಾಗಿದೆ.ಪಾನ್ ಶಾಪ್ ಒಳಗಿದ್ದ ಪ್ರಿಡ್ಜ್ ಗೆ ಯಾವುದೇ ಹಾನಿಯಾಗಿಲ್ಲ.ಹೊರಗಡೆಯಿಂದ ಸ್ಪೋಟವಾಗಿರಬಹುದಾದ ಶಂಕೆಯ ಹಿನ್ನೆಲೆಯಲ್ಲಿಸ್ಥಳಕ್ಕೆ ಬಬಲೇಶ್ವರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ, ಸೊಕೋ ತಂಡ ಶ್ವಾನದಳದಿಂದ ಸ್ಥಳ ಪರೀಕ್ಷೆ ನಡೆದಿದೆ.ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ.ತನಿಖೆಯ ಬಳಿಕವೇ ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬರಲಿದೆ.

Read More

ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಮಂಗಳೂರು, ಜೂ. 8: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಸಿಪಿಐ(ಎಂ) ಮಂಗಳೂರು ನಗರ ಸಮಿತಿ ವತಿಯಿಂದ ಸೋಮವಾರ ಲಾಲ್‌ಬಾಗ್‌ನಲ್ಲಿರುವ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಮುಖಂಡ ಇಮ್ತಿಯಾಜ್, ಮನೆ ಬಾಡಿಗೆದಾರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಕೆಲ ಮನೆ ಮಾಲೀಕರು ಯಾವುದೇ ಮುನ್ನೋಟಿಸ್ ನೀಡದೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಡಿತಗೊಳಿಸುವುದು, ಮನೆ ಖಾಲಿ ಮಾಡುವಂತೆ ಒತ್ತಡ…

Read More
error: Content is protected !!