ಜ. 31 ಮತ್ತು ಫೆ. 1 ರಂದು ಟಿ ಎಂ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ”ಆಯುಷ್ ಹಬ್ಬ”ದ ಆಮಂತ್ರಣ ಪತ್ರಿಕೆ ಉದ್ಘಾಟನೆ ಮಾಡಿದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್… !

ಮಂಗಳೂರು:ಆಯುಷ್ ಹಬ್ಬ ಸಮಿತಿ 2026, ವತಿಯಿಂದ ಆಯುಷ್ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತು ಎಲ್ಲಾ ಆಯುಷ್ ವೈದ್ಯರುಗಳ ಜಂಟಿ ಆಶ್ರಯದಲ್ಲಿ ಜ. 31 ಮತ್ತು ಫೆ. 1 ರಂದು ಟಿ ಎಂ ಪೈ ಕನ್ವೆನ್ಷನ್ ಹಾಲ್ ನಲ್ಲಿ ಆಯುಷ್ ಹಬ್ಬ ನಡೆಯಲಿದ್ದು ಅದರ ಪ್ರಚಾರದ ಭಾಗವಾಗಿ ಆಮಂತ್ರಣ ಪತ್ರಿಕೆಯ ಉದ್ಘಾಟನೆಯನ್ನು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಕ್ರ್ಯೂಟ್‍ಹೌಸ್‍ನಲ್ಲಿ ನಡೆಸಿಕೊಟ್ಟರು . ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು , ಈ ಹಿಂದೆ ರಾಜ್ಯದ…

Read More

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ

ಮಂಜೇಶ್ವರ : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯು ಬದಿಯಡ್ಕ ವೀಣಾವಾದಿನಿ ಸಂಗೀತ ಪೀಠಮ್ ನಲ್ಲಿ ಸಂಘಟನೆಯ ಅಧ್ಯಕ್ಷ ರವಿ ನಾಯ್ಕಪ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಡಿ ವೈ ಎಸ್ಪಿ ಡಾಕ್ಟರ್ ವಿ ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭ ವೇದಿಕೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಆಯ್ಕೆಯಾದ ಪತ್ರಕರ್ತರ ಕುಟುಂಬ ಸದಸ್ಯರಾದ ಅಶ್ವಥಿ ಅಶೋಕ್, ವಿದ್ಯಾಕುಮಾರಿ, ಪ್ರಿಯಾಂಕ, ಶ್ಯಾಂ ಪ್ರಸಾದ್ ಸರಳಿ, ಸುನೀನಾ ಹಾಗೂ ಕನ್ನಡಿಗ ರಾಮಪ್ಪ ಮಂಜೇಶ್ವರ ಎಂಬಿವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ…

Read More

ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದ ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ 11ರ ಹರೆಯದ ಪೋರ

ಮಂಗಳೂರು:ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ.ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ. ಮಂಗಳೂರಿನ ಅತ್ತಾವರ ಮೂಲದ ವಾಣಿ ಮೆಂಡನ್ ಎಂಬವರ ಪುತ್ರನಾಗಿರುವ ಅಯಾನ್ ಮೆಂಡನ್ ತನ್ನ 6ನೇ ವಯಸ್ಸಿನಲ್ಲೇ ಪರ್ವತಾರೋಹಣ ಆರಂಭಿಸಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ…

Read More

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 2 : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ…

Read More

ಶತಮಾನದ ಹೊಸ್ತಿಲಲ್ಲಿರುವ ಕುಳಾಲು ಕೊಳ್ನಾಡು ಸರ್ಕಾರಿ ಶಾಲೆಯ ಗತವೈಭವ ಮರುಕಳಿಕೆ

ನೂತನ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅಭಿಮತ ಕುಳಾಲು ಕೊಳ್ನಾಡಿನ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶತಮಾನದ ಹೊಸ್ತಿಲಲ್ಲಿ ನಿಂತಿದ್ದು, ಶಾಲೆಯ ಗತವೈಭವ ಮರುಕಳಿಸುವಂತಾಗಿದೆ ಎಂದು ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷರೂ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಯೂ ಆದ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನ ಮೇರೆಗೆ,…

Read More

ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ

ಮಂಜೇಶ್ವರ: ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಂತೆ ಮತ್ತೊಂದೆಡೆ ಮತ್ತೊಂದೆಡೆ ಮರಳು ಸಾಗಾಟ ದಂಧೆ ತೀವ್ರಗೊಂಡಿದೆ. ಕಳೆದ ಮಧ್ಯ ರಾತ್ರಿಯೂ ಹೊಯ್ದೆ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಎಸ್‌ಐ ಶ್ರೀಜೇಶ್ ನೇತೃತ್ವದಲ್ಲಿ ನಡೆಸಿದ ಕಾರ್ಯಾ ಚರಣೆಯಲ್ಲಿ ಮರಳು ತುಂಬಿದ ಎರಡು ಟಿಪ್ಪರ್ ಲಾರಿಗಳನ್ನು ವಶಡಿಸಲಾಗಿದೆ. ಒಂದು ಲಾರಿಯನ್ನು ಕುಂಬಳೆ ಅಂಡರ್‌ಪಾಸ್‌ನಿಂದ ಹಾಗೂ ಇನ್ನೊಂದು ಲಾರಿಯನ್ನು ಮೊಗ್ರಾಲ್ ಅಂಡರ್‌ಪಾಸ್‌ನಿಂದ ವಶಪಡಿಸಲಾಗಿದೆ. ಪೊಲೀಸರನ್ನು ಕಂಡೊಡನೆ ಲಾರಿಗಳನ್ನು ಉಪೇಕ್ಷಿಸಿ ಚಾಲಕರು ಪರಾರಿಯಾಗಿದ್ದಾರೆ. ಬಳಿಕ…

Read More

ಕಾಞಂಗಾಡ್ ಜಿಲ್ಲಾ ಜೈಲಿನಲ್ಲಿ ರಿಮಾಂಡ್‌ನಲ್ಲಿದ್ದ ಆರೋಪಿಯೊಬ್ಬ ಪರಾರಿಯಾಗಲು ಯತ್ನ

ಮಂಜೇಶ್ವರ : ಜಿಲ್ಲೆಯ ಕಾಞಂಗಾಡ್ ಜಿಲ್ಲಾ ಜೈಲಿನಲ್ಲಿ ರಿಮಾಂಡ್‌ನಲ್ಲಿದ್ದ ಆರೋಪಿಯೊಬ್ಬ ಪರಾರಿಯಾಗಲು ಯತ್ನಿಸಿದ್ದಾನೆ.ಬದಿಯಡ್ಕ ಪೊಲೀಸರು ದಾಖಲಿಸಿದ ಕಳವು ಪ್ರಕರಣದ ಆರೋಪಿ ನೆಲ್ಲಿಕಟ್ಟೆ ಆಮೂಸ್ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುವ ಟಿ.ಎಂ. ಅಬ್ದುಲ್ ಸುಹೈಲ್ ಎಂಬಾತನ ವಿರುದ್ಧ ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜೈಲು ಸುಪರಿಂಟೆಂಡೆಂಟ್ ನೀಡಿದ ದೂರಿನಂತೆ, ಶುಕ್ರವಾರ ಸೆಲ್‌ನಿಂದ ಹೊರಬಂದ ಆರೋಪಿ ಮರಳಿ ಜೈಲಿಗೆ ಪ್ರವೇಶಿಸುವ ಸಂದರ್ಭ ಅಡುಗೆ ಕೋಣೆಯ ಮೇಲ್ಭಾಗಕ್ಕೆ ಹತ್ತಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. 10 ಸಾವಿರ ರೂಪಾಯಿ ಕಳವು ಪ್ರಕರಣದಲ್ಲಿ…

Read More

ಟೈಮಿಂಗ್ ವಿಷಯದಲ್ಲಿ ಬಸ್ ನೌಕರರ ಮಧ್ಯೆ ಮಾರಾಮಾರಿ

ಮಂಜೇಶ್ವರ: ಟೈಮಿಂಗ್ ವಿಷಯದಲ್ಲಿ ಬಸ್ ನೌಕರರ ಮಧ್ಯೆ ಮಾರಾಮಾರಿ ಟಿಕೆಟ್ ಉಪಕರಣ ಹಾಗೂ ಮೊಬೈಲ್ ಫೋನ್ ಕಿತ್ತೆಸೆದು ಬಿಸಾಡಿ ಹಾನಿಗೊಳಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಕುಂಬಳೆ ಬದಿಯಡ್ಕ ರಸ್ತೆಯಲ್ಲಿ ಬಸ್ ಶೆಲ್ಟರ್ ನಲ್ಲಿ ಈ ಘಟನೆ ನಡೆದಿದೆ.ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತಿದ್ದ ಬಸ್ಸು ಹಾಗೂ ಅದೇ ಭಾಗಕ್ಕೆ ತೆರಳುತಿದ್ದ ಕರ್ನಾಟಕ ಸಾರಿಗೆ ಬಸ್ಸು ಕುಂಬಳೆಗೆ ತಲುಪಿದಾಗ ಸಾರಿಗೆ ಬಸ್ಸು ಚಾಲಕ ಖಾಸಗಿ ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಿದ್ದಾನೆ. ಈ ಮಧ್ಯೆ ಟೈಮಿಂಗ್ ವಿಷಯಲ್ಲಿ ಎರಡೂ ಬಸ್ಸು ಸಿಬ್ಬಂದಿಗಳ ಮಧ್ಯೆ…

Read More

50 ಲಕ್ಷ ಆವಿಷವೊಡ್ಡಿ ಕೇಸ್ ಕ್ಲೋಸ್ ಮಾಡುವಂತೆ ಕೋರಿದ್ದ ಜಗನ್ನಿವಾಸ್ ರಾವ್: ಕಾಂಗ್ರೆಸ್ ವಕ್ತಾರೆ ಪ್ರತಿಭಾ ಕುಳಾಯಿ

ಮಂಗಳೂರು: ಪೂಜಾ ಆಚಾರ್ಯಳಿಗೆ ಹುಟ್ಟಿದ ಮಗು ನನ್ನದು ಅಲ್ಲವೇ ಅಲ್ಲ ಎಂದು ಕೃಷ್ಣ ಜೆ.ರಾವ್ ಹೇಳುತ್ತಾನೆ. ಆದರೆ ಡಿ ಎನ್ ಎ ರಿಪೋರ್ಟ್ ನಲ್ಲಿ ಅವನದ್ದೇ ಮಗು ಎಂಬುದಾಗಿ ಸಾಬೀತಾಗಿದೆ . ಆರೋಪಿ ಕೃಷ್ಣನಲ್ಲಿ ವಿವಾಹವಾಗುವಂತೆ ಹಲವು ಬಾರಿ ಕೇಳಿಕೊಂಡರು ಆತ ಅದಕ್ಕೆ ಸಮ್ಮತಿಸುತ್ತಿಲ್ಲ. ಪೂಜಾ ಆಚಾರ್ಯ ಏಳೂವರೆ ತಿಂಗಳ ಗರ್ಭಿಣಿಯಾಗಿರುವಾಗಲೇ ಜಗನ್ನಿವಾಸ್ ರಾವ್ ೮ ಲಕ್ಷದ ಹಣದ ಆವಿಷವನ್ನು ಒಡ್ಡಿ ಮಗುವನ್ನು ಹೊಟ್ಟೆಯಿಂದ ತೆಗೆಸುವಂತೆ ಒತ್ತಾಯಿಸಿದ್ದ ಅದು ಸಾಧ್ಯವಾಗಲಿಲ್ಲ . ನಂತರ ಹುಟ್ಟಿದ ಮಗುವನ್ನು ಸಾಂತ್ವನ…

Read More

ಶೀಘ್ರವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ :- ಶಾಸಕ ಕಾಮತ್

ಮನಪಾ ವ್ಯಾಪ್ತಿಯಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ಪಾಲಿಕೆಯ ವಾರ್ಡ್ ಸಂಖ್ಯೆ 25, 26, 27, 41 ಹಾಗೂ 53 ರಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ಎದುರಾದ ತಕ್ಷಣ ಜನರ ಸಮಸ್ಯೆಗೆ ತುರ್ತಾಗಿ…

Read More
error: Content is protected !!