ಮಂಜೇಶ್ವರ ಗ್ರಾಮ ಪಂಚಾಯತು ಹಾಗೂ ಕೃಷಿಭವನದ ಸಂಯುಕ್ತಾಶ್ರಯದಲ್ಲಿ ಕೃಷಿಕ ದಿನಾಚರಣೆ.
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ಹಾಗೂ ಕೃಷಿಭವನದ ಸಂಯುಕ್ತಾಶ್ರಯದಲ್ಲಿ ಕೃಷಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಜೇಶ್ವರ ಕಲಾಸ್ಪರ್ಶಂ ಆಡಿಯಟೋರಿಯಂನಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಂಜೇಶ್ವರ ವಿಧಾನಸಭಾ ಸದಸ್ಯ ಎ.ಕೆ.ಎಂ ಅಶ್ರಫ್ ಉದ್ಘಾಟಿಸಿ ಮಾತನಾಡಿದರು. ನಂತರ, ಅವರು ವಿವಿಧ ವರ್ಗಗಳ ಕೃಷಿಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮೊಂತೇರೋ ವಹಿಸಿದ್ದರು. ಕೃಷಿ ಅಧಿಕಾರಿ ಶ್ರೀ ಶ್ರೀನಾಥ್ ಸ್ವಾಗತ ಭಾಷಣ ನೀಡಿದರು. ವೇದಿಕೆಯಲ್ಲಿ ಪಂಚಾಯತು ಉಪಾಧ್ಯಕ್ಷ…