ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆನೆಗುದಿಗೆ ಬಿದ್ದಿರುವುದನ್ನು ಖಂಡಿಸಿ, ಸೂರಿಂಜೆ 159ನೇ ಬೂತ್‌ನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಮನವಿ ಪತ್ರ ಸಲ್ಲಿಸಿ ಎಚ್ಚರಿಸಿದ್ದಾರೆ.ಸೂರಿಂಜೆ ಹೋಬಳಿಯ ವ್ಯಾಪ್ತಿಗೆ ಬರುವ ಸೂರಿಂಜೆ- ಪುಚ್ಚಾಡಿ ರಸ್ತೆಯು ಕಳೆದ ಹದಿನೈದು ವರ್ಷಗಳಿಂದ ಯಾವುದೇ ಡಾಮರೀಕರಣ ಕಾಣದೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯ ತುಂಬಾ ಹೊಂಡ-ಗುಂಡಿಗಳು…

Read More

ಹಸಿವು,ಬಡತನ, ದಾರಿದ್ರ್ಯ, ನಿರುದ್ಯೋಗ ಮುಕ್ತ ಸಮಾಜದ ನಿರ್ಮಾಣ ಕಮ್ಯುನಿಸ್ಟ್ ಸಿದ್ದಾಂತದಿಂದ ಮಾತ್ರ ಸಾಧ್ಯ – ಕೃಷ್ಣಪ್ಪ ಸಾಲ್ಯಾನ್

ಸಮಾಜವಾದಿ ವ್ಯವಸ್ಥೆಯಡಿಯಲ್ಲಿ ಕಳೆದ 8 ದಶಕಗಳಿಂದ ಮುನ್ನಡೆಯುತ್ತಿರುವ ಚೈನಾ ದೇಶವು ಆರ್ಥಿಕ, ಸಾಮಾಜಿಕ ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಜಗತ್ತಿಗೆ ತಾನೇ ದೊಡ್ಡಣ್ಣನಂತೆ ವರ್ತಿಸುವ ಅಮೇರಿಕಾವನ್ನೂ ಮೀರಿ ಅಭಿವೃದ್ಧಿಯ ನಾಗಾಲೋಟದಲ್ಲಿ ಸಾಗುತ್ತಿದೆ. ಸಮಾಜವಾದಿ ಪುಟ್ಟ ರಾಷ್ಟ್ರ ಕ್ಯೂಬಾ ಕೊರೋನಾ ಸಂದರ್ಭದಲ್ಲಿ ಅಮೇರಿಕಾ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ವೈದ್ಯರನ್ನು ಕಳುಹಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆ ಮಾಡಿದೆ.ಇತರ ಸಮಾಜವಾದಿ ರಾಷ್ಟ್ರಗಳಾದ ವಿಯೆಟ್ನಾಂ, ಉತ್ತರ ಕೊರಿಯಾ ಲಾವೋಸ್ ದೇಶಗಳು ಉತ್ತಮ ಆರ್ಥಿಕತೆಯನ್ನು ಸಾಧಿಸುವ ಮೂಲಕ…

Read More

ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ: ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ

ಮಂಗಳೂರು, ಜೂನ್ 7: ಕಾರ್ಮಿಕರ ಸಮಸ್ಯೆಗಳ ಪರಿಣಾಮಕಾರಿ ಪರಿಹಾರ, ಸಂಘಟನೆಯ ವಿಸ್ತರಣೆ, ಯೂನಿಯನ್‌ಗಳ ಸಬಲೀಕರಣ ಹಾಗೂ ಹೊಸ ಕ್ಷೇತ್ರಗಳ ಕಾರ್ಮಿಕರನ್ನು ಸಂಘಟಿಸುವ ಸಮಗ್ರ ಕಾರ್ಯಯೋಜನೆಯೊಂದಿಗೆ ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾರ್ಯಾಲಯದ “ಪ್ರಭಾಕರ ಘಾಟೆ” ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ವಿ. ರಾಧಾಕೃಷ್ಣನ್ ವೇಲು ಮಾತನಾಡಿ, ಕಾರ್ಮಿಕ ಸಂಘಟನೆಗಳು ಬಲಿಷ್ಠವಾಗಬೇಕಾದರೆ ಆಡಳಿತಾತ್ಮಕ ಶಿಸ್ತು,…

Read More

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಹೆಸರಿನ ಕೇರಳ- ಕರ್ನಾಟಕ ಸರಕಾರದ ಜಂಟಿ ಟ್ರಸ್ಟ್ ಸಮಿತಿ ಪುನರ್ ರಚಿಸಲು ಆಗ್ರಹ

ರಾಷ್ಟ್ರ ಮರೆತಿರುವ ರಾಷ್ಟ್ರ ಕವಿಯ ಸ್ಮಾರಕ – ಎಲ್. ಜಿ ಜ್ಯೋತೀಶ್ವರ ಕನ್ನಡದ ಪ್ರಥಮ ರಾಷ್ಟ್ರಕವಿ ಎಂದೇ ಪ್ರಸಿದ್ಧರಾದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ಹುಟ್ಟೂರು ಸದ್ಯ ಕೇರಳದಲ್ಲಿರುವ ಮಂಜೇಶ್ವರದ “ರಾಷ್ಟ್ರಕವಿ ನಿವಾಸ”ಕ್ಕೆ,ಅಂತರರಾಷ್ಟ್ರೀಯ ಬಹುಭಾಷಾ ವಿದ್ವಾಂಸ, ಸಾಂಸ್ಕೃತಿಕ ರಾಯಭಾರಿ, ಕೇಂದ್ರ,ರಾಜ್ಯ ಸರ್ಕಾರಕ್ಕೆ ಸಂಬಂಧ ಪಟ್ಟ ಕನ್ನಡ, ಹಿಂದಿ, ಇಂಗ್ಲಿಷ್, ಭಾಷೆಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಸಾಕ್ಷ್ಯ ಚಿತ್ರಗಳನ್ನು, ನುಡಿ ಚಿತ್ರಗಳನ್ನು, ಜಾಹೀರಾತುಗಳಿಗೆ ನಿರೂಪಣ ಸಾಹಿತ್ಯವನ್ನು ರಚಿಸಿರುವ ಎಲ್. ಜಿ.ಜ್ಯೋತೀಶ್ವರ ಬೆಂಗಳೂರು ಅವರು ಕಾಸರಗೋಡು, ದಕ್ಷಿಣ ಕನ್ನಡ,…

Read More

ಜೂನ್ 7ರಂದು ಸುಂಕದಕಟ್ಟೆಯಲ್ಲಿ ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ

ಉಪ್ಪಳ, ಜೂ. 6:ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮಿತಿಯ ವತಿಯಿಂದ ಜೂನ್ 7ರಂದು ಆದಿತ್ಯವಾರ ಸಂಜೆ 3 ಗಂಟೆಗೆ ಸುಂಕದಕಟ್ಟೆಯ ಬಿ.ಜೆ.ಪಿ. ಕಾರ್ಯಾಲಯದಲ್ಲಿ ಪಂಚಾಯತ್ ಸಮ್ಮೇಳನ ನಡೆಯಲಿದೆ. ಈ ಕುರಿತು ಸಂಘದ ಅಧ್ಯಕ್ಷೆ ವನಿತಾ ಜೆ. ನಾಯಕ್ ಹಾಗೂ ಕಾರ್ಯದರ್ಶಿ ರವೀಂದ್ರ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. “ಶ್ರಮವೇ ಆರಾಧನೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮಜ್ದೂರ್ ಸಂಘವು ಕಾರ್ಮಿಕರು ತಮ್ಮ ಕರ್ತವ್ಯವನ್ನು ರಾಷ್ಟ್ರಸೇವೆಯೆಂದು ಭಾವಿಸಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸುವ ಉದ್ದೇಶ ಹೊಂದಿದೆ. ಕಾರ್ಮಿಕರು, ಮಾಲಕರು…

Read More

ಕಳ್ಳತನ ಮತ್ತು ಪರಾರಿ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು:ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಲ್ಲಿ ಶಿಕ್ಷೆ ಪ್ರಕಟಗೊಂಡಿದೆ. ಸುಳ್ಯ ಪೊಲೀಸ್ ಠಾಣಾ 96/2006 ಕಲಂ: 457, 380 ಐ.ಪಿ.ಸಿ ಹಾಗೂ 103/2018 ಕಲಂ:224 ಐ.ಪಿ.ಸಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎ ಎಮ್ ಅಜೀಜ್ ಎಂಬಾತನ ವಿರುದ್ದ ಎಸ್ ಸಿ ಜೆ ಮತ್ತು ಜೆ ಎಮ್‌ಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾದೀಶರು ಆರೋಪಿ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಅ.ಕ್ರ: 103/2018 ರಲ್ಲಿ ಒಂದು ವರ್ಷಗಳ ಸಾದಾ ಕಾರಗೃಹ ವಾಸ…

Read More

ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್‌ನಲ್ಲಿ ತನೀಶಾ ಕಾರ್ತಿಕ್ ರಾಜ್ಯ ಪ್ರಥಮ, ಕರಾವಳಿ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ

ಬೆಂಗಳೂರು, ಜೂ. 6: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಶುಕ್ರವಾರ ಪ್ರಕಟಿಸಿದರು. ಈ ಬಾರಿ ಸಿಇಟಿಗೆ 3,30,646 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 3,09,014 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 2,92,782 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆರ್.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ತನೀಶಾ ಕಾರ್ತಿಕ್ 99.44 ಶೇಕಡಾ…

Read More

ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದರು. ಈ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿರುತ್ತಾರೆ. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ಎ,ಜುಬೈರ್, ಮುಹಮ್ಮದ್ ಸವಾದ್ ಹಾಗೂ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಎಂಬುದಾಗಿ…

Read More

ನೀಟ್ ಅಕ್ರಮ ಆರೋಪ: ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸದಸ್ಯರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಿಕ್ಷಣ ಕ್ಷೇತ್ರದ ಅಕ್ರಮಗಳು ಮತ್ತು ಪರೀಕ್ಷಾ ಹಗರಣಗಳ ವಿರುದ್ಧ ಒಂದು ತಿಂಗಳಿನಿಂದ…

Read More

ನಕಾರಾತ್ಮಕ ಚಿಂತನೆ ಬಿಟ್ಟು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಬಿ.ಎ. ವಿವೇಕ ರೈ

ಉಡುಪಿ: ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಕಲಾರಂಗದ ಐವೈಸಿ ಸಭಾಭವನದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.ಯುವಜನತೆ ಫೇಸ್‌ಬುಕ್‌ಗಳಂತಹ…

Read More
error: Content is protected !!