ಕೇರಳ ಕನ್ನಡ ಮಾಧ್ಯಮ ಶಾಲಾ ಆವರಣದಲ್ಲಿ ಸಾಂಸ್ಕೃತಿಕ ಭವನ ಉದ್ಘಾಟಣೆ

2022-23ನೇ ಸಾಲಿನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ರೂ.40.00ಲಕ್ಷಗಳ ಅನುದಾನದಿಂದ ಗಡಿ ಭಾಗದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಇವರ ಮೂಲಕ ಮಹಾಜನ ಸಂಸ್ಕೃತ ಕಾಲೇಜು, ಹೈಯರ್ ಸೆಕೆಂಡರಿ ಶಾಲೆ, ಪೆರಡಾಲ, ನೀರ್ಚಾಲು, ನೀರ್ಚಾಲು (ಅಂಚೆ), ಕುಂಬಳೆ (ದಾರಿ), ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಶತಮಾನ ಕಂಡ ಕನ್ನಡ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಾಂಸ್ಕೃತಿಕ ಭವನವನ್ನು ನಿನ್ನೆ ಉದ್ಘಾಟನೆ ಮಾಡಲಾಯಿತು..

Read More

ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ʻಬುರುಡೆʼ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಸೆ.6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. 12 ದಿನಗಳ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದ ಹಿನ್ನೆಲೆ ಚಿನ್ನಯ್ಯನನ್ನ (Chinnayya) ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರಾದ ವಿಜಯಾನಂದ.ಟಿ ಅವರ ಎದುರು ಹಾಜರುಪಡಿಸಲಾಗಿತ್ತು. ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್‌ ದಯಾಮ,…

Read More

ನಾರಾವಿ ಗ್ರಾಮ ಪಂಚಾಯತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಭೇಟಿ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM)…

Read More

ಕಾಸರಗೋಡು ಜಿಲ್ಲೆಯ ಕೆ.ಪಿ.ಎಸ್.ಎಂ.ಎ.ಯ ನೇತೃತ್ವದಲ್ಲಿ, ಕಾಞ್ಙಂಗಾಡು ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸಾಮೂಹಿಕ ಧರಣಿ

ಕಾಸರಗೋಡು ಜಿಲ್ಲೆಯ ಕೆ.ಪಿ.ಎಸ್.ಎಂ.ಎ.ಯ ನೇತೃತ್ವದಲ್ಲಿ, ಕಾಞ್ಙಂಗಾಡು ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸಾಮೂಹಿಕ ಧರಣಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಮಣಿ ಕೊಲ್ಲಂ ಉದ್ಘಾಟಿಸಿದರು. ಕೇರಳದ ಎಯ್ಡೆಡ್ ಶಾಲೆಗಳ ವ್ಯವಸ್ಥಾಪಕರು ಎದುರಿಸುತ್ತಿರುವ ತೊಂದರೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಪ್ರಬಲವಾದ ಪ್ರತಿಭಟನೆಗಳನ್ನು ಸಂಘಟಿಸಲಾಗುವುದೆಂದು ಪ್ರಧಾನ ಕಾರ್ಯದರ್ಶಿ ಹೇಳಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ.ಕೆ. ರಾಜನ್ ನಾಯರ್ ಅಧ್ಯಕ್ಷತೆ ವಹಿಸಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೀವನ್ ಮೇಲನಡಿ, ಪ್ರಸೀತ್ ಕುಮಾರ್, ಎಸ್.ಎನ್. ಶರ್ಮ, ಶ್ರೀಧರ ರಾವ್, ಜಯದೇವ…

Read More

ಕಟೀಲಿನ ಗೋಣಿಚೀಲ ಸಮಸ್ಯೆ – ಸುದ್ದಿಗೋಷ್ಠಿಯಲ್ಲಿ ಸ್ಪಷ್ಟತೆ

ಮಂಗಳೂರು: ಇತ್ತೀಚಿಗೆ ವೈರಲ್ ಆದ ಕಟೀಲು ಪರಿಸರದ ನ್ಯಾಯಬೆಲೆ ಅಂಗಡಿಯೊಂದರ ಗೋಣಿ ಚೀಲ ಸಮಸ್ಯೆಯ ಕುರಿತಾದ ಸ್ಪಷ್ಟತೆಯನ್ನು ನೀಡುವ ಸಲುವಾಗಿ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷರಾದ ಕೇಶವ ಮೂರ್ತಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು . ಸುದ್ದಿಗೋಷ್ಠಿಯಲ್ಲಿ ಕಟೀಲು ಪರಿಸರದ ನ್ಯಾಯಬೆಲೆ ಪಡಿತರ ವಿತರಕರಾದ ದೀಪಾ ನಾಯಕ್ ಮಾತನಾಡಿ , ಇತ್ತೀಚೆಗೆ ಮಂಗಳೂರಿನ ಕಟೀಲು ಪರಿಸರದ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಗ್ರಾಹಕರಾದ ಸತೀಶ್ ಮತ್ತು ವಿಜಯ್ ಎಂಬಾತ ಚಿತ್ರೀಕರಿಸಿದ ವಿಡಿಯೋ…

Read More

ಸೆಪ್ಟೆಂಬರ್ – 5 ರಂದು ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರರ ಜನ್ಮದಿನವಾದ ಈದ್ ಮೀಲಾದ್ ಹಬ್ಬ ಆಚರಣೆ

ಮಂಗಳೂರು: ಈ ತಿಂಗಳ ೫ ನೇ ತಾರೀಖಿನಂದು ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರರ ಜನ್ಮದಿನವಾದ ಈದ್ ಮೀಲಾದ್ ಹಬ್ಬದ ಆಚರಣೆ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ ಜಿ ಹನೀಫ್ ಹಾಜಿ ತಿಳಿಸಿದರು. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವರ್ಷಂಪ್ರತೀ ನಡೆಸಿಕೊಂಡು ಬರುವಂತೆ. ಈ ವರ್ಷವೂ ಕೂಡ ಉಳ್ಳಾಲ ಜುಮ್ಮಾ ಮಸ್ಟಿದ್ ಮತ್ತು ಹಝ್ರತ್ ಸಯ್ಯದ್ ಮದನಿ ದರ್ಗಾದ ವತಿಯಿಂದ 27 ಮೊಹಲ್ಲಾಗಳ ಮತ್ತು 32 ಮದ್ರಸಗಳ ವಿದ್ಯಾರ್ಥಿಗಳು ಹಾಗೂ ಉಳ್ಳಾಲ ಮೊಹಲ್ಲಾ…

Read More

ಸೆಪ್ಟೆಂಬರ್ 27ರಂದು ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ ‘ಕನ್‌ವರ್ಜೆನ್ಸ್‌ 2025’ ಕಾರ್ಯಕ್ರಮ

ಮಂಗಳೂರು: ಪಿ.ಎ.ಪ್ರಥಮ ದರ್ಜೆ ಕಾಲೇಜು ಮತ್ತು ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್, ಪಿ.ಎ. ಕಾಲೇಜು ಆಫ್ ಎಂಜಿನಿಯರಿಂಗ್, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ)ಇವರ ಸಹಯೋಗದೊಂದಿಗೆ ಸುಸ್ಥಿರ ಭವಿಷ್ಯದ ಕೃತಕ ಬುದ್ಧಿಮತ್ತೆಯ ಅಂತಾರಾಷ್ಟ್ರೀಯ ಸಮ್ಮೇಳನವಾದ ‘ಕನ್‌ವರ್ಜೆನ್ಸ್‌ 2025’ ಕಾರ್ಯಕ್ರಮವು ನಡುಪದವಿನ ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ಸೆಪ್ಟೆಂಬರ್ 27ರಂದು ನಡೆಯಲಿದೆ ಎಂದು ಪಿ.ಎ.ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸರ್ಫ್ರಾಜ್ ಜೆ ಹಾಸಿಂ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,…

Read More

ಏರ್ ಪೋರ್ಟ್ ‌ನಲ್ಲಿ ಚಿನ್ನ ಕಳ್ಳತನ – 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಂಧಿಸಿದ ಬಜ್ಪೆ ಪೊಲೀಸರು

ಮಂಗಳೂರು: ಮಂಗಳೂರು ಏರ್ ಪೋರ್ಟ್ ‌ನಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳ್ಳತನ ಪ್ರಕರಣದಲ್ಲಿ 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ – ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್…

Read More

ಮಂಗಳೂರು ತಾಲೂಕು ಪಂಚಾಯತ್ ತ್ರೈಮಾಸಿಕ ಕೆಡಿಸಿ ಸಭೆ

ಮಂಗಳೂರು : ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮತ್ತು ಮಲೇರಿಯಾದ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿಯ ವಾಸದ ಮನೆಗಳಿಗೂ ರಾಜ್ಯ ಆರೋಗ್ಯ ಇಲಾಖೆಯು ದಂಡ ಪ್ರಯೋಗಕ್ಕೆ ಸುತ್ತೋಲೆ ಹೊರಡಿಸಿದೆ. ಜಿಲ್ಲಾಧಿಕಾರಿ ನೇತೃತ್ವದ ಸಭೆಯ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾರಿ ತಿಳಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ತಾಪಂನ ಸಭಾಂಗಣದಲ್ಲಿ ಪ್ರಥಮ ತ್ರೈಮಾಸಿಕ ಸಭೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಡೆಂಗ್ಯೂ ಹಾಗೂ…

Read More

ಎಸ್ ಪಿ ಸಿ ಓಣಂ ತ್ರಿದಿನ ಶಿಬಿರ ಸಂಪನ್ನ.

ಶ್ರೀ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕ ದಲ್ಲಿ ಎಸ್ ಪಿ ಸಿ ವಿದ್ಯಾರ್ಥಿಗಳ ಓಣಂ ತ್ರಿದಿನ ಶಿಬಿರದ ಔಪಚಾರಿಕ ಉದ್ಘಾಟನಾ ಸಮಾರಂಭ ಜರಗಿತು.ಪ್ರಸ್ತುತ ಸಭೆಯ ಅಧ್ಯಕ್ಷತೆಯನ್ನು ಪುತ್ತಿಗೆ ಪಂಚಾಯತು ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ನೆರವೇರಿಸಿ ಮಾತನಾಡುತ್ತಾ ಯೂನಿಟ್ ನಲ್ಲಿರುವ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಶಿಸ್ತಿನಿಂದ ಇತರರಿಗೆ ಮಾದರಿಯಾಗಬೇಕು ಎಂದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬದಿಯಡ್ಕ ಆರಕ್ಷಕ ಠಾಣೆಯ ಎಸ್. ಐ ಯಾಗಿರುವ ಶ್ರೀ ಅಖಿಲ್ ಟಿ ದೀಪ ಬೆಳಗಿಸಿ ಉದ್ಘಾಟಿಸಿ ಎಸ್…

Read More
error: Content is protected !!