“ಕೇರಳ ದಿವಾಳಿಯ ದಿಕ್ಕಿಗೆ” – ಎಲ್‌ಡಿಎಫ್ ವಿರುದ್ಧ ಸಿದ್ದರಾಮಯ್ಯ ಕಿಡಿ : ಕರ್ನಾಟಕ ಮಾದರಿ ಕೇರಳಕ್ಕೆ? ಸಿದ್ದರಾಮಯ್ಯ ದೊಡ್ಡ ಸಂದೇಶ

ಮಂಜೇಶ್ವರ: ಹತ್ತು ವರ್ಷಗಳ ಎಲ್‌ಡಿಎಫ್ ಆಡಳಿತವು ಕೇರಳವನ್ನು ಆರ್ಥಿಕ ದಿವಾಳಿಯತ್ತ ಕೊಂಡೊಯುತ್ತಿದ್ದು ನಿರುದ್ಯೋಗ ಮತ್ತು ಬೆಲೆ ಏರಿಕೆಯಿಂದ ಜನತೆ ಸಂಕಷ್ಟದಲ್ಲಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮಂಜೇಶ್ವರ ಸಮೀಪದ ವರ್ಕಾಡಿ ಮಜೀರ್‌ಪಳ್ಳದಲ್ಲಿ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಪರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಆಡಳಿತ ಮತ್ತು ಪ್ರಸ್ತುತ ಎಲ್‌ಡಿಎಫ್ ಸರ್ಕಾರದ ನಡುವೆ ಇರುವ ವ್ಯತ್ಯಾಸವನ್ನು ಅಂಕಿ-ಅಂಶಗಳೊಂದಿಗೆ ವಿವರಿಸಿದರು. “ಕೇರಳ ಇಂದು ಸಾಲದ ಸುಳಿಯಲ್ಲಿ ಸಿಲುಕಿದೆ. ಭ್ರಷ್ಟಾಚಾರ ಮತ್ತು…

Read More

ಮಂಜೇಶ್ವರ ಚುನಾವಣೆಗೆ ಸಸ್ಪೆನ್ಸ್: ಲವಿನಾ ಎಂಟ್ರಿಯಿಂದ ಹೈ-ವೋಲ್ಟೇಜ್ ಫೈಟ್, ತ್ರಿಕೋನ ಕಾದಾಟಕ್ಕೆ ಹೊಸ ಟ್ವಿಸ್ಟ್ – ಸ್ವತಂತ್ರ ಅಭ್ಯರ್ಥಿಯಿಂದ ಶಾಕ್!

ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಮಂಜೇಶ್ವರ ಕ್ಷೇತ್ರದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಮಂಜೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷೆ ಜೀನ್ ಲವಿನಾ ಮಾಂತೆರೋ ಅವರು ಅಂತಿಮ ಕ್ಷಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ತ್ರಿಕೋನ ಸ್ಪರ್ಧೆಗೆ ಹೊಸ ತಿರುವು ನೀಡಿದೆ. ಈ ಬೆಳವಣಿಗೆ ಪ್ರಮುಖ ರಾಜಕೀಯ ಪಕ್ಷಗಳ ಲೆಕ್ಕಾಚಾರವನ್ನು ಬದಲಾಯಿಸುವ ಸಾಧ್ಯತೆಯಿದ್ದು, ವಿಶೇಷವಾಗಿ ಬಿಜೆಪಿಗೆ ಇದು ಅನುಕೂಲಕರವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನೊಂದೆಡೆ, ತಮ್ಮ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಧಕ್ಕೆಯಾಗುವ ಭೀತಿಯಲ್ಲಿ ಯುಡಿಎಫ್ ಪಾಳೆಯದಲ್ಲಿ ಆತಂಕ ಮನೆಮಾಡಿದೆ. ಮಂಜೇಶ್ವರ ಕ್ಷೇತ್ರದಲ್ಲಿ…

Read More

ಪಾವೂರು ನಾಗ ಬ್ರಹ್ಮಾ ವನದುರ್ಗ ಸಾಸ್ತಾರ ಕ್ಷೇತ್ರದಲ್ಲಿ ಅಶ್ಲೇಷ ಪೂಜೆ

ಮಂಜೇಶ್ವರ: ಪಾವೂರು ನಾಗ ಬ್ರಹ್ಮಾ ವನದುರ್ಗ ಸಾಸ್ತಾರ ಕ್ಷೇತ್ರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಅಶ್ಲೇಷ ಪೂಜೆ ಹಾಗೂ ನಾಗ ತಂಬಿಲ ಭಕ್ತಿಭಾವದಿಂದ ನೆರವೇರಿತು. ಕುಂಟ್ಟರೂ ರವೀಶ್ ತಂತ್ರಿಗಳ ಆಶೀರ್ವಾದದೊಂದಿಗೆ ತಲಪಾಡಿ ದುರ್ಗಾ ಪರಮೇಶ್ವರಿ ಕ್ಷೇತ್ರದ ಗಣೇಶ್ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ವಿಧಿವಿಧಾನಗಳು ನಡೆದವು. ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ಕೃಷ್ಣ ಶಿವಕೃಪಾ ಕುಂಜತೂರ್, ಉಪಾಧ್ಯಕ್ಷ ಗಣೇಶ್ ಪಾವೂರು, ಕಾರ್ಯದರ್ಶಿ ಕಮಲಾಕ್ಷ ವಕೀಲರು (ಮಂಗಳೂರು), ಖಜಾಂಚಿ ಕೋಟಿಯಪ್ಪ ಪೂಜಾರಿ ಸೇರಿದಂತೆ ದಯಾನಂದ ಪಾವೂರು, ಸರ್ಮಿಳಾ ಮಂಗಳೂರು, ಸದಾಶಿವ ಕುಂಜತೂರ್,…

Read More

ಉದಯಗಿರಿ ಶ್ರೀ ಮಹಾ ಕಾಳಿ ದೇವಾಲಯಕ್ಕೆ ಮುಖ್ಯದ್ವಾರ ಲೋಕಾರ್ಪಣೆ

ಕಾಸರಗೋಡು: ಜಿಲ್ಲೆಯ ಹೊಸದುರ್ಗ ತಾಲೂಕಿನ ವಾಣಿಯಂಪಾರೆ ಸಮೀಪದ ಇತಿಹಾಸ ಪ್ರಸಿದ್ಧ ಉದಯಗಿರಿ ಶ್ರೀ ಮಹಾಕಾಳಿ ದೇವಾಲಯದಲ್ಲಿ ಸಪ್ತ ದಿನಗಳ ಭಜನಾ ಪ್ರದಕ್ಷಿಣೆ ಹಾಗೂ ಪ್ರತಿಷ್ಠಾ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಆರಾಧನೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಶ್ರೀ ಮಹಾಕಾಳಿ ಕ್ಷೇತ್ರಕ್ಕೆ ಕೋಟೆಯಾರ್ ಸಮಾಜದ ಯುವಕ ಸಮಿತಿಯಿಂದ ನಿರ್ಮಿಸಲಾದ ನೂತನ ಮುಖ್ಯದ್ವಾರದ ಲೋಕಾರ್ಪಣೆ ನೆರವೇರಿತು. ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರು ಹಾಗೂ ಬಾಂಧವರು ಉಪಸ್ಥಿತರಿದ್ದು, ಧಾರ್ಮಿಕ ಆಚರಣೆಗಳು ಸಾಂಪ್ರದಾಯಿಕವಾಗಿ ನಡೆದವು.

Read More

ಬ್ರಹ್ಮಾವರ: ಮನೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ – ಆರೋಪಿಯ ಬಂಧನ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾರ್ಕೂರು ನಿವಾಸಿ ಪ್ರವೀಣ್ ಕುಮಾರ್ ಕೆ ಬಂಧಿತ ಆರೋಪಿಯಾಗಿದ್ದು, ಅವರಿಂದ ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 7,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹೇರಾಡಿ ಗ್ರಾಮದ ನಿವಾಸಿ ಎಂ. ಮಂಜುನಾಥ ರಾವ್ ಹಾಗೂ ಅವರ ಪತ್ನಿ ಮನೆಗೆ ಬೀಗ ಹಾಕಿ ಬಾರ್ಕೂರಿನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ,…

Read More

ಬೈಕ್‌ಗೆ ಲಾರಿ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ. ನಡುಪದವು ಅಂಬೇಡ್ಕರ್ ಕಾಲನಿಯ ಬೇಬಿ ಅವರ ಪುತ್ರ ಸುಶಾಂತ್ (23) ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ಗುರುವಾರ ಕಂಬಳಪದವು ಬಳಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಶಾಂತ್ ರಸ್ತೆ ಮೇಲೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಈ ಘಟನೆ…

Read More

ಬಂಟರ ಮಾತೃ ಸಂಘದಿಂದ ರವೀಂದ್ರನಾಥ ಶೆಟ್ಟಿ ಅವರಿಗೆ ಶ್ರದ್ದಾಂಜಲಿ

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಶೃದ್ದಾಂಜಲಿ ಸಭೆ ಜರಗಿತು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ಆದ…

Read More

ಲೇಬರ್ ಕೋಡ್ ವಿರುದ್ಧ ಹೋರಾಟಕ್ಕೆ ಕೇರಳ LDF ಗೆಲುವು ಬಲ: ಕೆ.ಎನ್. ಉಮೇಶ್

ಮಂಗಳೂರು: ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳ ವಿರುದ್ಧ ದೇಶಾದ್ಯಂತ ಜಂಟಿ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ, ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರದ ಗೆಲುವು ಈ ಹೋರಾಟಕ್ಕೆ ಬಲ ನೀಡಲಿದೆ ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಅಭಿಪ್ರಾಯಪಟ್ಟರು. ಮಂಗಳೂರಿನ ಸಂದೇಶ ಸಂಸ್ಥೆಯ ಸಭಾಂಗಣದಲ್ಲಿ ನಡೆಯುತ್ತಿರುವ ಎರಡು ದಿನಗಳ ಸಿಐಟಿಯು ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೇಬರ್ ಕೋಡ್‌ಗಳನ್ನು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಜಾರಿಗೆ ತರಲು ಮುಂದಾಗಿವೆ….

Read More

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ದಟ್ಟಣೆ

ಸುಬ್ರಹ್ಮಣ್ಯ: ರಾಜ್ಯ ಸರ್ಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ಭಕ್ತರು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ, ಮಹಾಪೂಜೆ ಸೇರಿದಂತೆ ವಿವಿಧ ಸೇವೆಗಳನ್ನು ಭಕ್ತಿಭಾವದಿಂದ ನೆರವೇರಿಸಿ ಧನ್ಯರಾದರು. ದೇವಸ್ಥಾನದಲ್ಲಿ ದಿನಪೂರ್ತಿ ಭಕ್ತರ ಹರಿವು ನಿರಂತರವಾಗಿ ಕಂಡುಬಂತು. ಈ ವೇಳೆ ದೇವಳದ ಅಧಿಕಾರಿಗಳು, ಸಿಬ್ಬಂದಿ ವರ್ಗ, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ…

Read More

ಏಪ್ರಿಲ್ 8 ರವರೆಗೆ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಪಿಲಿಕುಳ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನವು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ ಮುಚ್ಚಲ್ಪಟ್ಟಿರುತ್ತದೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ, ಅಗತ್ಯ ಮೂಲಸೌಕರ್ಯ ದುರಸ್ತಿಗೆ ಅನುಕೂಲವಾಗುವಂತೆ ಮತ್ತು ಸೌಲಭ್ಯದ ಸುರಕ್ಷತೆ ಮತ್ತು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತಾತ್ಕಾಲಿಕವಾಗಿ ಮುಚ್ಚುವುದು ಅಗತ್ಯವಾಗಿದೆ. ಈ ಅವಧಿಯಲ್ಲಿ ಮೃಗಾಲಯವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಸಂದರ್ಶಕರು ಮತ್ತು ಪ್ರವಾಸಿಗರು ದಿನಾಂಕಗಳನ್ನು ಗಮನಿಸಿ ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ. ನಿರ್ವಹಣಾ ಕಾರ್ಯ ಪೂರ್ಣಗೊಂಡ…

Read More
error: Content is protected !!