ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಅಷ್ಠ ಬಂಧ ಬ್ರಹ್ಮ ಕಲಶೋತ್ಸವ ಸಂಭ್ರಮ

ಭಟ್ಕಳ ತಾಲೂಕು ಅನೇಕ ದೇವಾಲಯಗಳ ಒಂದು ಬ್ರಹತ್ ಸಮುಚ್ಛಯ ಎಂದರೆ ತಪ್ಪಾಗಲಾರದು ಅನ್ನಿಸುತ್ತದೆ.ಒಮ್ಮೆ ಮೆರವಣಿಗೆಯೊಂದರಲ್ಲಿ ಸಾಗಿ ಬಂದ ಸ್ವಾಮಿಜೀಯೊಬ್ಬರು ಒಂದು ಮಾರ್ಗದಲ್ಲಿ ಇಷ್ಟೊಂದು ದೇವಾಯಗಳನ್ನು ಇದೇ ಮೊದಲ ಬಾರಿ ಭಟ್ಕಳದಲ್ಲಿಯೇ ಕಂಡಿದ್ದು ಎಂದು ಹೇಳಿದ ಮಾತೂ ನೆನಪಿಗೆ ಬರುತ್ತಿದೆ ನನಗೆ.ಇಲ್ಲಿ ಲೆಕ್ಕವಿಲ್ಲದಷ್ಟು ದೇವಾಲಯಗಳಿವೆ. ಬಸಿದಿಗಳಿವೆ ಗುಡಿಗಳಿವೆ.ಒಂದೊಂದು ದೇವಾಲಯಗಳು ಕೂಡ ತನ್ನದೇ ಆದ ಇತಿಹಾಸವನ್ನು ಸಾರಿ ಹೇಳುತ್ತವೆ.ಇಂತಹ ಅನೇಕ ದೇವಾಲಯಗಳ ಪೈಕಿ ಸುಮಾರು ೬೦೦ ವರುಷಗಳ ಇತಿಹಾಸವಿರುವ ಭವ್ಯ ವಾಸ್ತುಶಿಲ್ಪದ ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯವು ಅತ್ಯಂತ ಪ್ರಮುಖವಾಗಿದೆ….

Read More

ಅರಿಕ್ಕಾಡಿಯಲ್ಲಿ ಶ್ರೀ ಆಲಿಚಾಮುಂಡಿ ಭಗವತಿ ದೇವಸ್ಥಾನದಲ್ಲಿ ಸಂಸ್ಕೃತಿ ಕಾರ್ಯಕ್ರಮ

ಕುಂಬಳೆ: ಕುಂಬಳೆ ಅರಿಕ್ಕಾಡಿ ಪಾರೆ ಸ್ಥಾನದಲ್ಲಿರುವ ಶ್ರೀ ಆಲಿಚಾಮುಂಡಿ ಶ್ರೀ ಭಗವತಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವದ ಕಳಿಯಾಟ ಪ್ರಯುಕ್ತ ಶ್ರೀ ನಾರಾಯಣ ಗುರು ವನಿತಾ ಸ್ವಸಹಾಯ ಸಂಘದ ವತಿಯಿಂದ 10ನೇ ವರ್ಷದ ಸಂಸ್ಕೃತಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮಕ್ಕೆ ದೇವಸ್ಥಾನದ ಅಧ್ಯಕ್ಷ ಸಂತೋಷ್ ಕುಂಬಳೆ ಅಧ್ಯಕ್ಷತೆ ವಹಿಸಿದರು. ತೀಯಾ ಮಹಾಸಭಾ ಅಧ್ಯಕ್ಷ ಗಣೇಶ್ ಮಂಗಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು, ಕಾರ್ಯದರ್ಶಿ ನಾಗೇಶ್ ಬಳ್ಳಂಬಾಡಿ, ಸದಾಶಿವ ಕಳತೋರು, ನವೀನ್ ಕುಮಾರ್ ಅರಿಕ್ಕಾಡಿ,…

Read More

ಮಂಜೇಶ್ವರದಲ್ಲಿ ಯೂತ್ ಕಾನ್ಫರೆನ್ಸ್‌ಗೆ ಪಿ.ಟಿ. ಉಷಾ ಚಾಲನೆ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕ್ರೀಡಾಪಟುಗಳ ಯುವ ಸಮ್ಮೇಳನವನ್ನು ರಾಜ್ಯಸಭಾ ಸಂಸದೆ ಹಾಗೂ ರಾಷ್ಟ್ರೀಯ ಒಲಿಂಪಿಕ್ ಫೆಡರೇಶನ್ ಅಧ್ಯಕ್ಷೆ ಪಿ.ಟಿ. ಉಷಾ ಉದ್ಘಾಟಿಸಿದರು. ಸಮಾರಂಭದಲ್ಲಿ ಮಂಜೇಶ್ವರ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಭಾಗವಹಿಸಿದ್ದರು. ಕ್ಷೇತ್ರದ ವಿವಿಧ ಕ್ಲಬ್‌ಗಳ ಪದಾಧಿಕಾರಿಗಳು ಪಾಲ್ಗೊಂಡ ಸಭೆಯಲ್ಲಿ ಪಿ.ಟಿ. ಉಷಾ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದ ಮಂಜೇಶ್ವರದ ಮಕ್ಕಳಿಗೆ ಪಿ.ಟಿ. ಉಷಾ ಸ್ಮರಣಿಕೆಗಳನ್ನು ವಿತರಿಸಿದರು. ಹೊಸಂಗಡಿ ಪ್ರೇರಣಾ ಸಭಾಂಗಣದಲ್ಲಿ ಕ್ರೀಡಾ ಭಾರತಿ ಕಾಸರಗೋಡು…

Read More

ಮಹಾಲಿಂಗೇಶ್ವರ ದೇವಾಲಯ ವಿವಾದ: ‘ಇದು ವೈಯಕ್ತಿಕ ವಿಷಯ, ದೇವಸ್ಥಾನಕ್ಕೆ ಸಂಬಂಧವಿಲ್ಲ’ – ಅಧ್ಯಕ್ಷ ಈಶ್ವರ ಭಟ್

ಪುತ್ತೂರು : ಮಹಾಲಿಂಗೇಶ್ವರ ದೇವಾಲಯದ ಕೊಡಿಮರದ ಅಡಿಯಲ್ಲಿ ಕುಳಿತು ನ್ಯಾಯ ಕೇಳುವುದಕ್ಕೆ ಇದು ದೇವಸ್ಥಾನಕ್ಕೆ ಸಂಬಂಧಿಸಿದ ವಿಷಯ ಅಲ್ಲ. ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ. ದೇವಸ್ಥಾನದ ಪೂರ್ವಶಿಷ್ಟ ಸಾಂಪ್ರದಾಯದಂತೆ ನಾವು ಈ ಹಿಂದೆ ಹೇಗಿತ್ತೋ ಹಾಗೆ ಮುಂದುವರಿಯುತ್ತೇವೆ ಎಂದು ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾನಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಪ್ರತಿಕ್ರಿಯಿಸಿದ್ದಾರೆ. ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಗಳಿಂದ ದೇವಾಲಯದ ವಾಸ್ತು ಇಂಜಿನಿಯರ್ ಪಿ ಜಿ ಜಗನ್ನಿವಾಸ್ ರಾವ್ ಅವರನ್ನ ಹೊರಗಿಡಬೇಕು. ಇಲ್ಲವಾದಲ್ಲಿ ನಾನು ಕೊಡಿಮರದ ಅಡಿಯಲ್ಲಿ…

Read More

ಗ್ಯಾಸ್ ಅಭಾವದಿಂದ ಪುತ್ತೂರಿನಲ್ಲಿ ಆಟೋ ಸಂಚಾರ ಅಸ್ತವ್ಯಸ್ತ

ಪುತ್ತೂರು: ನಗರದಲ್ಲಿ ತಲೆದೋರಿರುವ ಗ್ಯಾಸ್‌ ಕೊರತೆ ಇದೀಗ ಆಟೋ ರಿಕ್ಷಾ ಚಾಲಕರಿಗೂ ತೀವ್ರ ಸಂಕಷ್ಟ ಉಂಟುಮಾಡಿದೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದಲೇ ಪುತ್ತೂರಿನ ಬೋಲ್ವಾರ್, ಸಂಪ್ಯ ಪ್ರದೇಶದ ಗ್ಯಾಸ್ ಪಂಪ್, ಮುಕ್ರಂಪಾಡಿ ಬಳಿ ಆಟೋಗಳು ಕಿಲೋಮೀಟರ್‌ಗಳಷ್ಟು ಉದ್ದದ ಸಾಲಿನಲ್ಲಿ ನಿಂತು ಕಾಣಿಸಿಕೊಂಡವು. ಗ್ಯಾಸ್‌ ತುಂಬಿಸಿಕೊಳ್ಳಲು ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನನಿತ್ಯದ ಉದ್ಯೋಗಕ್ಕೆ ಇದರಿಂದ ದೊಡ್ಡ ಹೊಡೆತ ಬಿದ್ದಿದೆ.ಬೆಳಿಗ್ಗೆಯಿಂದಲೇ ಪಂಪ್ ಮುಂದೆ ವಾಹನಗಳ ದಟ್ಟಣೆ ಹೆಚ್ಚಾಗಿ, ಸಂಚಾರಕ್ಕೂ ಅಡಚಣೆ ಉಂಟಾದ ದೃಶ್ಯ ಕಂಡುಬಂದಿತು.ಗ್ಯಾಸ್‌ ಕೊರತೆಯಿಂದಾಗಿ ಪ್ರಯಾಣಿಕರಿಗೆ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಅವರು ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಕಲಾವಿದರಿಗೆ ಗಣನೀಯ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ,…

Read More

ಕಾಪು ರಂಗ ತರಂಗ ತಂಡದ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ

ಉಡುಪಿ: ತುಳು ರಂಗಭೂಮಿ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಶುಕ್ರವಾರ ನಿಧನ ಹೊಂದಿದರು. ಪ್ರಸಿದ್ಧ ರಂಗ ಕಲಾವಿದರಾಗಿದ್ದ ಅವರು ಹಾಸ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಪಾತ್ರಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿ, ಪ್ರೇಕ್ಷಕರ ಮನ ಗೆದ್ದಿದ್ದರು. ಕೆ. ಲೀಲಾಧರ ಶೆಟ್ಟಿ ಅವರ ಸಾರಥ್ಯದ ಕಾಪು ರಂಗ ತರಂಗ ಕಲಾವಿದರು ತಂಡದ ಸ್ಥಾಪಕ ಸದಸ್ಯರಾಗಿ, ತಂಡದ ಸಮಗ್ರ ನಿರ್ವಹಣೆಯ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು. ಕೆಲವು…

Read More

ರಂಗಸ್ಥಳದಲ್ಲಿ ಮಹಿಷಾಸುರನ ರೌದ್ರಾವತಾರ: ಕಲಾವಿದನ ವರ್ತನೆಗೆ ಪರ-ವಿರೋಧ ಚರ್ಚೆ

ಉಡುಪಿ, ಏಪ್ರಿಲ್ 3: ಯಕ್ಷಗಾನ ರಂಗಸ್ಥಳದಲ್ಲಿ ಮಹಿಷಾಸುರನ ಪಾತ್ರಧಾರಿ ತೋರಿದ ಅತಿರೇಕದ ಆವೇಶ ಇದೀಗ ವಿವಾದಕ್ಕೆ ಕಾರಣವಾಗಿದೆ. ಯಕ್ಷಗಾನ ಸೇವೆಯ ವೇಳೆ ಶ್ರೀಕ್ಷೇತ್ರ ಮಾರಣಕಟ್ಟೆ ಮೇಳದ ಮಹಿಷಾಸುರ ಪಾತ್ರಧಾರಿ ರಂಗಮಂಟಪದಲ್ಲಿ ಅಬ್ಬರಿಸುವ ಸಂದರ್ಭದಲ್ಲಿ ಕಂಬಕ್ಕೆ ತಲೆಯನ್ನು ಜೋರಾಗಿ ಗುದ್ದಿಕೊಂಡ ಘಟನೆ ಪ್ರೇಕ್ಷಕರನ್ನು ಬೆಚ್ಚಿಬೀಳುವಂತೆ ಮಾಡಿದೆ. ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳು ಜೋರಾಗಿವೆ. ಕೆಲವರು ಕಲಾವಿದನ ತೀವ್ರ ಅಭಿವ್ಯಕ್ತಿಯನ್ನು ಪಾತ್ರಕ್ಕೆ ಜೀವ ತುಂಬುವ ಕಲೆ ಎಂದು ಮೆಚ್ಚಿಕೊಂಡಿದ್ದಾರೆ. ಇನ್ನೊಂದೆಡೆ,…

Read More

ಮಂಜೇಶ್ವರದಲ್ಲಿ 2006ರ ಇತಿಹಾಸ ಮರುಕಳಿಸುವ ಸೂಚನೆ? ತ್ರಿಕೋನ ಸ್ಪರ್ಧೆಯಲ್ಲಿ ಎಡರಂಗಕ್ಕೆ ಮೇಲುಗೈ ಸಂಕೇತ

ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದಂತೆ, ಗಡಿ ನಾಡು ಮಂಜೇಶ್ವರದಲ್ಲಿ ಈ ಬಾರಿ ರಾಜಕೀಯ ಚಿತ್ರಣ ಕುತೂಹಲದ ಘಟ್ಟ ತಲುಪಿದೆ. ಇಲ್ಲಿನ ಸಾಂಪ್ರದಾಯಿಕ ತ್ರಿಕೋನ ಸ್ಪರ್ಧೆಯು ಹೊಸ ತಿರುವು ಪಡೆದುಕೊಂಡಿದ್ದು, 2006ರ ಚುನಾವಣಾ ಫಲಿತಾಂಶ ಮರುಕಳಿಸುವ ಮುನ್ಸೂಚನೆಗಳು ದಟ್ಟವಾಗುತ್ತಿದೆ. ​ಸ್ಥಳೀಯ ಅಭ್ಯರ್ಥಿಗಳ ನಡುವೆ ಬಿರುಸಿನ ಪೈಪೋಟಿ ಈ ಬಾರಿಯ ವಿಶೇಷವೆಂದರೆ ಯುಡಿಎಫ್ ಮತ್ತು ಎಲ್‌ಡಿಎಫ್ ಎರಡೂ ರಂಗಗಳು ಸ್ಥಳೀಯ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿರುವುದು. ಇದು ಮತದಾರರಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಎಲ್‌ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು…

Read More

ಮಂಗಳೂರಿನಲ್ಲಿ ಏಪ್ರಿಲ್ 7ರಂದು ‘ಗುರುವಂದನಾ’ ಮಹೋತ್ಸವ

ಸೋದೆ ಶ್ರೀ ವಾದಿರಾಜ ಮಠದ ಪ್ರಮುಖ ಶಿಷ್ಯ ಸಮುದಾಯವಾದ ದೈವಜ್ಞ ಬ್ರಾಹ್ಮಣ ಶಿಷ್ಯ ವೃಂದದ ವತಿಯಿಂದ ಏಪ್ರಿಲ್ 7ರಂದು ಮಂಗಳೂರಿನಲ್ಲಿ ‘ಗುರುವಂದನಾ’ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಲಿದೆ ಎಂದು ಮಂಗಳೂರು ‘ಗುರುವಂದನಾ’ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೇಟ್ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಅಂದು ಸಂಜೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಸಭಾ ಭವನದಲ್ಲಿ ಸೋದೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರಿಗೆ ಭಕ್ತಿಪೂರ್ವಕ…

Read More
error: Content is protected !!