ಪುತ್ತೂರಿನಲ್ಲಿ ಭಕ್ತಿಭಾವದಿಂದ ಸಾಮೂಹಿಕ ಸರಸ್ವತೀ ವಂದನೆ; 175 ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ

ಪುತ್ತೂರು, ಜೂನ್ 7: ​ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅತ್ಯಂತ ಭಕ್ತಿಭಾವದಿಂದ ಜರುಗಿತು. ಬೆಳಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ ಸಹಿತವಾಗಿ…

Read More

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್; ವ್ಯಕ್ತಿ ಬಂಧನಜಾತಿನಿಂದನೆ, ಜೀವ ಬೆದರಿಕೆ ಆರೋಪದಡಿ ಕಾರ್ಕಳ ಪೊಲೀಸರ ಕ್ರಮ

ಉಡುಪಿ, ಜೂ. 8: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಜಾತಿನಿಂದನಾತ್ಮಕ ಕಾಮೆಂಟ್ ಮಾಡಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಕಾರ್ಕಳ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಪ್ರಕಟಗೊಂಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತ ಪೋಸ್ಟ್‌ಗೆ ಸುಧೀರ ಬಂಗೇರ ಅವಹೇಳನಕಾರಿ, ಜಾತಿನಿಂದನಾತ್ಮಕ…

Read More

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಇಲ್ಲ: ಬಿಜೆಪಿ ಅಚ್ಚರಿಯ ನಿರ್ಧಾರ

ಬೆಂಗಳೂರು, ಜೂ. 8: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಮರು ಅವಕಾಶ ನೀಡದೆ ಪ್ರೊ. ಎಂ. ನಾಗರಾಜ್ ಅವರನ್ನು ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಹಿಂದುಳಿದ ವರ್ಗದ (ಒಬಿಸಿ) ನಾಯಕ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಜೊತೆಗೆ ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಎಚ್.ಡಿ….

Read More

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನನ್ನ ಮೊದಲ ಆದ್ಯತೆ: ಆರೋಗ್ಯ ಸಚಿವ ಯು.ಟಿ. ಖಾದರ್ಆಸ್ಪತ್ರೆಗಳ ಲೋಪದೋಷ ಸರಿಪಡಿಸಲು ಕ್ರಮ;

ಮಂಗಳೂರು, ಜೂನ್ 8: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ರಾಜ್ಯದ ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಅವರು, ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಹಿಂದಿನ ಆರೋಗ್ಯ ಸಚಿವರು ಆರಂಭಿಸಿರುವ ಯೋಜನೆಗಳನ್ನು…

Read More

ಜೂನ್ 11ರಂದು ಬೆಳ್ಳಿ ತೆರೆ ಮೇಲೆ ಅಪ್ಪಳಿಸಲಿದೆ “ಕಜ್ಜ” ತುಳು ಸಿನಿಮಾ ….. !

ಮಂಗಳೂರು, ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ “ಕಜ್ಜ” ಜೂನ್ 11ರಂದು ಕರಾವಳಿ ಜಿಲ್ಲೆಗಳಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಾಹಿತ್ಯ ರಚನೆಕಾರ ಮೋಹನ್ ರಾಜ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಷ್ಣು ಎಸ್. ಮೆನನ್ ಹಾಗೂ ಸಿದ್ದಾರ್ಥ್ ಶೆಟ್ಟಿ ಅವರ ನಿರ್ದೇಶನದಲ್ಲಿ, ವಿಶಾಂತ್ ಮಿನೆಜಿಸ್ ನಿರ್ಮಾಣ ಹಾಗೂ ಪ್ರವೀಣ್ ಸುವರ್ಣ ಅವರ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ ಎಂದು ತಿಳಿಸಿದರು. ಚಿತ್ರವು ಮಂಗಳೂರು, ಸುರತ್ಕಲ್,…

Read More

ಸಂತಡ್ಕ ಮಾಡ ಕ್ಷೇತ್ರದಲ್ಲಿ ಮಹಾರುದ್ರಯಾಗ-ಗಿರಿಜಾ ಕಲ್ಯಾಣೋತ್ಸವ ವೈಭವ

ಸಂತಡ್ಕ, ಜೂನ್ 7: ಲೋಕ ಕಲ್ಯಾಣದ ದಿವ್ಯ ಸಂಕಲ್ಪದೊಂದಿಗೆ ಸಂತಡ್ಕದ ಮಾಡ ಕ್ಷೇತ್ರದಲ್ಲಿ ಮಹಾರುದ್ರಯಾಗ, ಶ್ರೀ ಗಿರಿಜಾ ಕಲ್ಯಾಣೋತ್ಸವ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನಾ ಸಮಾರಂಭವು ಭಾನುವಾರ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಸಮ್ಮಿಲನವಾಗಿದ್ದ ಈ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ದೈವಾನುಗ್ರಹಕ್ಕೆ ಪಾತ್ರರಾದರು. ಕ್ಷೇತ್ರದಲ್ಲಿ ಆಯೋಜಿಸಲಾದ ಮಹಾರುದ್ರಯಾಗವು ಲೋಕ ಕಲ್ಯಾಣ, ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸುವುದು, ಪ್ರಕೃತಿ ವಿಕೋಪಗಳ ಶಮನ ಹಾಗೂ ಸಾಂಕ್ರಾಮಿಕ ರೋಗ-ರುಜಿನಗಳಿಂದ ಜನರು ಮುಕ್ತರಾಗಲಿ ಎಂಬ…

Read More

ಕುಂಬಳೆಯಲ್ಲಿ ‘ಚಿರಂಜೀವಿ’ ಸಂಸ್ಥೆಯಿಂದ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಶೈಕ್ಷಣಿಕ ಸಾಧಕರಿಗೆ ಸನ್ಮಾನ; ಶಿಕ್ಷಣದ ಮಹತ್ವ ಸಾರಿದ ಗಣ್ಯರು

ಕುಂಬಳೆ ಜೂನ್ 8: ಶಿಕ್ಷಣದ ಮೂಲಕ ಸಮಾಜದ ಉನ್ನತಿಗೆ ಕೊಡುಗೆ ನೀಡುವ ಉದ್ದೇಶದಿಂದ ಕುಂಬಳೆಯ ಚಿರಂಜೀವಿ (ರಿ.) ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದಲ್ಲಿ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಗಿದ್ದು, ವಿವಿಧ ಪರೀಕ್ಷೆಗಳಲ್ಲಿ ಸಾಧನೆಗೈದ ಒಂಬತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್…

Read More

ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸಮಾಜಕ್ಕೆ ಪೂರಕ: ಗೃಹಲಕ್ಷ್ಮಿ ಕೋಟಿ ಸಂಭ್ರಮದಲ್ಲಿ ಗ್ರಾಮ ಸ್ವರಾಜ್ಯ ಪ್ರತಿಷ್ಠಾನದ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮೂಡಬಿದ್ರೆ ಸಮಾಜ ಮಂದಿರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಡಬಿದ್ರೆ ತಾಲ್ಲೂಕು, ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ದ.ಕ. ಹಾಗೂ ಬಿಲ್ಲವ ಸಂಘ ಇರುವೈಲು ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ “ಗೃಹಲಕ್ಷ್ಮಿ ಕೋಟಿ ಸಂಭ್ರಮ” ಕಾರ್ಯಕ್ರಮ ಭಾನುವಾರ ಯಶಸ್ವಿಯಾಗಿ ನಡೆಯಿತು. ಮೂಡಬಿದ್ರೆ ತಾಲ್ಲೂಕಿಗೆ ಗೃಹಲಕ್ಷ್ಮಿ ಯೋಜನೆಯಡಿ ₹105 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆ ಸಂಭ್ರಮಾಚರಣೆಗೆ ವಿಶೇಷ ಮೆರುಗು ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಅಡೂರಿನಲ್ಲಿ ಮಣ್ಣುಕುಸಿತ ದುರಂತ: ಇಬ್ಬರು ಬಾಲಕರ ಜೀವಬಲಿ

ಕಾಸರಗೋಡು, ಜೂನ್ 8: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಮೀಪದ ಸಂಚಕ್ಕಡವು ಪ್ರದೇಶದಲ್ಲಿ ಸಂಭವಿಸಿದ ಭೀಕರ ಮಣ್ಣುಕುಸಿತ ದುರಂತದಲ್ಲಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಸಾವನ್ನಪ್ಪಿದವರನ್ನು ಅಬೂಬಕ್ಕರ್ ಅವರ ಪುತ್ರರಾದ ಮುನ್ಸೀರ್ (10) ಹಾಗೂ ಮುಜಮ್ಮಿಲ್ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕನನ್ನು ತಕ್ಷಣವೇ ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇತ್ತೀಚೆಗೆ ಗೃಹಪ್ರವೇಶ ನಡೆದ ಮನೆಯ ಸಮೀಪ…

Read More

ಸೀಮಂತ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದ ಮಿನಿ ಬಸ್ ಪಲ್ಟಿ; ಗಾಯಾಳುಗಳಲ್ಲಿ ಓರ್ವ ಸಾವು

ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಮನೆಗೆ ಹೋಗುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ನಡೆದಿದೆ. ಮಂಗಳೂರು ಮೂಲದ ವಿಕಾಶ್ ಎಂಬಾತ ಮೃತಪಟ್ಟಿದ್ದು ಉಳಿದ ಸುಮಾರು 9 ಮಂದಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿಗೆ ಸೀಮಂತ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ಬಂದವರು ವಾಪಸು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಸುಮಾರು 4 ಗಂಟೆಗೆ ಮಂಗಳೂರು – ಬೆಂಗಳೂರು…

Read More
error: Content is protected !!