ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಸೆ. 14ರಂದು ಆಚರಿಸಲಾಗುವುದು- ಎಸ್ ಪ್ರದೀಪ್ ಕುಮಾರ್ ಕಲ್ಕೂರ
ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಲು ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಉದ್ದೇಶದಿಂದ ಕಳೆದ 43ವರ್ಷಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸೆಪ್ಟೆಂಬರ್ 14 ರವಿವಾರ ಆಚರಿಸಲಾಗುವುದೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೃಷ್ಣಾಷ್ಟಮಿಯಂದು ಬೆಳಗ್ಗೆ 9.00ರಿಂದ ಶ್ರೀ ಕೃಷ್ಣ…