ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಕುಂಬಳೆ.

ಕುಂಬಳೆ: ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆಯ ಕುಂಬಳೆ ಶಾಖೆ ಪೌರ ಸ್ವಾಗತ ಕಾರ್ಯಕ್ರಮ ನಡೆಯಿತು . ರಾಜ್ಯ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗ ,ಹಿಂದುಳಿದ ವರ್ಗ ಖಾತೆ ಸಚಿವ ಓ .ಆರ್. ಕೇಳು ಉಧ್ಘಾಟಿಸಿದರು.ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ತಾಯಿರ ಯೂಸುಫ್ , ಸಂಸದ ರಾಜಮೋಹನ್ ಉಣ್ಣಿತಾನ್ ,ತ್ರಿಕರಿಪುರ ಶಾಸಕ ಎಂ ರಾಜಗೋಪಾಲನ್ , ಶಾಸಕ ಇ…

Read More

ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್.

ಬೆಂಗಳೂರು: “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು. “ಕರಾವಳಿ ಭಾಗದ ಜನಪ್ರತಿನಿಧಿಗಳು…

Read More

ಉಪ್ಪಳದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮ.

ಮಂಜೇಶ್ವರ : ಉಪ್ಪಳ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮಾಸ್ಟರ್ ಕಂಪ್ಯೂಟರ್ಸ್” ಎಂಬ ಸಂಸ್ಥೆಯಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಸಾಮಾಗ್ರಿಗಳು ಹೊತ್ತಿ ನಾಶಗೊಂಡಿದೆ.ಮಾಹಿತಿ ಅರಿತು ಸ್ಥಳಕ್ಕೆ ಉಪ್ಪಳ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಸ್ಥಳೀಯರಲ್ಲೂ ಆತಂಕ ಉಂಟಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ರೈಲ್ವೆ…

Read More

ಬೀದಿ ನಾಯಿಗಳ ಅಟ್ಟಹಾಸಕ್ಕೆ ನಾಗರಿಕರ ಮುಗಿಲು ಮುಟ್ಟಿದ ಆಕ್ರಂಧನ: ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ಮುಸ್ಲಿಂ ಲೀಗ್ ನಿಂದ ಬೃಹತ್ ಪ್ರತಿಭಟನೆ.

ಮಂಜೇಶ್ವರ, ಆಗಸ್ಟ್ 22 – ಬೀದಿ ನಾಯಿಗಳ ಅಟ್ಟಹಾಸದಿಂದ ತತ್ತರಿಸಿರುವ ಮಂಜೇಶ್ವರ ಗ್ರಾಮಸ್ಥರ ಮುಗಿಲು ಮುಟ್ಟಿದ ಆಕ್ರಂಧನಕ್ಕೆ ಕಿಂಚತ್ತೂ ಬೆಲೆ ಕಲ್ಪಿಸಿದ ಮಂಜೇಶ್ವರ ಗ್ರಾಮ ಪಂಚಾಯತು ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ನಾಗರಿಕರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಿನ ರೀತಿಯಲ್ಲಿ ಸ್ಪೋಟಕಗೊಳ್ಳುತ್ತಿರುವ ದೃಶ್ಯ ಕಂಡು ಬರುತ್ತಿದೆ.ಶುಕ್ರವಾರದಂದು ಪಂಚಾಯತು ಅಧಿಕಾರಸ್ಥರ ವಿರುದ್ಧ ಅವರ ನಿರ್ಲಕ್ಷ್ಯವನ್ನು ವಿರೋಧಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮಂಜೇಶ್ವರ ಪಂಚಾಯತು ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು. ಪಕ್ಷದ…

Read More

ತಿಮರೋಡಿ ಬಂಧನ ಓಕೆ , ಪೂಂಜಾ ಇಲ್ಲ ಯಾಕೆ ?ಇಷ್ಟೇ ಸಾಕೇ ? ಸಾರ್ವಜನಿಕರ ಪ್ರಶ್ನೆ .ಕಾಂಗ್ರೆಸ್ ನ ಮೃದು ನೀತಿಯೇ ?

ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದರೆಂಬ ಆರೋಪದ ಹಿನ್ನಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಉಜಿರೆಯ ಅವರ ನಿವಾಸದಿಂದ ಬಂಧಿಸಿದರು .ನಂತರ ಕಾನೂನಿನಂತೆ ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.ವ್ಯಕ್ತಿಯೊಬ್ಬರ ಬಗ್ಗೆ ಸಾರ್ವಜನಿಕವಾಗಿಯೋ ಸಾಮಾಜಿಕ ಜಾಲತಾಣಗಳ ಮೂಲಕವೋ ನಿಂದಿಸಿ ಅಪಮಾನ ಮಾಡಿದರೆ ಈ ರೀತಿಯ ಕ್ರಮಗೊಳ್ಳುವುದು ಉಚಿತ .ಆದರೆ ಸರಕಾರವು ಕೈಗೊಳ್ಳುವ ಕಾನೂನು…

Read More

ಮಂಜೇಶ್ವರ ಠಾಣಾ ಎ ಎಸ್ಸೈ ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆ : ಡೆತ್ ನೋಟ್ ಲಭಿಸಿರುವುದಾಗಿ ಸೂಚನೆ

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ಎಎಸ್ಟೈ ಯೊಬ್ಬರು ಪೊಲೀಸ್ ಕ್ಟಾರ್ಟರ್ಸ್ ನೊಳಗೆ ಆತ್ಮಹತ್ಯೆಗೈದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಕುತ್ತಿಕೋಲ್ ನಿವಾಸಿ ಮಧು (50) ಸಾವನ್ನಪ್ಪಿದ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಮಾಹಿತಿ ಅರಿತು ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಒಂದು ಡೆತ್ ನೋಟ್ ಕ್ವಾರ್ಟರ್ಸ್‌ನಿಂದ ಪತ್ತೆಯಾಗಿದೆ ಎಂಬ ಮಾಹಿತಿ ಇದೆ. ಮಧು ಅವಿವಾಹಿತರಾಗಿದ್ದರು. ಠಾಣೆಗೆ ಬರುವ ನಾಗರಿಕರೊಡನೆ ಉತ್ತಮ ಸಂಬಂಧ…

Read More

ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ವತಿಯಿಂದ ಪ್ರಶಾಂತ್ ರೈ ಮೆಮೋರಿಯಲ್ ಕ್ರಿಕೆಟ್ ಪಂದ್ಯಾಟ

ಮಿಯಪದವು : ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ಕಾಸರಗೋಡು ಇದರ ನೇತೃತ್ವದಲ್ಲಿ ದಿವಂಗತ ಅಧ್ಯಾಪಕ ಪ್ರಶಾಂತ್ ರೈ ಅವರ ಸ್ಮರಣಾರ್ಥ ಇಂಡಿಪೆಂಡೆನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮೀಯಪದವು ಶಾಲಾ ಮೈದಾನದಲ್ಲಿ ಜರಗಿತು. ಪಂದ್ಯಾಟವನ್ನು ಮೀಯಪದವು ಯು ಪಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಉದ್ಘಾಟಿಸಿದರು. ಟಿ ಎಸ್ಸಿ ಯ ಅಧ್ಯಕ್ಷರಾದ ಸಂಜೀವ ಸಿ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರುಗಳಾದ ಉದಯ್ ಸಾರಂಗ್ ಮತ್ತು ಸದಾಶಿವ ಬಾಲಮಿತ್ರ,ಜತೆ ಕಾರ್ಯದರ್ಶಿ ರಘುವೀರ್ ಉಪಸ್ಥಿತರಿದ್ದರು. ಟಿ ಎಸ್ಸಿ ಕಾರ್ಯದರ್ಶಿ ಪ್ರಶಾಂತ್…

Read More

ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಇನ್ನಾದರೂ ಬಡವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್

ಮಂಗಳೂರಿನ ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ದಲ್ಲಾದರೂ ಆ ಬೇಡಿಕೆ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಈ ಭಾಗದ ಹಿಂದಿನ ಶಾಸಕರು 2017 ರಲ್ಲೇ 930 ಬಡ ಕುಟುಂಬಗಳಿಗೆ ಹಕ್ಕುಪತ್ರ ಕೊಟ್ಟು ತರಾತುರಿಯಲ್ಲಿ, ಕಾಮಗಾರಿಯ ಗುದ್ದಲಿ ಪೂಜೆ ಸಹ ಮಾಡಿ ಬಿಟ್ಟಿದ್ದರು. ಆದರೆ ಉದ್ದೇಶಿತ ಯೋಜನೆಯ…

Read More

ಬೀದಿ ನಾಯಿಗಳ ಹಾವಳಿಯಿಂದ ತತ್ತರಿಸಿದ ಜನತೆ : ಮಂಜೇಶ್ವರ ಗ್ರಾ. ಪಂ. ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ.

ಮಂಜೇಶ್ವರ: ಬೀದಿ ನಾಯಿಗಳ ದಾಳಿಯಿಂದ ಹೈರಾಣಾಗಿರುವ ಮಂಜೇಶ್ವರದ ಜನತೆ ಗುರುವಾರ ಗ್ರಾಮ ಪಂಚಾಯತ್‌ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಧರಣಿ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರಿಗೂ ಆತಂಕ ಮೂಡಿಸಿರುವ ಈ ಸಮಸ್ಯೆಯ ಬಗ್ಗೆ ವರ್ಷಗಳ ಹಿಂದೆಯಿಂದಲೇ ಹಲವಾರು ಬಾರಿ ದೂರು ನೀಡಿದರೂ ಕೂಡ ಕ್ರಮ ಕೈಗೊಳ್ಳದೆ ಇದ್ದ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯತೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ ಮಂಜೇಶ್ವರ ರಿಜಿಸ್ಟ್ರಾರ್ ಕಚೇರಿ ಪರಿಸರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ,…

Read More

ಕೇರಳ ಕಾಂಗ್ರೆಸ್ ನಲ್ಲಿ ಅಶ್ಲೀಲಾ ಸಂದೇಶ ವಿವಾದ. ಇಕ್ಕಟ್ಟಿನಲ್ಲಿ ಕೆಪಿಸಿಸಿ..ಶಿಸ್ತು ಕ್ರಮಕ್ಕೆ ಆಗ್ರಹಿಸಿ ವಿಪಕ್ಷ ಗಳಿಂದ ವ್ಯಾಪಕ ಪ್ರತಿಭಟನೆ.ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್

ತಿರುವನಂತಪುರಂ : ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಹಾಗೂ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯ ಪೂರ್ವ ತಯಾರಿಯಲ್ಲಿದ್ದ ರಾಜ್ಯ ಕಾಂಗ್ರೆಸ್ ಸಮಿತಿಗೆ ಯುವ ಕಾಂಗ್ರೆಸ್ ಅಧ್ಯಕ್ಷರ ಅಶ್ಲೀಲಾ ಸಂದೇಶ ವಿವಾದ ತೀವ್ರ ಮುಜುಗರ ಉಂಟು ಮಾಡಿದ್ದೂ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.ಉಭಯ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಪ್ರಚಾರ ಕಾರ್ಯದಲ್ಲಿ ಇದೊಂದು ಅಸ್ತ್ರವಾಗಲಿದೆ ಎಂಬ ಆತಂಕ ಕೆಪಿಸಿಸಿ ಗೆ ಇದೆ. ಯುವ ನಟಿ ಹಾಗೂ ಮಾಜಿ ಮಾಧ್ಯಮ ಪ್ರತಿನಿಧಿ ಯಾದ ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲಾ…

Read More
error: Content is protected !!