ಅಕ್ಟೋಬರ್ 19 ರಂದು ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ 25 ನೇ ವರ್ಷದ ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ , ವಿಜೇತರಿಗೆ ಆಕರ್ಷಕ ಚಿನ್ನದ ಪದಕ
ಮಂಗಳೂರು : ಪ್ರಪ್ರಥಮ ತುಳು ವಾರ್ತಾವಾಹಿನಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ನಮ್ಮ ಕುಡ್ಲ ವಾಹಿನಿ ವತಿಯಿಂದ 25ನೇ ವರ್ಷದ ನಮ್ಮ ಕುಡ್ಲ ಗೂಡು ದೀಪ ಸ್ಪರ್ಧೆ ಅಕ್ಟೋಬರ್ 19 ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ಸಂಜೆ 4.30ಕ್ಕೆ ಆರಂಭಗೊಳ್ಳಲಿದೆ ಎಂದು ನಮ್ಮ ಕುಡ್ಲ ನಿರ್ದೇಶಕ ಹರೀಶ್ ಬಿ ಕರ್ಕೇರ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಗೂಡುದೀಪಗಳು ಮರೆಯಾಗುತ್ತಿರುವ ಕ್ಷಣದಲ್ಲಿ ನಮ್ಮ ಕುಡ್ಲ ವಾಹಿನಿ ಗೂಡುದೀಪ ರಚನೆಗೆ…