ನಕಾರಾತ್ಮಕ ಚಿಂತನೆ ಬಿಟ್ಟು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಬಿ.ಎ. ವಿವೇಕ ರೈ
ಉಡುಪಿ: ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಕಲಾರಂಗದ ಐವೈಸಿ ಸಭಾಭವನದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.ಯುವಜನತೆ ಫೇಸ್ಬುಕ್ಗಳಂತಹ…