ಮಂಗಳೂರಿನಲ್ಲಿ ಏಪ್ರಿಲ್ 7ರಂದು ‘ಗುರುವಂದನಾ’ ಮಹೋತ್ಸವ

ಸೋದೆ ಶ್ರೀ ವಾದಿರಾಜ ಮಠದ ಪ್ರಮುಖ ಶಿಷ್ಯ ಸಮುದಾಯವಾದ ದೈವಜ್ಞ ಬ್ರಾಹ್ಮಣ ಶಿಷ್ಯ ವೃಂದದ ವತಿಯಿಂದ ಏಪ್ರಿಲ್ 7ರಂದು ಮಂಗಳೂರಿನಲ್ಲಿ ‘ಗುರುವಂದನಾ’ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಲಿದೆ ಎಂದು ಮಂಗಳೂರು ‘ಗುರುವಂದನಾ’ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೇಟ್ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಅಂದು ಸಂಜೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಸಭಾ ಭವನದಲ್ಲಿ ಸೋದೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರಿಗೆ ಭಕ್ತಿಪೂರ್ವಕ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19ರಿಂದ ಬ್ರಹ್ಮಕಲಶೋತ್ಸವ

ಮಂಗಳೂರಿನ ಅತ್ತಾವರದಲ್ಲಿರುವ ಐತಿಹಾಸಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಅಯ್ಯಪ್ಪ ಸಮಿತಿಯ ಅಧ್ಯಕ್ಷರಾದ ಸೂರಜ್ ರಾಘವನ್ ತಿಳಿಸಿದರು . ಅವರು ನಗರದ ಪತ್ರಿಕಾಭವದನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಉತ್ಸವದ ಅಂಗವಾಗಿ ಏಪ್ರಿಲ್ 19ರಂದು ಮಂಗಳಾ ದೇವಿ ದೇವಸ್ಥಾನದಿಂದ ಹೊರಕಾಣಿಕೆ ಮೆರವಣಿಗೆ ಹೊರಡಲಿದ್ದು , ಅದು ಅತ್ತಾವರದ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ತಲುಪಲಿದೆ. ಐದು ದಿನಗಳ ಕಾಲ…

Read More

ಮಾದಕ ದ್ರವ್ಯ ಪ್ರಕರಣಗಳಲ್ಲಿ ಆರೋಪಿಗೆ ಪಿಟ್ ಎನ್‌ಡಿಪಿಎಸ್ ಕಾಯ್ದೆ: ಬಂಧನ

ಕಾಸರಗೋಡು, ಏಪ್ರಿಲ್ 3: ಹಲವು ಮಾದಕ ದ್ರವ್ಯ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೋಯಿಪ್ಪಾಡಿ ಮೂಲದ ವ್ಯಕ್ತಿಯನ್ನು ಪಿಟ್ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ. ಕುಂಬಳೆ ಪೊಲೀಸರು ಕೋಯಿಪ್ಪಾಡಿ ಕಡಪ್ಪುರದ ಶಫೀರಾ ಮನ್ಸಿಲ್ ನಿವಾಸಿ ಕೆ.ಕೆ. ಸಾಧಿಕ್ (33) ಅವರನ್ನು ಬಂಧಿಸಿದ್ದು, ಇನ್‌ಸ್ಪೆಕ್ಟರ್ ಬೈಜು ಕೆ. ಥೋಮಸ್ ಹಾಗೂ ಎಸ್‌ಐಗಳಾದ ಸನಿತ್ ಮತ್ತು ಅನಂತಕೃಷ್ಣನ್ ಆರ್. ಮೆನನ್ ನೇತೃತ್ವದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಂಧಿತನನ್ನು ಪೂಜಪ್ಪುರ ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದ್ದು, ಮುಂದಿನ ಒಂದು ವರ್ಷದವರೆಗೆ ಜಾಮೀನು ಸಿಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ….

Read More

ಮುಳ್ಳೇರಿಯಾ, ಕಾಸರಗೋಡು ಕಸಬಾ ಕಡಪ್ಪುರದಲ್ಲಿ ಸುರೇಶ್ ಗೋಪಿಯ ಭರ್ಜರಿ ಪ್ರಚಾರ

ಕಾಸರಗೋಡು: ಚುನಾವಣಾ ಕಣ ದಿನೇದಿನೇ ಕಾವೇರಿಸುತ್ತಿರುವ ಹಿನ್ನೆಲೆಯಲ್ಲಿ ಸುರೇಶ್ ಗೋಪಿ ಅವರು ಮುಳ್ಳೇರಿಯಾ ಹಾಗೂ ಕಾಸರಗೋಡು ಕಸಬಾ ಕಡಪ್ಪುರ ಪ್ರದೇಶಗಳಲ್ಲಿ ಭರ್ಜರಿ ರಾಜಕೀಯ ಪ್ರಚಾರ ನಡೆಸಿದರು. ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ ಅವರು, ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಮುಳ್ಳೇರಿಯಾ ಮತ್ತು ಕಸಬಾ ಕಡಪ್ಪುರದಲ್ಲಿ ನಡೆದ ಸಭೆಗಳಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಮಕ್ಕಳೇ ಫನ್ ಸೈಕಲ್ ರೈಡ್ಗೆ ರೆಡಿಯಾಗಿ ಮಕ್ಕಳೇ …..! ಬರ್ತಿದ್ದೆ ಏಪ್ರಿಲ್ 6 ರಂದು ಪಿಲಿಕುಳ ಹೆರಿಟೇಜ್ ಹೌಸ್‌ನಲ್ಲಿ ಫನ್ ಸೈಕಲ್ ರೈಡ್ !

ಮಂಗಳೂರು: ಇಂದಿನ ಜನಾಂಗದ ಮಕ್ಕಳು ಹೆಚ್ಚಾಗಿ ಮೊಬೈಲ್ ಗುಂಗಲ್ಲೇ ಕಳೆಯುತ್ತಾರೆ ಅವರಿಗೆ ದೈಹಿಕ ಕ್ಷಮತೆ ಕಡಿಮೆ ಇರುತ್ತದೆ . ಮಕ್ಕಳಲ್ಲಿ ದೈಹಿಕ ಸಾಮರ್ಥ್ಯ ಅಧಿಕವಾಗಬೇಕು ಎನ್ನುವ ನಿಟ್ಟಿನಲ್ಲಿ ಯುರೋಕಿಡ್ಸ್ ಕೊಡಿಯಾಲ್ ಬೈಲ್ ಸಂಸ್ಥೆ, ಮಂಗಳೂರು ಸೈಕಲ್ ಕೋ ಹಾಗೂ ಇನ್‌ಸ್ಟಾಗ್ರಾಂ ಸೈಕ್ಲಿಂಗ್ ಇನ್‌ಫ್ಲೂಯೆನ್ಸರ್ ಭಟ್ರು ಅವರ ಸಹಯೋಗದಲ್ಲಿ ಏಪ್ರಿಲ್ 6 ರಂದು ಬೆಳಿಗ್ಗೆ 9.00 ರಿಂದ 11.00 ಗಂಟೆಯವರೆಗೆ ಪಿಲಿಕುಳ ಹೆರಿಟೇಜ್ ಹೌಸ್‌ನಲ್ಲಿ ಫನ್ ಸೈಕಲ್ ರೈಡ್ ಕಾರ್ಯಕ್ರಮವನ್ನು 2 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಆಯೋಜಿಸಲಾಗಿದೆ…

Read More

ಕರಂಗಲ್ಪಾಡಿಯ ಕಾರ್ಣಿಕದ ಶ್ರೀ ಮಹಾಸತಿ ಹಾಗೂ ಶ್ರೀ ಭಗವತಿ ಅಮ್ಮನವರ ಸಾನಿಧ್ಯದಲ್ಲಿ ಏಪ್ರಿಲ್.4ರಂದು ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

ಮಂಗಳೂರು: ನಗರದ ಕರಂಗಲ್ಪಾಡಿಯ ಕಾರ್ಣಿಕದ ಶ್ರೀ ಮಹಾಸತಿ ಹಾಗೂ ಶ್ರೀ ಭಗವತಿ ಅಮ್ಮನವರ ಸಾನಿಧ್ಯದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಏಪ್ರಿಲ್ 4 ಶನಿವಾರ ರಾತ್ರಿ ೮. ೩೦ ರಿಂದ ನಡೆಯಲಿದೆ ಎಂದು ಕರಂಗಲ್ಪಾಡಿಯ ಶ್ರೀ ಮಹಾಸತಿ ಹಾಗೂ ಶ್ರೀ ಭಗವತಿ ಅಮ್ಮನವರ ಸಾನಿಧ್ಯದ ಪ್ರಧಾನ ಅರ್ಚಕರಾದ ಸುದನ್ ವಿದ್ಯಾನಗರ ಪಂಜಿಮುಗೇರು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ವರ್ಗೀಯ ರಾಜಕೀಯಕ್ಕೆ ಅಂತ್ಯ: ಮಂಜೇಶ್ವರದಲ್ಲಿ ಪಿ.ಎಂ.ಎ ಸಲಾಂ ಹೇಳಿಕೆ

ಮಂಜೇಶ್ವರಂ. ಕೇರಳದಲ್ಲಿ ವರ್ಗೀಯ ವಿಭಜನೆ ರಾಜಕೀಯಕ್ಕೂ ಹಾಗೂ ಎಡಪಂಥೀಯ ದುರಾಡಳಿತಕ್ಕೂ ಈ ಚುನಾವಣೆಯೊಂದಿಗೆ ಅಂತ್ಯಕಾಲ ಸಮೀಪಿಸಿದೆ ದ್ವೇಷ ಹರಡುವ ಮೂಲಕ ಯಾವಾಗಲೂ ಮತಗಳನ್ನುಗಳಿಸಬಹುದು ಎಂಬ ಬಿಜೆಪಿಯ ಭ್ರಮೆ ಮುಗಿದಿದೆ ಎಂದು ಮುಸ್ಲಿಂ ಲೀಗ್ ರಾಜ್ಯ ಕಾರ್ಯದರ್ಶಿ ಪಿ. ಎಂ. ಎ ಸಲಾಂ ಹೇಳಿದರು. ಮಂಜೇಶ್ವರ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎ .ಕೆ .ಎಂ . ಅಶ್ರಫ್ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮೀಂಜ ಪಂಚಾಯತ್‌ನ ಗಾಂಧಿನಗರದಲ್ಲಿ ನಡೆದ ಕುಟುಂಬ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದ್ವೇಷವನ್ನು ಪ್ರಚೋದಿಸಿ…

Read More

ಗುಡ್ ಫ್ರೈಡೆ ಪ್ರಯುಕ್ತ ಇನ್ಫ್ಯಾಂಟ್ ಜೀಸಸ್ ಚರ್ಚ್ ವತಿಯಿಂದ ಶಿಲುಬೆಯ ಹಾದಿ

ಹೊಸಂಗಡಿ, ಗುಡ್ ಫ್ರೈಡೆ ಪ್ರಯುಕ್ತ ಇನ್ಫ್ಯಾಂಟ್ ಜೀಸಸ್ ಚರ್ಚ್ ವತಿಯಿಂದ ಭಕ್ತಿಭಾವದಿಂದ ಶಿಲುಬೆಯ ಹಾದಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಧಾರ್ಮಿಕ ಆಚರಣೆಯಲ್ಲಿ ಭಕ್ತರು ಯೇಸು ಕ್ರಿಸ್ತನ ಯಾತನೆ ಮತ್ತು ಶಿಲುಬೆಗೆ ಹಾಕಲ್ಪಟ್ಟ ಘಟನೆಗಳನ್ನು ಸ್ಮರಿಸಿಕೊಂಡು ಪ್ರಾರ್ಥನೆ ಸಲ್ಲಿಸಿದರು. ಚರ್ಚ್ ಆವರಣದಿಂದ ಹೊಸಂಗಡಿ ದಾರಿಯುದ್ದಕ್ಕೂ ಶಿಲುಬೆಯ ಹಾದಿಯ ಹಂತಗಳನ್ನು ನಿರೂಪಿಸಲಾಗಿದ್ದು, ಭಕ್ತರು ಕ್ರಮವಾಗಿ ನಡೆದು ಪ್ರಾರ್ಥನೆ ನಡೆಸಿದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಭಾವದಿಂದ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡರು. ಈ ಮೂಲಕ ಯೇಸು ಕ್ರಿಸ್ತನ ತ್ಯಾಗ ಮತ್ತು ಮಾನವಕುಲಕ್ಕಾಗಿ ಮಾಡಿದ…

Read More

ಅಕ್ರಮ ಜಾನುವಾರು ಸಾಗಾಟ ಪತ್ತೆ: 19 ಜಾನುವಾರುಗಳು ವಶ, ಓರ್ವ ಬಂಧನ

ಕಡಬ : ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ, ಅಮಾನುಷವಾಗಿ ಸಾಗಿಸಲಾಗುತ್ತಿದ್ದ 19 ಜಾನುವಾರುಗಳನ್ನು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆಯನ್ನು ಸಬ್‌ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದಲ್ಲಿ…

Read More

ಇಚ್ಚಿಲಂಗೋಡಿನಲ್ಲಿ ಇಸ್ಲಾಮಿಯ ಎ.ಎಲ್.ಪಿ. ಶಾಲೆಯ 80ನೇ ವಾರ್ಷಿಕೋತ್ಸವ ಏಪ್ರಿಲ್ 4ರಂದು

ಇಚ್ಚಿಲಂಗೋಡು, : ಎಂಟು ದಶಕಗಳ ಶಿಕ್ಷಣ ಪರಂಪರೆಯನ್ನು ಹೊಂದಿರುವ ಇಸ್ಲಾಮಿಯ ಎ.ಎಲ್.ಪಿ. ಶಾಲೆ ಇಚ್ಚಿಲಂಗೋಡಿನಲ್ಲಿ 80ನೇ ವಾರ್ಷಿಕೋತ್ಸವವನ್ನು ಏಪ್ರಿಲ್ 4ರಂದು ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಬೀರೋಲಿಕ ಮೈದಾನದಲ್ಲಿ ಭರ್ಜರಿಯಾಗಿ ಆಚರಿಸಲಾಗುತ್ತಿದೆ. ಶಾಲೆಯ 80 ವರ್ಷಗಳ ಇತಿಹಾಸವನ್ನು ದಾಖಲಿಸಿದ ಸ್ಮರಣಿಕೆ (ಸೋವನೀರ್ ) ಬಿಡುಗಡೆ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ನೆರವೇರಿದೆ ಎಂದು ಆಯೋಜಕರು ತಿಳಿಸಿದ್ದಾರೆ. ವಾರ್ಷಿಕೋತ್ಸವವನ್ನು ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿ ಜಾರ್ಜ್ ಕ್ರಾಸ್ಟ ಉದ್ಘಾಟಿಸಲಿದ್ದಾರೆ. ಕುಂಬಳೆ ವಲಯದ ಸಿಐ ಬೈಜು ಕೆ. ಜೋಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ….

Read More
error: Content is protected !!