ರಿಕ್ಷಾ ಕಳ್ಳತನ, ಆರೋಪಿ ಬಂಧನ

ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ.ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ: ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾ ವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13 ರಂದು ರಾತ್ರಿ ನಿಲ್ಲಿಸಿದ್ದರು….

Read More

ಮಂಗಳೂರು – ಬೆಂಗಳೂರು ರೈಲು ಮಾರ್ಗ -ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣ

ಸುಬ್ರಹ್ಮಣ್ಯ, ಡಿ.28: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮೈಸೂರು ವಿಭಾಗದ ನೈರುತ್ಯ ರೈಲ್ವೆಯಲ್ಲಿ ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನುಊ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಇದು ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಮೈಲಿಗಲ್ಲಾಗಿದೆ. ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ. ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258…

Read More

ಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಮಂಜೇಶ್ವರದಲ್ಲಿ ಜನಜೀವನ ಅಸ್ತವ್ಯಸ್ತ

ಮಂಜೇಶ್ವರ: ರಾಗಂ ಜಂಕ್ಷನ್‌ನಿಂದ ಸಿರಾಜುಲ್ ಹುದಾ ತನಕ ನಡೆಯಬೇಕಾದ ರಸ್ತೆ ಅಭಿವೃದ್ಧಿ ಕಾಮಗಾರಿ ತೀವ್ರ ವಿಳಂಬವಾಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶಾಸಕರ ನಿಧಿಯಿಂದ ಮಂಜೂರಾದ ಸುಮಾರು 97,000 ರೂ. ಅನುದಾನದಡಿ 1300 ಮೀಟರ್ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದರೂ, ಗುತ್ತಿಗೆ ವಹಿಸಿಕೊಂಡವರು ಕರಾರಿನ ಪ್ರಕಾರ ಅಗತ್ಯ ಮುತುವರ್ಜಿ ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ರಸ್ತೆಯನ್ನು ಅಗೆದು ಹಾಕಿ ಎರಡು ತಿಂಗಳುಗಳು ಕಳೆದಿದ್ದರೂ ಮುಂದಿನ ಹಂತದ ಕಾಮಗಾರಿ ಪ್ರಾರಂಭವಾಗದೇ ಇರುವುದೇ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ….

Read More

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಂಜೇಶ್ವರ ಖಂಡ ಸಮಿತಿ ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಜೇಶ್ವರ ಖಂಡ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಿನಾಂಕ ಬಾನುವಾರದಂದು ವಿ.ಹಿಂ.ಪ ಜಿಲ್ಲಾ ಕಾರ್ಯಾಲಯ “ಪ್ರೇರಣಾ” ಹೊಸಂಗಡಿಯಲ್ಲಿ ಬ್ರಹ್ಮಶ್ರೀ ಬಡಾಜೆಬೂಡು ಶ್ರೀ ಗೋಪಾಲಕೃಷ್ಣ ತಂತ್ರಿಗಳವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು. ಬೆಳಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ…

Read More

ಮಧುಮೇಹ ತಪಾಸಣಾ ಮೆಡಿಕಲ್ ಕಿಟ್ ನೀಡಿ ಸಹಾಯ

ಕಾಸರಗೋಡು: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​​(ಎಕೆಪಿಎ) ಕಾಸರಗೋಡು ವೆಸ್ಟ್ ಯುನಿಟ್ ವತಿಯಿಂದ ಕೂಡ್ಲು ನಿವಾಸಿ ಬಡಕುಟುಂಬದ ಕಮಲ ಎಂಬವರಿಗೆ ಮಧುಮೇಹ ತಪಾಸಣಾ ಕಿಟ್ ನ್ನು ಮಧೂರು ಪಂಚಾಯತ್ ಕೂಡ್ಲು 17 ನೇ ವಾರ್ಡ್ ಕೌನ್ಸಿಲರೂ ಮಧೂರು ಪಂಚಾಯತ್ ಉಪಾಧ್ಯಕ್ಷರೂ ಆದ ಶ್ರೀ ಭಾನುಪ್ರಕಾಶ್ ಅವರು ನೀಡಿದರು. ಬಳಿಕ ಮಾತನಾಡಿದ ಅವರು ಎಕೆಪಿಎ ಸಂಘಟನೆಯಿಂದ ಈ ರೀತಿಯ ಸಮಾಜ ಸೇವೆ ಮಾಡುತ್ತಿರುವುದನ್ನು ಪ್ರಶಂಸನೆಗೈದರು. ಈ ವಾರ್ಡಿನಿಂದ ಆಯ್ಕೆಯಾದ ತಾನು ತನ್ನ 5 ವರ್ಷದ ಸಂಬಳವನ್ನು ವಾರ್ಡಿನ ಜನರ…

Read More

CITU ಮಂಜೇಶ್ವರ ಏರಿಯಾ ಸಮಾವೇಶ

CITU ಮಂಜೇಶ್ವರ ಏರಿಯಾ ಸಮಾವೇಶ ಹೊಸಂಗಡಿ KSTA ಭವನದಲ್ಲಿ ನಡೆಯಿತು .CITU ಕಾಸರಗೋಡು ಜಿಲ್ಲಾ ಟ್ರೆಶರಾರ್ ತಂಬಾನ್ ನಾಯರ್ ಉದ್ಘಾಟಿಸಿದರು. CITU ಮಂಜೇಶ್ವರ ಏರಿಯಾ ಅಧ್ಯಕ್ಷರಾದ ಡಿ ಕಮಲಾಕ್ಷ ಅಧ್ಯಕ್ಷತೆ ವಹಿಸಿದರು .ಜಿಲ್ಲಾ ಕಾರ್ಯದರ್ಶಿ ಶೋಭಾ ಬಿ , ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ, ಏರಿಯಾ ಖಜಾಂಜಿ ಸತೀಶ್ ಎಲಿಯಾನ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು . ಪ್ರಶಾಂತ್ ಕನಿಲ ವರದಿ ಮಂಡಿಸಿ, ಚರ್ಚೆ ಹಾಗೂ ಚರ್ಚೆಗೆ ಉತ್ತರ ನೀಡಿದ ಬಳಿಕ ನೂತನ ಅಧ್ಯಕ್ಷ ರಾಗಿ ಡಿ ಕಮಲಾಕ್ಷ,…

Read More

ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”

ಕಾಸರಗೋಡು: ಇದೆ ಬರುವ ಜನವರಿ 18 ರಂದು ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಯನ್ನು ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More

ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ-ಸಸಿ ನೆಡುವ ಕಾರ್ಯಕ್ರಮ

ಮಂಗಳೂರು: ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ದೇಶ ಕಂಡ ಮಹಾನಾಯಕ ಅಟಲ್ ಜೀ ನೆನಪಿನಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳು ನಡೆಯುತ್ತಿವೆ. ಅದರ ಭಾಗವಾಗಿ ನಮ್ಮ ಕ್ಷೇತ್ರದ ಈ ಶಾಲೆಯಲ್ಲಿ ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು…

Read More

ಬಾಂಗ್ಲಾದಲ್ಲಿ ಹಿಂದೂಗಳಿಗೆ ಅಗತ್ಯ ರಕ್ಷಣೆ ಆಗಬೇಕು- ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ‌ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪಿಎಚ್‌ಪಿ, ಬಜರಂಗದಳದ ಕಾರ್ಯಕರ್ತರು ಸಾಗಿಬಂದರು. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅಲ್ಲಿನ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ದೀಪುಚಂದ್ರದಾಸ್ ಎಂಬ ಯುವಕ ನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ನಿಲ್ಲಬೇಕು. ಈ…

Read More

ರಾಷ್ಟ್ರಪ್ರಶಸ್ತಿ ವಿಜೇತ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಗೆ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ” ಸದ್ಭಾವನಾ ಪ್ರಶಸ್ತಿ 2026

ಕಾಸರಗೋಡು : ಡಾ. ಬಾಲಕೃಷ್ಣ ಎಸ್ ಮದ್ದೋಡಿ ಪ್ರೋ. ಎಂ. ಐ. ಟಿ. ಮಣಿಪಾಲ ರವರಿಗೆ ಡಾ. ವಾಮನ್ ರಾವ್ ಬೇಕಲ್ ಸಾರಥ್ಯದದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ, ನಾಡು ನುಡಿ ಹಬ್ಬ 18-01-2026 ಭಾನುವಾರ ಕನ್ನಡ ಭವನ ನುಳ್ಳಿಪ್ಪಾಡಿ ಯಲ್ಲಿನ ಕಾರ್ಯಕ್ರಮ ದಲ್ಲಿ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ಪ್ರಶಸ್ತಿ” ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್…

Read More
error: Content is protected !!