ಭದ್ರತೆ ನೆಪದಲ್ಲಿ ಮೀನುಗಾರರ ವ್ಯಾಪಾರ ಬಂದ್: ಸಿಎಂ ಆಕ್ರೋಶ

ಮಂಗಳೂರು: ಮೀನುಗಾರರ ಸಮಸ್ಯೆ ಹಾಗೂ ವ್ಯಾಪಾರ ವಹಿವಾಟು ಪರಿಶೀಲಿಸಲು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭದ್ರತೆಯ ಕಾರಣಕ್ಕೆ ವ್ಯಾಪಾರ ಚಟುವಟಿಕೆ ಸ್ಥಗಿತಗೊಳಿಸಿದ್ದ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮೀನುಗಾರರ ವ್ಯಾಪಾರ ಬಂದ್ ಮಾಡಿಸಲು ಯಾರು ಸೂಚನೆ ನೀಡಿದ್ದಾರೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ, “ನಾನು ಇಲ್ಲಿಗೆ ಅವರ ವ್ಯಾಪಾರ ಮತ್ತು ಸಮಸ್ಯೆಗಳನ್ನು ಆಲಿಸಲು ಬಂದಿದ್ದೇನೆ. ನನ್ನ ಸೆಕ್ಯುರಿಟಿ ಯಾರಿಗೆ ಬೇಕು?” ಎಂದು ಗರಂ ಆದರು….

Read More

ಕೇವಲ ಕರಾವಳಿಯ ಮೀನು ತಿನ್ನಲು ಸಚಿವ ಸಂಪುಟ ಸಭೆ

ಮಂಗಳೂರಿನಲ್ಲಿ ನಡೆಯಲಿರುವ ಸಭೆ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲೇವಡಿ ಉಡುಪಿ: ಕರಾವಳಿ ಭಾಗದ ಅಭಿವೃದ್ಧಿ ವಿಚಾರವಾಗಿ ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲೇವಡಿ ಮಾಡಿದ್ದಾರೆ. ‘ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ಕರೆದು ಏನು ಮಾಡುತ್ತಾರೆ? ಕೇವಲ ಕರಾವಳಿಯ ಮೀನು ತಿನ್ನಲು ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆಯೇ?’ ಎಂದು ಅವರು ಪ್ರಶ್ನಿಸಿದರು. ಉಡುಪಿಯಲ್ಲಿ ಮಾತನಾಡಿದ ಅವರು, ‘ಹಿಂದೆ ಸಿದ್ದರಾಮಯ್ಯ ಅವರು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ…

Read More

ಮೈಸೂರಿನ ಖ್ಯಾತ ಕವಿ ಡಾ. ತ್ಯಾಗರಾಜ್ ಟಿ. ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಗರಿಮೆ….!

ಕಾಸರಗೋಡು: ಮೈಸೂರಿನ ಖ್ಯಾತ ಕವಿ ಹಾಗೂ ಸಾಹಿತಿ ಡಾ. ತ್ಯಾಗರಾಜ್ ಟಿ. ಅವರು 2026ನೇ ಸಾಲಿನ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ಭವ್ಯ ವೇದಿಕೆಯಲ್ಲಿ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅಕ್ಟೋಬರ್ 18ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಡಾ….

Read More

ತುಳುವಿಗೆ ಅಧಿಕೃತ ಭಾಷೆ ಮಾನ್ಯತೆ: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಕಾಂಗ್ರೆಸ್ ಬಾವುಟದ ಜೊತೆಗೆ ತುಳುನಾಡಿನ ಧ್ವಜವೂ ರಾರಾಜಿಸಿತು. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಘೋಷಣೆಯನ್ನು ಸ್ವಾಗತಿಸಿದ ಕಾರ್ಯಕರ್ತರು, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂಬ ಕರಾವಳಿಯ ಬಹುದಿನಗಳ…

Read More

ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು:ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಇದರಲ್ಲಿ…

Read More

ಭಜನಾ ಲಾಂಛನ ಮತ್ತು ಸಮವಸ್ತ್ರ ವಿತರಣೆ

ಉಪ್ಪಳ : ಶ್ರೀ ಜೈ ಹನುಮಾನ್ ಕುಣಿತ ಭಜನಾ ತಂಡ ಚಿಗುರುಪಾದೆ ಇದರ ಸಮವಸ್ತ್ರ ಮತ್ತು ಲಾಂಛನವನ್ನು ಇತ್ತೀಚೆಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ ಚಿಗುರುಪಾದೆಯಲ್ಲಿ ಬಿಡುಗಡೆ ಗೊಳಿಸಲಾಯಿತು. ಸಭೆಯ ಅಧ್ಯಕ್ಷತೆ ಯನ್ನು ಶ್ರೀ ವಸಂತ ಮಾಷ್ಟು ತೊಟ್ಟೆತ್ತೋಡಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಸತೀಶ್ ಕುಮಾರ್ ಕಾಪು ಪ್ರಧಾನ ಸಂಚಾಲಕರು ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು, ಶಂಕರ್ ಪ್ರದೀಪ್ ನಾಯಕ್, ನಾರಾಯಣ ಚಿಗುರುಪಾದೆ, ರಾಜೇಶ್ವರಿ ತೊಟ್ಟೆ ತ್ತೋಡಿ ಸದಾಶಿವ ರಾವ್, ಜಯಪ್ರಕಾಶ್…

Read More

ಗಣೇಶೋತ್ಸವದಲ್ಲಿ ಹಿರಿಯ ವಕೀಲ ಅರುಣ್ ಶ್ಯಾಮ್ ಮಂಜೇಶ್ವರ ಭಾಗಿ

ಮಂಜೇಶ್ವರ: ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಮಂಜೇಶ್ವರ ಅವರು ಮಂಜೇಶ್ವರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಗಣೇಶನ ದರ್ಶನ ಪಡೆದು ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ., ಗಣೇಶೋತ್ಸವ ಸಮಿತಿ ಅಧ್ಯಕ್ಷ ಯಾದವ ಬಡಾಜೆ, ನ್ಯಾ. ನವೀನ್ ರಾಜ್, ಪದ್ಮನಾಭ ಕಡಪರ, ಅವಿನಾಶ್ ಹೆಗ್ಡೆ, ದೇವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹಿಂದೂ ಸಂಘಟನೆಗಳಿಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ವಕೀಲರಾಗಿ ಕಾಣಿಸಿಕೊಂಡಿರುವ ಅರುಣ್ ಶ್ಯಾಮ್ ಮಂಜೇಶ್ವರ…

Read More

ಅವೈಜ್ಞಾನಿಕ ಚರಂಡಿ ನಿರ್ಮಾಣ: ಪೊಸೋಟು ಕುಟುಂಬಕ್ಕೆ ನಿಲ್ಲದ ಸಂಕಷ್ಟ – ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

​ಮಂಜೇಶ್ವರ: ನೂತನವಾಗಿ ನಿರ್ಮಿಸಲಾದ ಪಟ್ಪಥ ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಯಿಂದಾಗಿ, ಕಳೆದ ಮೂರು ವರ್ಷಗಳಿಂದ ಪೊಸೋಟು ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ಬದಿಯಲ್ಲಿರುವ ಕುಟುಂಬವೊಂದು ತೀವ್ರ ಸಂಕಷ್ಟ ಎದುರಿಸುತ್ತಿದೆ. ​ಸಮೀಪದ ಗೋವಿಂದ ಪೈ ಕಾಲೇಜು, ಅದರ ತಳಭಾಗ ಸೇರಿದಂತೆ ನಾಲ್ಕೂ ದಿಕ್ಕುಗಳಿಂದ ಹರಿದುಬರುವ ಮಳೆ ನೀರು ಹಾಗೂ ತ್ಯಾಜ್ಯ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಸಮಸ್ಯೆಗೆ ಮೂಲ ಕಾರಣವಾಗಿದೆ. ನಿಯಮಾವಳಿಗಳಿಗೆ ವ್ಯತಿರಿಕ್ತವಾಗಿ ಹರಿದು ಬರುವ ಕಲುಷಿತ ನೀರು ನೇರವಾಗಿ…

Read More

ನಕಲಿ ನಂಬರ್ ಪ್ಲೇಟ್ ಅಳವಡಿಸಿ ಕಾರಿನಲ್ಲಿ ಸಂಚಾರ; ಇಬ್ಬರು ಯುವಕರ ಬಂಧನ

ಕುಂಬಳೆ : ​ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರು ಸಹಿತ ಇಬ್ಬರು ಯುವಕರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ಕಯ್ಯಾರುವಿನ ಮೂಸಾ ಅಫೂಲ್ (26) ಮತ್ತು ನಿಜಾಮುದ್ದೀನ್ (19) ಬಂಧಿತ ಆರೋಪಿಗಳು. ​ಕಯ್ಯಾರುವಿನ ಚೇವಾರ್ ರೆಸೋರ್ಟ್ ಬಳಿ ಗಸ್ತು ತಿರುಗುತ್ತಿದ್ದ ಎಸ್‌ಐ ಗಣೇಶನ್ ಕೆ.ಪಿ. ನೇತೃತ್ವದ ಪೊಲೀಸ್ ತಂಡವು ಅನುಮಾನಾಸ್ಪದ ಕಾರನ್ನು ತಪಾಸಣೆ ನಡೆಸಿದಾಗ ಈ ಜಾಲ ಬೆಳಕಿಗೆ ಬಂದಿದೆ.ಕಾರಿನ ಅಸಲಿ ನಂಬರ್ ಪ್ಲೇಟನ್ನು ಒಳಗಿಟ್ಟು, ನಕಲಿ ಪ್ಲೇಟ್ ಅಳವಡಿಸಿಕೊಂಡಿರುವುದು ಕಂಡುಬಂದಿದೆ. ​ಆರೋಪಿಗಳು ಯಾವುದೇ ಅಕ್ರಮ ಕೃತ್ಯಕ್ಕೆ…

Read More

ಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರ ಸಮರ

ಕುಂಬಳೆ : ​ ಅನಧಿಕೃತ ಮರಳು ಗಣಿಗಾರಿಕೆ ಮತ್ತು ಸಾಗಣೆ ವಿರುದ್ಧ ಸಮರ ಸಾರಿರುವ ಕುಂಬಳೆ ಪೊಲೀಸರು, ಕಾರ್ಯಾಚರಣೆ ನಡೆಸಿ ಎರಡು ಅಕ್ರಮ ಕಡವುಗಳನ್ನು ಹಾಗೂ ಮೂರು ದೋಣಿಗಳನ್ನು ಜೆಸಿಬಿ ಬಳಸಿ ನಾಶಪಡಿಸಿದ್ದಾರೆ. ​ಮೊಗ್ರಾಲ್ ಕೆಕೆ ಪುರದಲ್ಲಿ ಕಂಡ್ಲಾ ಕಾಡುಗಳ ನಡುವೆ ಬಚ್ಚಿಡಲಾಗಿದ್ದ ಎರಡು ದೋಣಿಗಳನ್ನು ಪತ್ತೆಹಚ್ಚಿ, ಕಡವಿನೊಂದಿಗೆ ಧ್ವಂಸಗೊಳಿಸಲಾಯಿತು. ಅದೇ ರೀತಿ, ಶಿರಿಯ ಹೊಳೆಯ ಪಾಚಾಣಿಯಲ್ಲೂ ಸಹ ಒಂದು ದೋಣಿ ಹಾಗೂ ಅಕ್ರಮ ಕಡವನ್ನು ಪೊಲೀಸರು ನೆಲಸಮಗೊಳಿಸಿದ್ದಾರೆ. ​ಮರಳು ಅಕ್ರಮ ರವಾನೆಗೆ ವಾಹನಗಳಿಗೆ ಹಾದಿ ಮಾಡಿಕೊಡುವ…

Read More
error: Content is protected !!