ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ಕಿಸೆಯಲ್ಲಿದ್ದ ಲಕ್ಷ ರೂಪಾಯಿಗಳನ್ನು ಕಳವು ಮಾಡಿದ್ದ ಆರೋಪಿ ಬಂಧನ.
ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ಕಿಸೆಯಲ್ಲಿದ್ದ ಲಕ್ಷ ರೂಪಾಯಿಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರು ತಿಂಗಳ ಬಳಿಕ ಕಳ್ಳತನ ಮಾಡಿದ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ತ್ರಿಶೂರ್ ಜಿಲ್ಲೆಯ ಕೇರಳ ರಾಜ್ಯದ ನಜೀರ್ ಪುನ್ನಯ್ಯೂರು ಎಂಬಾತನ ಬಂಧಿಸಲಾಗಿದೆ. ಅಗಸ್ಟ್ 15 ರಂದು ಕುಂದಾಪುರದ ನಿವಾಸಿಯಾಗಿರುವ ರಂಗನಾಥ ಬೆಳ್ಳಾಲ ಅವರು ಕೊಟ್ಟಿಗೆ ಹಾರಕ್ಕೆ ಹೋಗುವ ಉದ್ದೇಶದಿಂದ ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಇವರ ಕಿಸೆಯಲ್ಲಿದ್ದ 50…