ಬಾವಿಯಲ್ಲಿ ಮಹಿಳೆಯ ಶವ ಪತ್ತೆ.

ಮಂಜೇಶ್ವರ:ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ.ಅಡ್ಕದಗುರಿಯ ಐರಿನ್ ಡಿಸೋಜ (60) ಮೃತಪಟ್ಟವರು. ಬುಧವಾರ ರಾತ್ರಿ ಮಲಗಿದ್ದ ಐರಿನ್ ಬೆಳಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಮೃತದೇಹ ಮನೆ ಅಂಗಳದ ಬಾವಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.

Read More

ಚಂದ್ರ ಗ್ರಹಣ 2025

ಚಂದ್ರ ಗ್ರಹಣವು 2025 ರ ಕೊನೆಯ ಇದೇ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಚಂದ್ರ ಗ್ರಹಣವನ್ನು ಭಾರತದಲ್ಲಿ ನೋಡಬಹುದಾಗಿದೆ. ಸೆಪ್ಟೆಂಬರ್ 7ರ ಮಧ್ಯರಾತ್ರಿ 9:57 ಕ್ಕೆ ಶುರುವಾಗಿ 8ರ ಮಧ್ಯರಾತ್ರಿ 1:26 ರವರೆಗೆ ಗ್ರಹಣ ಕಾಲ ಇರಲಿದೆ. ಚಂದ್ರ ಗ್ರಹಣದ ಪೂರ್ಣ ಪ್ರಭಾವದ ಆರಂಭ ಮಧ್ಯರಾತ್ರಿ 12.28 ರಿಂದ 1.56 ರವರೆಗೆ ಇರಲಿದೆ.

Read More

ಮಂಜೇಶ್ವರದೆಲ್ಲೆಡೆ ಸಂಭ್ರಮದ ಈದ್ ಮಿಲಾದ್.

ಮಂಜೇಶ್ವರ: ಪ್ರವಾದಿ ಹಜರತ್ ಮುಹಮ್ಮದ್ ನಬಿ (ಸ.ಅ.ವ) ಅವರ ಜನ್ಮ ದಿನಾಚರಣೆಯಾದ ಈದ್ ಮಿಲಾದ್ ಉಲ್ ನಬಿ ಪವಿತ್ರತೆಯೊಂದಿಗೆ ಹಾಗೂ ಭಕ್ತಿ ಭಾವದಿಂದ ಮಂಜೇಶ್ವರದಾದ್ಯಂತ ಆಚರಿಸಲಾಯಿತು. ಮಸೀದಿಗಳಲ್ಲಿ ವಿಶೇಷ ಮೌಲೂದ್ ಪಠಣ, ಧಾರ್ಮಿಕ ಉಪನ್ಯಾಸಗಳು ಮತ್ತು ಪ್ರಾರ್ಥನೆಗಳು ನೆರವೇರಿದವು. ಮಂಜೇಶ್ವರದ ಪ್ರಮುಖ ಬೀದಿಗಳು ಹಸಿರು ಧ್ವಜಗಳು, ಬೆಳಕಿನ ಅಲಂಕಾರ ಮತ್ತು ಧಾರ್ಮಿಕ ಸಂದೇಶಗಳಿಂದ ಕಂಗೊಳಿಸಿತು. ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಎಲ್ಲರೂ ಶೋಭಾಯಾತ್ರೆಗಳಲ್ಲಿ ಪಾಲ್ಗೊಂಡು ಪ್ರವಾದಿಯ ಜೀವನೋಪದೇಶಗಳನ್ನು ಸ್ಮರಿಸಿದರು. ಧಾರ್ಮಿಕ ಪಂಡಿತರು ಪ್ರವಾದಿಯ ಆದರ್ಶಗಳನ್ನು ಪಾಲಿಸುವ ಮಹತ್ವವನ್ನು…

Read More

ಮ . ನ . ಪಾ ದಲ್ಲಿ ಕನ್ನಡ ಬಾರದ ಅನ್ಯ ಭಾಷೆಯ ಅಧಿಕಾರಿಯ ನೇಮಕ: ಕನ್ನಡ ಪರ ಸಂಘಟನೆಗಳು ಕಿಡಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕನ್ನಡ ಓದಲು ಬರೆಯಲು ಬಾರದ ಅಧಿಕಾರಿ ಕಾನೂನು ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಕಿಡಿಕಾರಿವೆ. ಕೇರಳ ಮೂಲದ ಮಹಿಳೆಯು ಕೇರಳದ ಮಲಯಾಳಂ ಮಾಧ್ಯಮದಲ್ಲಿ ವಿಧ್ಯಾಭ್ಯಾಸವನ್ನು ಮಾಡಿರುವುದು ಕನ್ನಡ, ತುಳು ಭಾಷೆ ಬಾರದಿರುವುದು ಜನಸಾಮಾನ್ಯರಿಗೆ ವ್ಯವಹರಿಸಲು ಸಮಸ್ಯೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಹಿಂದೆ ರಾಜಕೀಯ ಒತ್ತಡ ಇದೆ ಎನ್ನುವುದು ಕನ್ನಡ ಸಂಘಗಳ ಆಕ್ರೋಶವಾಗಿದೆ. ಕೆ.ಸಿ.ಎಸ್.ಆರ್ ನಿಯಮಗಳು 1974ರಲ್ಲಿ ಸರಕಾರಿ SSLC/10ನೇ ತರಗತಿಯಲ್ಲಿ ಕನ್ನಡ ಭಾಷೆ…

Read More

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ವತಿಯಿಂದ ನಡೆದ ಹನ್ನೊಂದನೇ ವರ್ಷದ ಗಣೇಶೋತ್ಸವ.

ದುಬೈ : ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಇದರ ವತಿಯಿಂದ ನಡೆದ 11ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಆಗಸ್ಟ್ 31ರಂದು ಆದಿತ್ಯವಾರ ಇಂಡಿಯನ್ ಅಸೋಸಿಯೇಷನ್ ಹಾಲ್ ಅಜ್ಮಾನ್ ನಲ್ಲಿ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಪುರೋಹಿತರಾದ ಸಂತೂರ್ ಶ್ರೀ ಲಕ್ಷ್ಮಿಕಾಂತ್ ಭಟ್ ಹಾಗೂ ಶ್ರೀ ರಾಜೇಶ್ ಅಡಿಗರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಿದರು.ಬೆಳಿಗ್ಗೆ ಗಣಹೋಮದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಮಹಾ ಅನ್ನದಾನದಲ್ಲಿ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಸಂಜೆ ವಿಸರ್ಜನಾ ಮೆರವಣಿಗೆ ನಡೆಯಿತು. ನಡೆದ ಸಭಾ…

Read More

ಎ ಟಿ ಎಂ ಕಳ್ಳತನದ ವಿಫಲ ಯತ್ನ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಉಳ್ಳಾಲ: ರಾತ್ರೋ ರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್‌ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು…

Read More

ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ.

ಮಂಜೇಶ್ವರ :ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ ನಡೆಯಿತು. .ಕಾರ್ಯಕ್ರಮದಲ್ಲಿ ವರ್ಕಾಡಿ ಮಂಡಲ ಅಧ್ಯಕ್ಷ ಪುರುಷೋತ್ತಮ ಅರಿಬೈಲ್ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್ ಬೋರ್ಕಳ. U. D.F.ಅಧ್ಯಕ್ಷ ಮಜಲ್ ಮಹಮ್ಮದ್. ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗಣೇಶ್ ಪಾವೂರು. ಕಾಂಗ್ರೆಸ್ ಕಾರ್ಯದರ್ಶಿವಸಂತ ರಾಜ್ ಸದಾಶಿವ ಆಜೀಸ್ ಕಲ್ಲೂರು ಮಹಮ್ಮದ್ ಕೆದುoಬಾಡಿ ಇನ್ನು ಹಲವು ನಾಯಕರು ಕಾರ್ಯಕರ್ತರು ಭಾಗವಹಿಸಿದರು

Read More

7ರಂದು ನಗರದಲ್ಲಿ ಫಾತಿಮಾ ರಲಿಯಾ ಅವರ ‘ಕೀಮೋ’ ಪುಸ್ತಕ ಬಿಡುಗಡೆ.

ಭಾನುವಾರ  ಸಂಜೆ‌ ನಾಲ್ಕು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್‌ ಸಿಕ್ವೇರಾ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಅನುಭವ ಕಥನ ‘ಕೀಮೋ’ ಬಿಡುಗಡೆಯಾಗಲಿದೆ.  ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ರಮ್ಯ ಕೆ.ಜಿ. ಮೂರ್ನಾಡು ಮತ್ತು ಶರೀಫ್ ಹಿಮಮಿ ಶುಟ್ಟಿಕೊಪ್ಪ ಮಾತನಾಡಲಿದ್ದಾರೆ‌. ಈ ಪುಸ್ತಕವನ್ನು ‘ಜೀರುಂಡೆ ಪುಸ್ತಕ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರ ನಾಲ್ಕನೇ ಕೃತಿಯಾಗಿದೆ. ‘ಜೀರುಂಡೆ ಪುಸ್ತಕ’ದ ಎಲ್ಲಾ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ…

Read More

ಕೈಕಂಬದಲ್ಲಿ ರಾಶಿ ಬಿದ್ದಿರುವ ತ್ಯಾಜ್ಯ. ಪರಿಹಾರವನ್ನು ಕಲ್ಪಿಸದ ಅಧಿಕಾರಸ್ಥರ ವಿರುದ್ಧ ಪ್ರತಿಭಟನೆ.

ಮಂಜೇಶ್ವರ : ಕೈಕಂಬದಲ್ಲಿ ರಾಶಿ ಬಿದ್ದಿರುವ ತ್ಯಾಜ್ಯಗಳಿಗೆ ಯಾವುದೇ ಪರಿಹಾರವನ್ನು ಕಲ್ಪಿಸದ ಅಧಿಕಾರಸ್ಥರ ವಿರುದ್ಧ ಹಾಗೂ ಕೈಕಂಬದ ಅಪಾರ್ಟ್‌ಮೆಂಟೊಂದರ ಮಲಿನ ಜಲವನ್ನು ಸಾರ್ವಜನಿಕ ಸ್ಥಳಕ್ಕೆ ಹರಿಯಬಿಡುವುದರ ವಿರುದ್ಧ ಕೈಕಂಬ ಮಾಲಿನ್ಯಮುಕ್ತ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು. ಕೈಕಂಬ ಅಪಾರ್ಟ್‌ಮೆಂಟ್‌ನಿಂದ ಸಮೀಪ ನಿವಾಸಿಗಳ ಕುಡಿಯುವ ನೀರಿನ ಮೂಲ ಕೂಡಾ ಮಲಿನೀಕರಣಗೊಳ್ಳುತ್ತಿದ್ದು ಹಲವು ವರ್ಷಗಳಿಂದ ಕಾನೂನು ಹೋರಾಟ ನಡೆಸಲಾಗುತಿದ್ದರೂ ಇವರ ವಿರುದ್ಧ ನಿರಂತರ ದೂರು ನೀಡಲಾಗುತಿದ್ದರೂ ಇದ್ಯಾವುದನ್ನೂ ಲೆಕ್ಕಿಸದೆ ನಿರಂತರವಾಗಿ ಫ್ಲಾಟ್‌ನಿಂದ ಮಲಿನ ಜಲವನ್ನು ಸಾರ್ವಜನಿಕ ಸ್ಥಳಗಳಿಗೆ ಹರಿಯಬಿಡಲಾಗುತ್ತಿದ್ದರೂ ಈ…

Read More

ಹಯಾತುಲ್ ಇಸ್ಲಾಂ ಮದ್ರಸದಲ್ಲಿ ಮೀಲಾದ್ ಆಚರಣೆ.

ಪುಚ್ಚತ್ತವಯಲ್: ಪ್ರವಾದಿ ಹಜ್ರತ್ ಮುಹಮ್ಮದ್ ಮುಸ್ತಫಾ (ಸ.ಅ) ಅವರ 1500ನೇ ಜನ್ಮದಿನಾಚರಣೆ ಅಂಗವಾಗಿ ಹಯಾತುಲ್ ಇಸ್ಲಾಂ ಮದ್ರಸ, ಪುಚ್ಚತ್ತವಯಲ್‌ನಲ್ಲಿ ಭಕ್ತಿಪೂರ್ಣ ಮೀಲಾದ್ ರ‍್ಯಾಲಿ ಹಾಗೂ ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಮಾಅತ್ ಖತೀಬ್ ಉಮರುಲ್ ಫಾರೂಖ್ ಹನೀಫಿ ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ನಂತರ ಮದ್ರಸ ವಿದ್ಯಾರ್ಥಿಗಳು ವರ್ಣರಂಜಿತ ಘೋಷಯಾತ್ರೆಯಲ್ಲಿ ಭಾಗವಹಿಸಿದರು. ದಫ್, ಸ್ಕೌಟ್ ಮತ್ತು ಹೂವಿನಿಂದ ಅಲಂಕರಿಸಿದ ಫ್ಲವರ್‌ಶೋಗಳು ಮೀಲಾದ್ ರ‍್ಯಾಲಿಗೆ ಮೆರುಗು ನೀಡಿದವು. ಮೀಲಾದ್ ರ‍್ಯಾಲಿಯು ಮಚ್ಚಂಬಾಡಿ ಜುಮಾ ಮಸೀದಿಯಿಂದ ಕೋಡಿ…

Read More
error: Content is protected !!