ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು ಕೋರ್ಸ್‌ಗಳ ಶುಭಾರಂಭ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಯು.ಟಿ. ಖಾದರ್ ಒತ್ತು

ಅಡ್ಯಾರ್‌ನಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮಿಫ್ಸೆ ಮಿನ್ನರ್ವ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು) ಸಂಯೋಜಿತ ಕೋರ್ಸ್‌ಗಳ ಲೋಕಾರ್ಪಣೆ ಸಮಾರಂಭವು ಇಂದು ವಿಜೃಂಭಣೆಯಿಂದ ನಡೆಯಿತು. ಬೆಳಗಾವಿಯ ವಿ.ಟಿ.ಯು ಅಧಿಕೃತ ಸಂಯೋಜನೆಗೆ ಕಾಲೇಜು ಒಳಪಟ್ಟಿರುವುದು ಈ ಸಂಸ್ಥೆಗೆ ಮಹತ್ವದ ಶೈಕ್ಷಣಿಕ ಮೈಲಿಗಲ್ಲಾಗಿದ್ದು, ಗಣ್ಯರ ಸಮ್ಮುಖದಲ್ಲಿ ಅದನ್ನು ಸಂಭ್ರಮಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ವಿದ್ಯಾರ್ಥಿಗಳು ಕೇವಲ ಪದವಿಗಾಗಿ ಓದದೆ, ಜೀವನದಲ್ಲಿ ನೆರವಾಗುವ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇಂದಿನ ದಿನಗಳಲ್ಲಿ ಇಂಜಿನಿಯರಿಂಗ್…

Read More

ಮಂಗಳೂರಿನಲ್ಲಿ ‘ಫಿಸಿಯೋಕಾನ್-2026’ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್ 10-11ರಂದು

ಸೌತ್ ಕೆನರಾ ಫಿಸಿಯೋಥೆರಫಿ ಟೀಚರ್ಸ್‌ ಅಸೋಸಿಯೇಶನ್ ವತಿಯಿಂದ ಎ.10 ಮತ್ತು 11ರಂದು ಅಂತಾರಾಷ್ಟ್ರೀಯ ಭೌತ ಚಿಕಿತ್ಸೆಯ ಸಮ್ಮೇಳನ ‘ಮಂಗಳೂರು ಫಿಸಿಯೋಕಾನ್-2026’ ಕಾರ್ಯಕ್ರಮ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ನ ಅಧ್ಯಕ್ಷ ಡಾ.ಯು.ಟಿ. ಇಫಿಕಾರ್ ಫರೀದ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಎ.10ರಂದು ಬೆಳಗ್ಗೆ 9 ಗಂಟೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆ‌ರ್. ಪಾಟೀಲ್‌ ಉದ್ಘಾಟಿಸಲಿದ್ದು, ವಿಧಾನಸಭೆಯ…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ದಿಂದ ದಾಖಲೆ ಸಾಧನೆ: ₹20,226 ಕೋಟಿ ವ್ಯವಹಾರ, ₹131 ಕೋಟಿ ಲಾಭ

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ), 2025-26ನೇ ಹಣಕಾಸು ವರ್ಷದಲ್ಲಿ ₹20,226.19 ಕೋಟಿಗಳ ದಾಖಲೆಯ ಒಟ್ಟು ವ್ಯವಹಾರ ನಡೆಸಿ ಹೊಸ ಇತಿಹಾಸ ನಿರ್ಮಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಬ್ಯಾಂಕಿನ ವಾರ್ಷಿಕ ಪ್ರಗತಿಯ ಕುರಿತು ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬ್ಯಾಂಕ್ ಕಳೆದ ವರ್ಷಕ್ಕೆ ಹೋಲಿಸಿದರೆ ವ್ಯವಹಾರದಲ್ಲಿ ಶೇ.16.47 ರಷ್ಟು ಏರಿಕೆ…

Read More

ಮಂಗಳೂರಿನ ಪಿ.ಎ. ಕಾಲೇಜಿನಲ್ಲಿ ರಾಗಿಂಗ್ ಗುಂಪು ಘರ್ಷಣೆ: ವಿದ್ಯಾರ್ಥಿಗಳ ಆತಂಕ

ಮಂಗಳೂರು: ವಿದ್ಯೆ ಕಲಿಯಲು ಪವಿತ್ರ ತಾಣಗಳಾಗಿರಬೇಕಾದ ಶಿಕ್ಷಣ ಸಂಸ್ಥೆಗಳು ಇಂದು ರಣರಂಗವಾಗುತ್ತಿರುವ ಉದಾಹರಣೆként ಮಂಗಳೂರಿನ ಪ್ರತಿಷ್ಠಿತ P.A. College of Engineering ನಲ್ಲಿ ನಡೆಯುತ್ತಿರುವ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಕಾಲೇಜಿನಲ್ಲಿ ಪ್ರತಿ ತಿಂಗಳು ಐದಾರು ಬಾರಿ ರಾಗಿಂಗ್ ಮತ್ತು ಗುಂಪು ಘರ್ಷಣೆಗಳು ನಡೆಯುತ್ತಿರುವುದು ವರದಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಭವಿಷ್ಯದ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಲಕ್ಷಾಂತರ ರೂಪಾಯಿ ಶುಲ್ಕ ಕಟ್ಟಿಕೊಂಡು ವಿದ್ಯಾಭ್ಯಾಸಕ್ಕಾಗಿ ದೂರದ ಊರುಗಳಿಂದ ಹಾಗೂ ಇತರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಇಲ್ಲಿ ಇಂತಹ ಘಟನೆಗಳಿಗೆ ಒಳಗಾಗುತ್ತಿರುವುದು…

Read More

ಏಪ್ರಿಲ್ 7 ಮತ್ತು 8 ಕ್ಕೆ ಹರಿಕಥಾ ರಂಗದಲ್ಲಿ ವಿಶಿಷ್ಟ ಪ್ರಯೋಗಕ್ಕೆ ಸಾಕ್ಷಿಯಾಗಲಿದೆ ಕೂಡ್ಲಿನ ಗುಡ್ಡೆ ಮಹಾಲಿಂಗೇಶ್ವರ ದೇವಾಲಯ

ಮಂಗಳೂರು: ಹರಿಕಥಾ ಕಲೆಯ ಮೇರು ಚೇತನವಾದ ದಿವಂಗತ ಡಾ. ಶೇಣಿ ಗೋಪಾಲ ಕೃಷ್ಣ ಭಟ್ಟರ ಜಯಂತ್ಯುತ್ಸವದ ಅಂಗವಾಗಿ ನಾಡಿನ ಕಿರಿಯ ಹಿರಿಯ ೧೨ ಹರಿದಾಸರ ಸಮ್ಮಿಲನ ಕಾರ್ಯಕ್ರಮವು ಕಾಸರಗೋಡು ಕೂಡ್ಲಿನ ಗುಡ್ಡೆ ಮಹಾಲಿಂಗೇಶ್ವರ ದೇವಾಲಯದಲ್ಲಿ ಏಪ್ರಿಲ್ 7 ಮತ್ತು 8ರಂದು ಬೆಳಿಗ್ಗೆ ಗಂಟೆ 9 ರಿಂದ ಸಂಜೆ 6.30 ರ ತನಕ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕರಾದ ಕೂಡ್ಲು ಮಹಾಬಲ ಶೆಟ್ಟಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More

ಎಂ. ಮೋಹನ್ ಆಳ್ವರಿಗೆ ಗೌರವ ಡಾಕ್ಟರೇಟ್ ಘೋಷಣೆ

ಬೆಂಗಳೂರು: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಮಹತ್ವದ ಕೊಡುಗೆ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ಏಪ್ರಿಲ್ 4ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತದೆ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದ ಗ್ರಾಮೀಣ ಪ್ರದೇಶಗಳಿಗೆ ಗುಣಮಟ್ಟದ…

Read More

ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳು: ಜಾಗೃತಿ ಅಭಿಯಾನ – ಪಿ.ಎಂ. ಮಾಲತೇಶ್

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿರುವುದು ಸಂತಸದ ವಿಷಯವಾಗಿದ್ದು, ಈ ಯೋಜನೆಗಳ ಕುರಿತು ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪಿ.ಎಂ. ಮಾಲತೇಶ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮಾರ್ಗದರ್ಶನದಲ್ಲಿ ಕಾರ್ಮಿಕ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ ಹಾಗೂ ನಿಗಮದ ವಿವಿಧ ಯೋಜನೆಗಳ ಮಾಹಿತಿ ಕೈಪಿಡಿ ಮೂಲಕ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ…

Read More

ಅರಿಕ್ಕಾಡಿಯಲ್ಲಿ ಆಲಿ ಚಾಮುಂಡಿ ತೆಯ್ಯಂ ಪ್ರದರ್ಶನ: ಮಾನವ ಸಹೋದರತ್ವದ ಸಂದೇಶ

ಅರಿಕ್ಕಾಡಿ: ಮಾನವ ಸಹೋದರತ್ವದ ಸಂದೇಶವನ್ನು ಸಾರುವ ಅರಿಕ್ಕಾಡಿ ಪಾರೆ ಭಗವತಿ ಆಲಿ ಚಾಮುಂಡಿ ದೈವಸ್ಥಾನದಲ್ಲಿ ಶನಿವಾರ ಬೆಳಿಗ್ಗೆ ಭಕ್ತರ ಮುಂದೆ ರಂಗ ಪ್ರವೇಶ ಮಾಡಿತು. ಮಾರ್ಚ್ 30ರಿಂದ ಆರಂಭವಾದ ದೈವಸ್ಥಾನದ ವಾರ್ಷಿಕ ಉತ್ಸವವು ಏಪ್ರಿಲ್ 6ರಂದು ಸಮಾಪ್ತಿಯಾಗಲಿದ್ದು, ಸಮಾರೋಪ ದಿನದಂದು ಆಲಿಭೂತಂ, ಹೊಸ ಭಗವತಿ ದೈವ ಮತ್ತು ಭಗವತಿ ದರ್ಶನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಉತ್ಸವದ ಅಂಗವಾಗಿ ಎಡನೀರ್ ಮಠಾಧೀಶರಾದ ಸಚ್ಚಿದಾನಂದ ಭಾರತಿ ಸ್ವಾಮೀಜಿ ದೈವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೆ. ಜಗದೀಶ್…

Read More

ಅಂಬಿತಾಡಿ ಗೇರುಕಟ್ಟೆ ರಸ್ತೆ ಬದಿಯ ತೋಡಿನಲ್ಲಿ ತುಂಬಿದ ತ್ಯಾಜ್ಯ: ವಾಹನದಲ್ಲಿ ತ್ಯಾಜ್ಯವನ್ನು ತಂದು ಬಿಸಾಕುತ್ತಿರುವುದಾಗಿ ಸ್ಥಳೀಯರ ದೂರು

ಅಂಬಿತಾಡಿ: ನೂರಾರು ವಾಹನಗಳು ಹಾಗೂ ದಾರಿಹೋಕರು ಸಂಚರಿಸುವ ಅಂಬಿತಾಡಿ–ಗೇರುಕಟ್ಟೆ ರಸ್ತೆಯಲ್ಲಿರುವ ತೋಡನ್ನು ಕಸದ ತೊಟ್ಟಿಯಂತೆ ಬಳಸಲಾಗುತ್ತಿದ್ದು, ಸ್ಥಳೀಯ ನಾಗರಿಕರ ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಹೊರಗಿನಿಂದ ಸಂಚರಿಸುವವರು ಕೂಡ ನಿರ್ಬಂಧವಿಲ್ಲದೆ ಕಸವನ್ನು ಬಿಸಾಡುತ್ತಿರುವುದು ಕಂಡುಬಂದಿದೆ. ಇದಲ್ಲದೆ, ವೈದ್ಯಕೀಯ ತ್ಯಾಜ್ಯವನ್ನು ಕೂಡ ಇಲ್ಲಿ ಎಸೆಯಲಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಇದೀಗ ತೋಡು ಕಸ ತ್ಯಾಜ್ಯದಿಂದ ತುಂಬಿ ತೋಡು ಕಣ್ಮರೆಯಾಗುವ ಸ್ಥಿತಿ ತಲುಪಿದೆ ಇನ್ನೂ ಒಂದು ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗಲಿರುವುದರಿಂದ, ನೀರು ಸರಾಗವಾಗಿ ಹರಿಯಲು ಸಾಧ್ಯವಿಲ್ಲದೆ ಕೃತಕ ನೆರೆ ಸೃಷ್ಟಿಯಾಗಿ…

Read More

ಕಡಂಬಾರು ದೇವಸ್ಥಾನ ವಾರ್ಷಿಕೋತ್ಸವ ಸಮಾಪ್ತಿ: ಭಕ್ತರ ಸಂಭ್ರಮದಲ್ಲಿ ಅಂತಿಮ ದಿನ ಕಾರ್ಯಕ್ರಮಗಳು ನೆರವೇರಿಕೆ

ಕಡಂಬಾರು,: ಕಡಂಬಾರು ದೇವಸ್ಥಾನದ ವರ್ಷಾವಧಿ ಉತ್ಸವದ ಅಂತಿಮ ದಿನ ಭಕ್ತರ ಭಾರೀ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿ ಭಾವದಿಂದ ನೆರವೇರಿದವು. ಅಂತಿಮ ದಿನದ ಪ್ರಮುಖ ಕಾರ್ಯಕ್ರಮವಾಗಿ ಹಗಲು ದರ್ಶನಬಲಿ ಹಾಗೂ ರಾಜಾಂಗಣ ಪ್ರಸಾದ ನಡೆಯಿತು. ಈ ವೇಳೆ ಶ್ರೀ ದೇವರ ದರ್ಶನ ಬಲಿಗೆ ವಿಶೇಷವಾಗಿ ಆಯೋಜಿಸಿದ್ದ ಚೆಂಡೆ ಸುತ್ತು ಭಕ್ತರ ಗಮನ ಸೆಳೆಯಿತು. ಸುಮಾರು 20ರಿಂದ 25 ಕಲಾವಿದರ ತಂಡದಿಂದ ಚೆಂಡೆ, ಡೋಲು ಹಾಗೂ ಚಕ್ರತಾಳಗಳ ಮೇಳೈಸಿದ ವಾದ್ಯಗೋಷ್ಠಿ ಸಂಭ್ರಮವನ್ನು ಹೆಚ್ಚಿಸಿತು. ಇದರ…

Read More
error: Content is protected !!