ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು (ಭಿತ್ತಿ ಪತ್ರ) ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು (ಭಿತ್ತಿ ಪತ್ರ) ಶ್ರೀ ಎಡನೀರು ಮಠದ…

Read More

ಪುನರ್‌ ಡಾಮಾರೀಕರಣ ಕಾಮಗಾರಿ ಪೂರ್ಣಗೊಂಡ ಒಂದೇ ವರ್ಷದಲ್ಲೇ ಸಂಪೂರ್ಣ ಹದಗೆಟ್ಟ ಕೆದಂಬಾಡಿ ರಸ್ತೆ .

ಮಂಜೇಶ್ವರ : ಅದೆಷ್ಟೋ ನಿರೀಕ್ಷೆಗಳಿಂದ ಕಾಮಗಾರಿ ಪೂರ್ಣಗೊಂಡಿದ್ದ ಮಂಜೇಶ್ವರ ಗೋವಿಂದ ಪೈ – ಕೆದಂಬಾಡಿ ರಸ್ತೆಯ ಪುನರ್‌ಡಾಮಾರೀಕರಣ ಕಾಮಗಾರಿ ಪೂರ್ಣಗೊಂಡ ಒಂದೇ ವರ್ಷದಲ್ಲೇ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸುಮಾರು ₹5.24 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ ನೇತೃತ್ವದಲ್ಲಿ ಈ ರಸ್ತೆ ಡಾಮಾರೀಕರಣಗೊಂಡಿದ್ದರೂ, ಇದೀಗ ರಸ್ತೆ ಎರಡೂ ಬದಿಗಳು ಸಂಪೂರ್ಣವಾಗಿ ಕುಸಿದು ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಸುಮಾರು 5.2 ಕಿ.ಮೀ ಉದ್ದದ ಈ ರಸ್ತೆ, ಕಾಮಗಾರಿ ಆರಂಭವಾಗುವ ವೇಳೆಯೇ ಅಗಲದಲ್ಲಿ ಅತಿಯಾದ ಕೊರತೆಯಿದ್ದ ಕಾರಣ ಸ್ಥಳೀಯರು ಭಾರೀ ವಿರೋಧ…

Read More

ಬಿಸಿರೋಡು ಬಸ್ ನಿಲ್ದಾಣದ ರಸ್ತೆ ಹಾಗೂ ರೈಲ್ವೇ ಮೇಲ್ಸೇತುವೆಯ ಗುಂಡಿ ಗಳಿಗೆ ತಾತ್ಕಾಲಿಕ ತೇಪೆ.

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡು ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಗೂ ರೈಲ್ವೆ ಮೇಲ್ಸೇತುವೆಯ ಭಾಗದಲ್ಲಿ ಮಳೆಗಾಲದ ಆರಂಭದ ದಿನಗಳಲ್ಲಿ ಬಿದ್ದಿದ್ದ ಬೃಹತ್ ಹೊಂಡಗಳನ್ನು ಇಂದು ಹೆದ್ದಾರಿ ಇಲಾಖೆಯ ಮೊಗರೋಡಿ ಕನ್ಸ್್ಟ್ರಕ್ಸನ್ ಅಧಿಕೃತ ಗುತ್ತಿಗೆ ಸಂಸ್ಥೆಯಿಂದ ಮುಚ್ಚಲಾಯಿತು. ಮಂಗಳೂರಿನಿಂದ ಬಿಸಿರೋಡು ವರೆಗೆ ಹೆದ್ದಾರಿಯ ನಿರ್ವಹಣೆ ವಹಿಸಿಕೊಂಡ ಮೊಗರೊಡಿ ಕಂಪೆನಿಯವರು ಎರಡು ದಿನಗಳಿಂದ ರಸ್ತೆಯ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಕೈಗೊಂಡಿದ್ದಾರೆ. ಬಿಸಿರೋಡು ಬಸ್ ನಿಲ್ದಾಣ ಹಾಗೂ ರೈಲ್ವೇ ಮೇಲ್ಸೇತುವೆಯಲ್ಲಿ ಬಿದ್ದ ಗುಂಡಿಗಳಿಂದ ನಿತ್ಯ ಟ್ರಾಫಿಕ್ ಸಮಸ್ಯೆ…

Read More

ಎರಡನೇ ವರ್ಷದ ‘ರೋಟರಿ ಕಂಬಳ’ ಸಿದ್ಧಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ಅ.12ರಂದು

ಬಂಟ್ವಾಳ: ಕಳೆದ ವರ್ಷ ರೋಟರಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ‘ರೋಟರಿ ಕಂಬಳ’ ಕೂಟ ನಡೆಸಿ ಗಮನ ಸೆಳೆದಿದ್ದ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಈ ಬಾರಿ ಇತರ ನಾಲ್ಕು ರೋಟರಿ ಕ್ಲಬ್ ಗಳ ಸಹಭಾಗಿತ್ವದಲ್ಲಿ ಸಿದ್ಧಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ಅ.12ರಂದು ಎರಡನೇ ವರ್ಷದ ‘ರೋಟರಿ ಕಂಬಳ’ ನಡೆಸಲು ಮುಂದಾಗಿದೆ ಎಂದು ಈ ಕಂಬಳ ಕೂಟದ ನೇತೃತ್ವ ವಹಿಸಿಕೊಂಡಿರುವ ಮೊಡಂಕಾಪು ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಎಲ್ಯಾಸ್ ಸ್ಯಾಂಕ್ಟಿಸ್ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ…

Read More

ವಿಟ್ಲದಲ್ಲಿ 400 ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಬೃಹತ್ ಶಕ್ತಿ ಪ್ರದರ್ಶನ .

ವಿಟ್ಲ: ಸನಾತನ ಹಿಂದು ಧರ್ಮ ಮತ್ತು ಧಾರ್ಮಿಕ ಸಂಬಿಕೆಗಳ ಸಂರಕ್ಷಣಾ ಹೋರಾಟ ಸಮಿತಿ ವಿಟ್ಲ, ಹಲವು ಹಿಂದು ಸಂಘಟನೆಗಳು, ಸಾಮಾಜಿಕ ಮತ್ತು ರೈತ ಸಂಘಟನೆಗಳ ಸಹಯೋಗದೊಂದಿಗೆ 4೦೦ ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಗುರುವಾರ ಬೃಹತ್ ಶಕ್ತಿ ಪ್ರದರ್ಶನ ವಿಟ್ಲ ಸಮೀಪದ ಮಂಗಳಪದವಿನಲ್ಲಿ ನಡೆಯಿತು . ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ,‌ ದಕ್ಷಿಣ ಕನ್ನಡ‌ ಜಿಲ್ಲೆ ಉಡುಪಿ ಜಿಲ್ಲೆಗಳ ಜನರು ಅಭಿವೃದ್ಧಿ ಹೆಸರಿನಲ್ಲಿ ಈಗಾಗಲೇ ಅದೆಷ್ಟು ಭೂಮಿ, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು, ಧಾರ್ಮಿಕ ಶ್ರದ್ದಾ…

Read More

ಹನಿಟ್ರ್ಯಾಪ್ ಗೆ ಯುವಕನೋರ್ವ ಬಲಿ .

ಮಂಗಳೂರು: ಹನಿಟ್ರ್ಯಾಪ್ ಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಡಿಯೋ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ನಾಲ್ವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೋಟ್ ನಲ್ಲಿ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿದೆ. ಈತ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಯೋಮೆಡಿಕಲ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದನು .ಈತ ಆತ್ಮಹತ್ಯೆ ಗೈಯ್ಯುವ ಮೊದಲು ಡೀಟೆಲ್ ಆಗಿ ಯಾರೆಲ್ಲ ಕಿರುಕುಳ ನೀಡಿದ್ದಾರೆಂದು ಮತ್ತು ಯಾವ ವಿಚಾರಕ್ಕೆಂದು ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿದ್ದಾನೆ. ನಿರೀಕ್ಷಾ,ರಾಹುಲ್,ರಾಕೇಶ…

Read More

ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೋ ಗೆ ಮುತ್ತಿಗೆ.

ಮಂಗಳೂರು: ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೋ ಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.2018 ರಿಂದ 2024 ರ ವರಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024 ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ತೆ ಪಾವತಿಗೆ ಒತ್ತಾಯಿಸಿ “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ” ಆಶ್ರಯದಲ್ಲಿ ಈ ಪ್ರತಿಭಟನೆ ನಡೆಯಿತು. ಕುಪ್ಪೆಪದವು ಪ್ರದೇಶ ಬೀಡಿ ಕೆಲಸಗಾರರ ಸಂಘ, ಗುರುಪುರ, ಸುರತ್ಕಲ್ ಬೀಡಿ ಲೇಬರ್ ಯೂನಿಯನ್, ವಾಮಂಜೂರು…

Read More

ಮುಂಬೈಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವು.

ಮುಂಬೈಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವಿಗೀಡಾಗಿದ್ದಾರೆ.ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಕಿನ್ನಿಗೋಳಿ ಮೂಲದ ಸದ್ಯ ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ 22 ವರ್ಷದ ಸಂಸ್ಕೃತಿ ಅಮೀನ್ ಎಂದು ಗುರುತಿಸಲಾಗಿದೆ. ಸಂಸ್ಕೃತಿ ಅಮೀನ್ ಮುಂಬೈನ ಕೋಟ್ಯಾನ್ ಕ್ಯಾಟರರ್ಸ್‌ನ ಮಾಲೀಕರಾದ ಅನಿಲ್ ಮತ್ತು ಪದ್ಮಾವತಿ ಅಮೀನ್ ಅವರ ಏಕೈಕ ಪುತ್ರಿ. ಸಂಸ್ಕೃತಿ ಎಂದಿನಂತೆ ಬೆಳಿಗ್ಗೆ 9.30 ರ ಸುಮಾರಿಗೆ ಕೆಲಸಕ್ಕೆ ಹೋಗಲು ಮನೆಯಿಂದ ಹೊರಟಿದ್ದರು….

Read More

ಹೈಕೋರ್ಟ್ ಆದೇಶ ಉಲ್ಲಂಘನೆ ಹಿಂದೂ ಮುಖಂಡ ಶರಣ್ ಪಂಪ್‌ವೆಲ್‌ಗೆ ₹2 ಲಕ್ಷ ದಂಡ!

ಚಿತ್ರದುರ್ಗ: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಕಾರಣ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ ಅವರಿಗೆ ಹೈಕೋರ್ಟ್ ₹2 ಲಕ್ಷ ರೂ. ದಂಡ ಹಾಕಿದೆ . ಕೋರ್ಟ್ ಬುಧವಾರ ನೀಡಿದ ಆದೇಶದ ಪ್ರಕಾರ, ದಂಡದ ಮೊತ್ತದಲ್ಲಿ ₹1 ಲಕ್ಷ ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ ಮತ್ತು ₹1 ಲಕ್ಷ ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ಪಾವತಿಸಬೇಕೆಂದು ನಿರ್ದೇಶಿಸಲಾಗಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶರಣ್ ಪಂಪ್‌ವೆಲ್ಅವರ ಜಿಲ್ಲೆ ಪ್ರವೇಶದ ಮೇಲೆ ನಿರ್ಬಂಧ…

Read More

ಕರ್ತವ್ಯ ಲೋಪ – ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ನೇಮಕಾತಿ ರದ್ದು.

ಉಡುಪಿ: ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿ ಸೆ.29 ರಂದು ಸರಕಾರ ಆದೇಶ ಹೊರಡಿಸಿದೆ. ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಮತ್ತು ಪರ್ಯಾಯ ವ್ಯವಸ್ಥೆ ಮಾಡದೆ ನ್ಯಾಯಾಲಯದ ಕಲಾಪದಂದು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಜೊತೆಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ಇವರ ವಿರುದ್ದ ಜಾತಿ ನಿಂದನೆ…

Read More
error: Content is protected !!