“ಬಂಟರ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ“ -ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.-ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ, ಧಾರ್ಮಿಕ ಸಭೆ
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳೆಯದಾಗಲಿ….