ಎನ್.ವಿನಯ ಹೆಗ್ಡೆಯವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಬೆಂಗಳೂರು: ದೂರದೃಷ್ಟಿಯ ನಾಯಕ ಮತ್ತು ಶಿಕ್ಷಣ ತಜ್ಞ, ನಿಟ್ಟೆಯ ಎನ್. ವಿನಯ ಹೆಗ್ಡೆಯವರ ನಿಧನದಿಂದ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಮ್ಮ ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ.ಎನ್.ವಿನಯ ಹೆಗ್ಡೆ ಅವರು ತಮ್ಮ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ನಿಟ್ಟೆ ಡೀಮ್ಡ್ ಟು ಬೀ ಯೂನಿವರ್ಸಿಟಿ ಸೇರಿದಂತೆ ಹಲವು ಸಂಸ್ಥೆಗಳನ್ನು ಬೆಳೆಸಿದವರು. ಬಡ ವಿದ್ಯಾರ್ಥಿಗಳಿಗೆ, ಮಹಿಳೆಯರ ಸಬಲೀಕರಣಕ್ಕೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿದರು. 24 ಗ್ರಾಮೀಣ ಆಸ್ಪತ್ರೆಗಳನ್ನು…

Read More

ಉದ್ಯಾವರ ಸಾವಿರ ಜಮಾಹತ್ ಅಸಯ್ಯದ್ ಶಹೀದ್ ವಲಿಯುಲ್ಲಾಯಿಯವರ ದರ್ಗಾದಲ್ಲಿ ಪಂಚವಾರ್ಷಿಕ ಉದಯಾಸ್ತಮಾನ ಉರೂಸ್ ಸಂಭ್ರಮ

ಮಂಜೇಶ್ವರ : ಉತ್ತರ ಕೇರಳದ ತುತ್ತ ತುದಿಯಲ್ಲಿ ಸೌಹಾರ್ದತೆ ಹಾಗೂ ಶಾಂತಿಯ ಸಂದೇಶಕ್ಕೆ ಹೆಸರುವಾಸಿಯಾಗಿರುವ ಮಂಜೇಶ್ವರ ತಾಲೂಕು ವ್ಯಾಪ್ತಿಯಲ್ಲಿರುವ ಉದ್ಯಾವರ ಸಾವಿರ ಜಮಾಹತ್ ಅಸಯ್ಯದ್ ಶಹೀದ್ ವಲಿಯುಲ್ಲಾಯಿಯವರ ದರ್ಗಾದಲ್ಲಿ ಪಂಚವಾರ್ಷಿಕ ಉದಯಾಸ್ತಮಾನ ಉರೂಸ್ ಸಂಭ್ರಮಕ್ಕೆ ದಿನ ದಿತ್ಯ ಸಾವಿರಾರು ಭಕ್ತಾಭಿಮಾನಿಗಳ ಪ್ರವಾಹವೇ ಹರಿದು ಬರುತ್ತಿದೆ. ಅಂಕಿಅಂಶಗಳ ಪ್ರಕಾರ ದಕ್ಷಿಣ ಭಾರತದ ಇಸ್ಲಾಮೀಯ ಸಂದೇಶ ಪ್ರಚಾರಕ್ಕೆ ಚಾಲನೆ ದೊರಕಿದ ಕ್ರಿ. ಶ 10 -11 ನೇ ಶತಮಾನಗಳ ಕಾಲಘಟ್ಟದಲ್ಲೇ ಇಂದು ಈಗ ಅಸ್ತಿತ್ವದಲ್ಲಿರುವ ಉದ್ಯಾವರದ ಪುರಾತನ ಜುಮಾ ಮಸೀದಿ…

Read More

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ್ಳತನ ಯತ್ನ – ದಂಪತಿ ಬಂಧನ, ಬೈಕ್ ವಶ

ಪುತ್ತೂರು: ಪುತ್ತೂರು ಕಸಬಾದಲ್ಲಿ 84 ವರ್ಷದ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ಮಧ್ಯರಾತ್ರಿ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ಕಾರ್ತಿಕ್ ರಾವ್ (31) ಹಾಗೂ ಅವರ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಅವರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿರ್ಯಾದಿದಾರ ನಾರಾಯಣ ಅವರ ದೂರಿನಂತೆ, ಡಿಸೆಂಬರ್ 17ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹೆಲ್ಮೆಟ್ ಧರಿಸಿ ಮುಖವನ್ನು ಮರೆಮಾಚಿಕೊಂಡಿದ್ದ ಇಬ್ಬರು ಅಪರಿಚಿತರು ಮನೆಯ…

Read More

ವಿಟ್ಲ : ಆಕಸ್ಮಿಕ ಬೆಂಕಿ – ಕರಚಿದ ಇಲೆಕ್ಟ್ರಾನಿಕ್ಸ್ ಅಂಗಡಿ,ಹೋಟೆಲ್, ಡ್ರೈವಿಂಗ್ ಸ್ಕೂಲ್

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ ಅಂಗಡಿಯನ್ನು ಆಹುತಿ ಪಡೆದುಕೊಂಡಿದ್ದು, ಹತ್ತಿರದ ಅಮಿತ್ ಹೋಟೆಲ್, ಗಣೇಶ್ ಡ್ರೈವಿಂಗ್ ಸ್ಕೂಲ್ ಅಂಗಡಿ ಕಟ್ಟಡಗಳೂ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆನ್ನಲಾಗಿದೆ. ಅಗ್ನಿಶಾಮಕ ದಳದ ವಾಹನ ಬೆಂಕಿ ಆರಿಸುವ ಕಾರ್ಯಾಚರಣೆ ಮಾಡಿದೆ.

Read More

ಮನೆಯ ಮಹಡಿಯಿಂದ ಬಿದ್ದು ಯುವಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಅವಿವಾಹಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಮೂಡುನಡುಗೋಡು ಗ್ರಾಮದ ನಡುದಂಡೆ ನಿವಾಸಿ ಪ್ರವೀಣ್ ( 26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಬಾರ್ ಒಂದರಲ್ಲಿ ಸಪ್ಲೈಯರ್ ಆಗಿದ್ದ ಈತ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ,ಗಂಭೀರವಾಗಿ ಗಾಯಗೊಂಡಿದ್ದ…

Read More

ಪ್ರಖ್ಯಾತ ಸಂಘಟಕ, ಡೊಳ್ಳಿನ ಪದ ಕಲಾ ವಿಧಗ್ದ, ಕನ್ನಡ ಹೋರಾಟಗಾರ ಸಿದ್ರಾಮ ನಿಲಜಗಿ ಬ್ಯಾಕೂಡ ಬೆಳಗಾವಿ “ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ.. !

ಕಾಸರಗೋಡು: ಪ್ರಖ್ಯಾತ ಸಂಘಟಕ, ಡೊಳ್ಳಿನ ಪದ ಕಲಾ ವಿಧಗ್ದ, ಕನ್ನಡ ಹೋರಾಟಗಾರ ಸಿದ್ರಾಮ ನಿಲಜಗಿ ಬ್ಯಾಕೂಡ ಬೆಳಗಾವಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ…

Read More

ಸಾಹಿತಿ, ಲೇಖಕಿ ಸತ್ಯವತಿ ಭಟ್ ಕೊಳಚಪ್ಪು ರೀಗೆ “ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ಆಯ್ಕೆ

ಕಾಸರಗೋಡು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ, 18.01.2026.ಪ್ರಯುಕ್ತ ಕನ್ನಡ ಭವನ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿಹಬ್ಬ “ಕಾರ್ಯಕ್ರಮದಲ್ಲಿ ಪ್ರಕಾಂಡ ಪಂಡಿತೆ, ಶ್ರೇಷ್ಠ ಕವಯತ್ರಿ, ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಡಾ. ಆರ್. ಎ. ದಯಾನಂದಮೂರ್ತಿಗೆ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.ಆಯ್ಕೆ

ಕಾಸರಗೋಡು: ಡಾ. ಆರ್. ಎ. ದಯಾನಂದಮೂರ್ತಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಇದೇ ಬರುವ ಜನವರಿ 18ಕ್ಕೆ ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನಡೆಯುವ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More

ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ,ಕರಾವಳಿಯ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ರೂವಾರಿ ಎನ್‌. ವಿನಯ್ ಹೆಗ್ಡೆ ಅಸ್ತಂಗತ . ಹೊಸ ವರ್ಷದಂದೇ ಕನ್ನಡಿಗರಿಗೆ ಬರ ಸಿಡಿಲು .. !

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಜನವರಿ 1ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.00 ರವರೆಗೆ ಮಂಗಳೂರಿನ ಶಿವಭಾಗ್‌ನಲ್ಲಿರುವ ಸದಾನಂದ ನಿವಾಸದಲ್ಲಿ ಮತ್ತು ಸಂಜೆ 4.30 ರಿಂದ ಸಂಜೆ 6.00…

Read More

ಜನವರಿ 2 ರಂದು : ಯುನಿವೆಫ್ ಕರ್ನಾಟಕ ವತಿಯಿಂದ “ಅರಿಯಿರಿ ಮನುಕುಲದ ಪ್ರವಾದಿಯನ್ನು “ಅಭಿಯಾನದ ಸಮಾರೋಪ ಸಮಾರಂಭ

ಮಂಗಳೂರು : ಯುನಿವೆಫ್ ಕರ್ನಾಟಕ ವತಿಯಿಂದ ಸೆಪ್ಟೆಂಬರ್ 19 ರಿಂದ ಜನವರಿ 2ರ ತನಕ ನಡೆಯಲಿರುವ  “ಅರಿಯಿರಿ ಮನುಕುಲದ ಪ್ರವಾದಿಯನ್ನು”ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನದ ಸಮಾರೋಪ ಸಮಾರಂಭವು ಜನವರಿ 2ರ ಶುಕ್ರವಾರ ಸಂಜೆ 6.45 ಕ್ಕೆ ನಗರದ ಪುರಭವನದಲ್ಲಿ ಜರಗಲಿದೆ‌ ಎಂದು ಪ್ರವಾದಿ ಅಭಿಯಾನ ಕಾರ್ಯಕ್ರಮದ ಸಂಚಾಲಕರಾದ ಯು. ಕೆ. ಖಾಲಿದ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.“ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ವಿಶ್ವಧರ್ಮಪೀಠ,…

Read More
error: Content is protected !!