ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ
ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್.ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ…