ಸಂತಡ್ಕ ಮಾಡ ಕ್ಷೇತ್ರದಲ್ಲಿ ಮಹಾರುದ್ರಯಾಗ-ಗಿರಿಜಾ ಕಲ್ಯಾಣೋತ್ಸವ ವೈಭವ

ಸಂತಡ್ಕ, ಜೂನ್ 7: ಲೋಕ ಕಲ್ಯಾಣದ ದಿವ್ಯ ಸಂಕಲ್ಪದೊಂದಿಗೆ ಸಂತಡ್ಕದ ಮಾಡ ಕ್ಷೇತ್ರದಲ್ಲಿ ಮಹಾರುದ್ರಯಾಗ, ಶ್ರೀ ಗಿರಿಜಾ ಕಲ್ಯಾಣೋತ್ಸವ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನಾ ಸಮಾರಂಭವು ಭಾನುವಾರ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಸಮ್ಮಿಲನವಾಗಿದ್ದ ಈ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ದೈವಾನುಗ್ರಹಕ್ಕೆ ಪಾತ್ರರಾದರು. ಕ್ಷೇತ್ರದಲ್ಲಿ ಆಯೋಜಿಸಲಾದ ಮಹಾರುದ್ರಯಾಗವು ಲೋಕ ಕಲ್ಯಾಣ, ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸುವುದು, ಪ್ರಕೃತಿ ವಿಕೋಪಗಳ ಶಮನ ಹಾಗೂ ಸಾಂಕ್ರಾಮಿಕ ರೋಗ-ರುಜಿನಗಳಿಂದ ಜನರು ಮುಕ್ತರಾಗಲಿ ಎಂಬ…

Read More

ಕುಂಬಳೆಯಲ್ಲಿ ‘ಚಿರಂಜೀವಿ’ ಸಂಸ್ಥೆಯಿಂದ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಶೈಕ್ಷಣಿಕ ಸಾಧಕರಿಗೆ ಸನ್ಮಾನ; ಶಿಕ್ಷಣದ ಮಹತ್ವ ಸಾರಿದ ಗಣ್ಯರು

ಕುಂಬಳೆ ಜೂನ್ 8: ಶಿಕ್ಷಣದ ಮೂಲಕ ಸಮಾಜದ ಉನ್ನತಿಗೆ ಕೊಡುಗೆ ನೀಡುವ ಉದ್ದೇಶದಿಂದ ಕುಂಬಳೆಯ ಚಿರಂಜೀವಿ (ರಿ.) ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದಲ್ಲಿ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಗಿದ್ದು, ವಿವಿಧ ಪರೀಕ್ಷೆಗಳಲ್ಲಿ ಸಾಧನೆಗೈದ ಒಂಬತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್…

Read More

ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸಮಾಜಕ್ಕೆ ಪೂರಕ: ಗೃಹಲಕ್ಷ್ಮಿ ಕೋಟಿ ಸಂಭ್ರಮದಲ್ಲಿ ಗ್ರಾಮ ಸ್ವರಾಜ್ಯ ಪ್ರತಿಷ್ಠಾನದ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮೂಡಬಿದ್ರೆ ಸಮಾಜ ಮಂದಿರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಡಬಿದ್ರೆ ತಾಲ್ಲೂಕು, ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ದ.ಕ. ಹಾಗೂ ಬಿಲ್ಲವ ಸಂಘ ಇರುವೈಲು ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ “ಗೃಹಲಕ್ಷ್ಮಿ ಕೋಟಿ ಸಂಭ್ರಮ” ಕಾರ್ಯಕ್ರಮ ಭಾನುವಾರ ಯಶಸ್ವಿಯಾಗಿ ನಡೆಯಿತು. ಮೂಡಬಿದ್ರೆ ತಾಲ್ಲೂಕಿಗೆ ಗೃಹಲಕ್ಷ್ಮಿ ಯೋಜನೆಯಡಿ ₹105 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆ ಸಂಭ್ರಮಾಚರಣೆಗೆ ವಿಶೇಷ ಮೆರುಗು ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಅಡೂರಿನಲ್ಲಿ ಮಣ್ಣುಕುಸಿತ ದುರಂತ: ಇಬ್ಬರು ಬಾಲಕರ ಜೀವಬಲಿ

ಕಾಸರಗೋಡು, ಜೂನ್ 8: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಮೀಪದ ಸಂಚಕ್ಕಡವು ಪ್ರದೇಶದಲ್ಲಿ ಸಂಭವಿಸಿದ ಭೀಕರ ಮಣ್ಣುಕುಸಿತ ದುರಂತದಲ್ಲಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಸಾವನ್ನಪ್ಪಿದವರನ್ನು ಅಬೂಬಕ್ಕರ್ ಅವರ ಪುತ್ರರಾದ ಮುನ್ಸೀರ್ (10) ಹಾಗೂ ಮುಜಮ್ಮಿಲ್ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕನನ್ನು ತಕ್ಷಣವೇ ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇತ್ತೀಚೆಗೆ ಗೃಹಪ್ರವೇಶ ನಡೆದ ಮನೆಯ ಸಮೀಪ…

Read More

ಸೀಮಂತ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದ ಮಿನಿ ಬಸ್ ಪಲ್ಟಿ; ಗಾಯಾಳುಗಳಲ್ಲಿ ಓರ್ವ ಸಾವು

ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಮನೆಗೆ ಹೋಗುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ನಡೆದಿದೆ. ಮಂಗಳೂರು ಮೂಲದ ವಿಕಾಶ್ ಎಂಬಾತ ಮೃತಪಟ್ಟಿದ್ದು ಉಳಿದ ಸುಮಾರು 9 ಮಂದಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿಗೆ ಸೀಮಂತ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ಬಂದವರು ವಾಪಸು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಸುಮಾರು 4 ಗಂಟೆಗೆ ಮಂಗಳೂರು – ಬೆಂಗಳೂರು…

Read More

ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ

ಸುಂಕದಕಟ್ಟೆ, ಜೂನ್ 8: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮ್ಮೇಳನವು ಸುಂಕದಕಟ್ಟೆಯ ಬಿಜೆಪಿ ಕಾರ್ಯಾಲಯದಲ್ಲಿ ಯಶಸ್ವಿಯಾಗಿ ನಡೆಯಿತು. ಸಮಿತಿ ಅಧ್ಯಕ್ಷೆ ವನಿತಾ ಜೆ. ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ಯಶವಂತಿ ಬೆಜ್ಜ, ಪಂಚಾಯತ್ ಸದಸ್ಯರಾದ ಚಂದ್ರಶೇಖರ ವರ್ಕಾಡಿ, ತುಳಸಿ ವರ್ಕಾಡಿ ಹಾಗೂ ರವಿ ಎಂ.ಕೆ. ಕೊಲ್ಯೂರು ಶುಭಾಶಯಗಳನ್ನು ತಿಳಿಸಿ ಮಾತನಾಡಿದರು. ಸಮ್ಮೇಳನದ ಸಮಾರೋಪ ಭಾಷಣವನ್ನು ಬಿಎಂಎಸ್ ಜಿಲ್ಲಾ…

Read More

ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ನಾಸೀರ್ ಆಯ್ಕೆ

ಮಂಗಳೂರು: ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹಿಳಾ ಘಟಕದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ಭಾನು ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ ಅವರ ಶಿಫಾರಸಿನ ಮೇರೆಗೆ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ರಾಜ್ಯ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ರಮೀಜಾ ಭಾನು ಅವರಿಗೆ ನೇಮಕಾತಿ ಆದೇಶ ಪತ್ರವನ್ನು…

Read More

‘ಭರವಸೆಯ ಬೆಳಕು’ ಹಾಗೂ ‘ಭರವಸೆಯ ಶಿಕ್ಷಣ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ “ಭರವಸೆಯ ಬೆಳಕು (Light of Hopes) – Student Achievement Award 2026” ಹಾಗೂ “ಭರವಸೆಯ ಶಿಕ್ಷಣ ರತ್ನ (Light of Hopes – Teachers Achievement Award 2026)” ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ…

Read More

ಕೊಟ್ಟಿಯೂರು ದೇವಸ್ಥಾನದಲ್ಲಿ ಕನ್ನಡಿಗರಿಗೆ ಅವಮಾನ? ಭಕ್ತರ ಆಕ್ರೋಶಕ್ಕೆ ಕಾರಣವಾದ ಅವ್ಯವಸ್ಥೆ!

ಕಣ್ಣೂರು: ಕೇರಳದ ಪ್ರಸಿದ್ಧ ಕೊಟ್ಟಿಯೂರು ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ವೈಶಾಖ ಮಹೋತ್ಸವದ ವೇಳೆ ಕನ್ನಡಿಗ ಭಕ್ತರು ಅನುಭವಿಸಿದ ಕಹಿ ಘಟನೆಗಳು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿವೆ. ಕರ್ನಾಟಕದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದರೂ, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೇ ಅವ್ಯವಸ್ಥೆ ಹಾಗೂ ದುರ್ವರ್ತನೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಸೆಳೆಯುವ ಈ ಪವಿತ್ರ ಕ್ಷೇತ್ರದಲ್ಲಿ ಈ ಬಾರಿ ಕನ್ನಡಿಗರು ನೂಕುನುಗ್ಗಲು, ತಳ್ಳಾಟ ಹಾಗೂ ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ತೀವ್ರ ಅಸಮಾಧಾನ…

Read More

ಫಿಟ್ ಇಂಡಿಯಾ ಅಭಿಯಾನಕ್ಕೆ ಬಲ: ವಿಶ್ವ ಸೈಕಲ್ ದಿನದಂದು ಮಂಗಳೂರಿನಲ್ಲಿ ನೂರಾರು ಸೈಕ್ಲಿಸ್ಟ್‌ಗಳ ಭಾಗವಹಿಸುವಿಕೆ

ಮಂಗಳೂರು, ಜೂನ್ 7: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ (MY Bharat), ದಕ್ಷಿಣ ಕನ್ನಡ ವತಿಯಿಂದ “ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್” ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ “ಸಂಡೇಸ್ ಆನ್ ಸೈಕಲ್” ಸೈಕಲ್ ಜಾಥಾವನ್ನು ಭಾನುವಾರ ಯಶಸ್ವಿಯಾಗಿ ಆಯೋಜಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‌ಎಸ್‌ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್…

Read More
error: Content is protected !!