ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್‌ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಪೂರ್ವತಯಾರಿ, ತರಬೇತಿ ಹಾಗೂ ಮುದ್ರಣ ಪ್ರಕ್ರಿಯೆಗಳು…

Read More

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ

ಮಂಗಳೂರು:ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ರಕ್ಷಿಸಿದರೆ ಸಮಾಜ ತನ್ನಿಂತಾನೆ ಉತ್ತಮ ಪರಿಸರವನ್ನು ಹೊಂದುತ್ತದೆ….

Read More

ನಾಡೋಜ ಡಾ| ಕೃಷ್ಣ ಪ್ರಸಾದ್ ಕೂಡ್ಲು ರವರಿಗೆ ರಾಮಕ್ಷತ್ರಿಯ ರತ್ನ ಪ್ರಶಸ್ತಿ ಪುರಸ್ಕಾರ

ಉಡುಪಿಯ ನೀಲಾವರದಲ್ಲಿ ದಿನಾಂಕ 31-5-2026 ರಂದು “ರಾಮಕ್ಷತ್ರಿಯ ಜ್ಞಾನ- ಶಕ್ತಿ- ಅರ್ಥ ಸಮಾಗಮ” ಶೀರ್ಷಿಕೆಯ ಬೃಹತ್ ರಾಮಕ್ಷತ್ರಿಯ ಸಮಾಜದ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಪ್ರಮುಖ ಅಂಗವಾಗಿ “ರಾಜ್ಯಲಕ್ಷ್ಮಿ ವಿಜಯೋತ್ಸವ”, “ಕ್ಷತ್ರಿಯ ಹನುಮ ಧ್ವಜ” ಅನಾವರಣ ಹಾಗೂ “ಆರ್. ಕೆ. ಸಾಮ್ರಾಟ್” ರಾಮಕ್ಷತ್ರಿಯ ಡಿಜಿಟಲ್ ಸುದ್ದಿ ಮಾಧ್ಯಮ (E-Channel) ಲೋಕಾರ್ಪಣೆ ಮಾಡಲಾಯಿತು, ಹಾಗೂ ರಾಮಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪ್ರಸ್ತುತ ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ, ರಾಜಕೀಯ ನೇತಾರರುಗಳಿಗೆ, ರಕ್ಷಣಾ ಇಲಾಖೆಯವರಿಗೆ (ಪೊಲೀಸ್ ಮತ್ತು ಮಿಲಿಟರಿ),…

Read More

ವಿಶ್ವ ರಾಮಕ್ಷತ್ರಿಯ ಮಹಾಸಂಘ ಪದಾಧಿಕಾರಿಗಳಿಗೆ ಕನ್ನಡ ಭವನದ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “ಪ್ರದಾನ.

ಕಾಸರಗೋಡು :ವಿಶ್ವ ರಾಮಕ್ಷತ್ರಿಯ ಮಹಾಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷರು ಹಾಗೂ ಸಮಾಜ ಸೇವಕ, ಹಿರಿಯ ಸಂಘಟಕ ಶ್ರೀ ಎಚ್. ಆರ್ ಶಶಿಧರ್ ನಾಯ್ಕ್, ಉದ್ಯಮಿ, ಸಮಾಜಸೇವಕ, ವಿಶ್ವ ಸಂಘ ಉಪಾಧ್ಯಕ್ಷರಾದ ಶ್ರೀ ನಾಗರಾಜ್ ಕಲ್ಪತರು ಕುಂದಾಪುರ, ರಾಮಕ್ಷತ್ರಿಯ ಮಾಸಪತ್ರಿಕೆ ಸಂಪಾದಕರಾದ ಮಹಾಸಂಘ ಉಪಾಧ್ಯಕ್ಷರಾದ ಶ್ರೀ ಬಿ. ಎಮ್ ನಾಥ್ ಬೆಂಗಳೂರು, ವಿಶ್ವ ಮಹಾಸಂಘ ಕೋಶಾಧಿಕಾರಿ, ಧಾರ್ಮಿಕ ಮುಖಂಡ ಶ್ರೀ ಕರುಣಾಕರ ಉಡುಪಿ ಈ ಮೇಲಿನ ನಾಲ್ಕು ಮಂದಿಯ ಶ್ರೇಷ್ಠ ಸಮುದಾಯಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಸರ್ವತೋಮುಖ…

Read More

ಧರ್ಮತ್ತಡ್ಕ ಶಾಲೆಗೆ ಅಮಾನತುಗೊಂಡ ಶಿಕ್ಷಕ ಮರುಪ್ರವೇಶ: ಪೋಷಕರ ತೀವ್ರ ವಿರೋಧ

ಮಂಜೇಶ್ವರ : ಧರ್ಮತ್ತಡ್ಕದ ಎಂ.ಐ.ಎ.ಎಲ್.ಪಿ ಶಾಲೆಯಲ್ಲಿ ಅಮಾನತುಗೊಂಡಿದ್ದ ಶಿಕ್ಷಕ ಕೆ.ವಿ. ಜಯಪ್ರಸಾದ್ ಮರಳಿ ಶಾಲೆಗೆ ಹಾಜರಾಗಿರುವುದು ಮತ್ತೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಡಿಇಒ ಆದೇಶದ ಮೇರೆಗೆ ಬದಿಯಡ್ಕ ಪೊಲೀಸರ ಸಮ್ಮುಖದಲ್ಲಿ ಶಿಕ್ಷಕರು ಹಾಜರಾತಿ ದಾಖಲಿಸಿದ್ದು, ಇದನ್ನು ವಿರೋಧಿಸಿ ಪೋಷಕರು ತೀವ್ರ ಪ್ರತಿಭಟನೆ ನಡೆಸಿದರು.ಮಕ್ಕಳನ್ನು ತರಗತಿಯಲ್ಲಿ ಕೂಡಿ ಹಾಕುವುದು ಮತ್ತು ಶೌಚಾಲಯಕ್ಕೆ ಹೋಗಲು ಅವಕಾಶ ನೀಡದಿರುವುದು ಸೇರಿದಂತೆ ಈ ಶಿಕ್ಷಕನ ವಿರುದ್ಧ ಗಂಭೀರ ಆರೋಪಗಳಿವೆ. ಸದ್ಯ ತಮ್ಮ ಬೇಡಿಕೆಗೆ ಮನ್ನಣೆ ಸಿಗದಿದ್ದರೆ ಮಕ್ಕಳನ್ನು ಶಾಲೆ ಬದಲಾಯಿಸುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ….

Read More

ಪುತ್ತೂರು: ಪುತ್ತೂರಿನಲ್ಲಿ ಎಂಟನೇ ಆವೃತ್ತಿಯ ಹಲಸು-ಹಣ್ಣು ಮೇಳ

ಪುತ್ತೂರು: ಪುತ್ತೂರಿನಲ್ಲಿ ಎಂಟನೇ ಆವೃತ್ತಿಯ ಹಲಸು-ಹಣ್ಣು ಮೇಳವು ಜೂ.5ರಿಂದ 7ರ ತನಕ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ. ನವತೇಜ ಟ್ರಸ್ಟ್ ಪುತ್ತೂರು ಇವರ ನೇತೃತ್ವ ಮತ್ತು ‘ಮುಳಿಯ ಮ್ಯಾನೇಜ್ ಫಾರ್ಮ್ ಲ್ಯಾಂಡ್‌’ ಇವರ ಪ್ರಾಯೋಜಕತ್ವದಲ್ಲಿ ಈ ಮೇಳ ನಡೆಯಲಿದೆ. ನವತೇಜ ಟ್ರಸ್ಟ್‌ನ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಮತ್ತು ನವತೇಜ ಟ್ರಸ್ಟ್‌ನ ಟ್ರಸ್ಟಿ ಸುಹಾಸ್ ಮರಿಕೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 2014ರಲ್ಲಿ ನಾವು ಹಲಸಿನ ಮೇಳ ಆರಂಭಿಸಿದ್ದೇವು. ಇವತ್ತು 8ನೇ ಆವೃತ್ತಿಯಲ್ಲಿ ಹಲಸಿನ ಬೇಡಿಕೆ ಹೆಚ್ಚುತ್ತಿದೆ ಎಂದ ಅವರು…

Read More

ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಮೈಸೂರು , ತಾಲೂಕು ಪಂಚಾಯಿತಿ ಹುಣಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಮತ್ತು ಜಲ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ, ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ, ಮರಗಳ ನೆಡುವಿಕೆ, ನೀರಿನ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ…

Read More

ಸಂಸ್ಕಾರಯುತ ಶಿಕ್ಷಣ ಇಂದಿನ ಅಗತ್ಯ: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪುತ್ತೂರು, ಜೂನ್ 5: ಜಗತ್ತು ವೇಗವಾಗಿ ಬದಲಾಗುತ್ತಿದ್ದು, ಹೊಸ ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯವಾಗಿದೆ. ಶಿಕ್ಷಣದ ಮಾಧ್ಯಮಕ್ಕಿಂತಲೂ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಒಳಗೊಂಡ ಶಿಕ್ಷಣವೇ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಬನ್ನೂರು ಕೃಷ್ಣನಗರದ ಅಲುಂಬುಡ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ಗುಲಾಮಗಿರಿಯ ಮನೋಭಾವದಿಂದ ಹೊರಬರಲು ಹಾಗೂ…

Read More

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,:ಅಂಗಡಿಗಳು, ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಬೇಕು. ಜಿಲ್ಲಾ ಮತ್ತು…

Read More

ನೂತನ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಸಾರಥಿ ಬಿ.ಕೆ. ಹರಿಪ್ರಸಾದ್‌ ಅವರಿಗೆ ಶಾಸಕ ಡಾ.ಮಂಜುನಾಥ ಭಂಡಾರಿ ಅಭಿನಂದನೆ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಸೂತ್ರ ಹಿಡಿದಿರುವ ಜನಪ್ರಿಯ ನಾಯಕ ಮಾನ್ಯ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಹಿರಿಯ ಮುತ್ಸದ್ದಿ ಮಾನ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಮಾನ್ಯ ಡಿ.ಕೆ. ಶಿವಕುಮಾರ್ ಅವರ ಅದ್ವಿತೀಯ ರಾಜಕೀಯ ಮುತ್ಸದ್ದಿತನ, ಸಂಘಟನಾ ಶಕ್ತಿ ಹಾಗೂ ಅಪಾರ…

Read More
error: Content is protected !!