ಸಾಮರಸ್ಯದ ತೂಮಿನಾಡು: ದೈವಸ್ಥಾನದ ಹೊರೆಕಾಣಿಕೆ ಮೆರವಣಿಗೆಗೆ ಮುಸ್ಲಿಂ ಯುವಕರಿಂದ ತಂಪು ಪಾನೀಯ ಸೇವೆ

ಮಂಜೇಶ್ವರ: ಜಾತಿ-ಧರ್ಮಗಳ ಹೆಸರಿನಲ್ಲಿ ದ್ವೇಷದ ಕಿಡಿ ಹರಡುತ್ತಿರುವ ಇಂದಿನ ಕಾಲಘಟ್ಟದಲ್ಲಿ, ತೂಮಿನಾಡಿನ ಮುಸ್ಲಿಂ ಯುವಕರು ಮಾನವೀಯತೆ ಮತ್ತು ಸೌಹಾರ್ದತೆಯ ಹೊಸ ಮನ್ವಂತರಕ್ಕೆ ಸಾಕ್ಷಿಯಾಗಿದ್ದಾರೆ. ತೂಮಿನಾಡು ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೈವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಹೊರೆಕಾಣಿಕೆ ಮೆರವಣಿಗೆಯಲ್ಲಿ ಭಾಗವಹಿಸಿದ ಭಕ್ತಾದಿಗಳಿಗೆ ಮೊಸರು ವಿತರಿಸುವ ಮೂಲಕ ಈ ಯುವಕರು ಕೋಮು ಸೌಹಾರ್ದತೆಯನ್ನು ಮೆರೆದಿದ್ದಾರೆ.​ಗುರುವಾರದಿಂದ ಆರಂಭವಾಗಲಿರುವ ಬ್ರಹ್ಮಕಲಶ ಹಾಗೂ ವರ್ಷಾವಧಿ ನೇಮೋತ್ಸವದ ಹಿನ್ನೆಲೆಯಲ್ಲಿ ಅದ್ಧೂರಿ ಹೊರೆಕಾಣಿಕೆ ಮೆರವಣಿಗೆ ಆಯೋಜಿಸಲಾಗಿತ್ತು. ಸುಡುವ ಬಿಸಿಲನ್ನೂ ಲೆಕ್ಕಿಸದೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಭಕ್ತರಿಗೆ, ಸ್ಥಳೀಯ…

Read More

ಮೀಂಜ–ಮಂಗಲ್ಪಾಡಿ ಸಂಪರ್ಕ ಸೇತುವೆ ನಿರ್ಲಕ್ಷ್ಯ: ಸ್ಥಳ ಪರಿಶೀಲಿಸಿದ ಸುರೇಂದ್ರನ್

ಮಂಜೇಶ್ವರ, ಏಪ್ರಿಲ್ 3: ನಾಲ್ಕು ವರ್ಷಗಳ ಹಿಂದೆ ಕುಸಿದು ಬಿದ್ದರೂ ಇನ್ನೂ ಮರುನಿರ್ಮಾಣವಾಗದ ಮೀಂಜ–ಮಂಗಲ್ಪಾಡಿ ಸಂಪರ್ಕದ ದೇರಂಬಳ ಸೇತುವೆಯನ್ನು Bharatiya Janata Party (ಬಿಜೆಪಿ) ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುರೇಂದ್ರನ್ ಕೆ. ಭೇಟಿ ನೀಡಿ ವೀಕ್ಷಿಸಿದರು. ಸ್ಥಳ ಪರಿಶೀಲಿಸಿದ ವೇಳೆ ಮಾತನಾಡಿದ ಅವರು, ಸೇತುವೆ ಕುಸಿದು ನಾಲ್ಕು ವರ್ಷ ಕಳೆದರೂ ಪುನರ್ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳದಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು. ಸ್ಥಳೀಯ ಜನರು ಸಂಚಾರದ ತೊಂದರೆ ಅನುಭವಿಸುತ್ತಿದ್ದು, ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು….

Read More

ಕೊಳ್ನಾಡು ಆರೋಗ್ಯ ಸೇವೆಗೆ ಹೊಸ ಚೈತನ್ಯ: ಕುಡ್ತಮುಗೇರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ₹30 ಲಕ್ಷ ಅನುದಾನ ಮಂಜೂರು

ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕುಡ್ತಮುಗೇರು ಪ್ರಾಥಮಿಕ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಎಂ.ಆರ್.ಪಿ.ಎಲ್ CSR ನಿಧಿಯಿಂದ ₹30 ಲಕ್ಷ ಅನುದಾನ ಮಂಜೂರಾಗಿದೆ. ವಿಧಾನಪರಿಷತ್ ಶಾಸಕ ಡಾ. ಮಂಜುನಾಥ ಭಂಡಾರಿ ಅವರ ಶಿಪಾರಸ್ಸಿನ ಮೇರೆಗೆ ಈ ಅನುದಾನ ಬಿಡುಗಡೆಯಾಗಿದ್ದು, ಸ್ಥಳೀಯ ಜನರಲ್ಲಿ ಅಪಾರ ಸಂತೋಷ ಮೂಡಿಸಿದೆ. ಈ ಮೂಲಕ ಹಲವು ವರ್ಷಗಳಿಂದ ಕಟ್ಟಡದ ಕೊರತೆಯಿಂದ ಬಳಲುತ್ತಿದ್ದ ಆರೋಗ್ಯ ಕೇಂದ್ರಕ್ಕೆ ಹೊಸ ಜೀವ ಬಂದಿದೆ. ಈ ಕೇಂದ್ರದ ಸ್ಥಾಪನೆಗಾಗಿ ಹಿಂದಿನಿಂದಲೂ ಶ್ರಮಿಸುತ್ತಿದ್ದ ಕೊಳ್ನಾಡು ಗ್ರಾಮ ಪಂಚಾಯತ್…

Read More

ಕಾಸರಗೋಡಿನಲ್ಲಿ ಚುಟುಕು ಸಾಹಿತ್ಯೋತ್ಸವ-2026: ಸಾಹಿತ್ಯ ಚಟುವಟಿಕೆಗಳಿಗೆ ಹೊಸ ಚೈತನ್ಯ

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಕವಿಗಳು ಹಾಗೂ ಸಾಹಿತಿಗಳಲ್ಲಿರುವ ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಚುಟುಕು ಸಾಹಿತ್ಯೋತ್ಸವ–2026 ಹಾಗೂ ಕಾಸರಗೋಡು-ಕರ್ನಾಟಕ ಚುಟುಕು ಕವಿಗೋಷ್ಠಿ ಭರ್ಜರಿಯಾಗಿ ನಡೆಯಿತು. ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000ರಲ್ಲಿ ಸ್ಥಾಪನೆಯಾದ ಕಾಸರಗೋಡು ಜಿಲ್ಲಾ ಘಟಕವು ಕಳೆದ 26 ವರ್ಷಗಳಿಂದ ನಿರಂತರವಾಗಿ ಸಾಹಿತ್ಯ ಹಾಗೂ ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ…

Read More

ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಪರ ರಾಜೇಶ್ ನಾಯ್ಕ್ ಮನೆಮನೆಗೆ ಮತಯಾಚನೆ

ಮಂಜೇಶ್ವರ, ಎಪ್ರಿಲ್ 9ರಂದು ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು Bharatiya Janata Party (ಬಿಜೆಪಿ) ಪರ ಪ್ರಚಾರ ಚಟುವಟಿಕೆಗಳು ತೀವ್ರಗೊಂಡಿವೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಕೆ. ಅವರ ಪರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪುತ್ತಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗಡಿಮುಗೇರು ಮತ್ತು ದೇಲಂಪಾಡಿ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಈ ಬಾರಿ ನಿಮ್ಮ ಮತವನ್ನು ಬದಲಾಯಿಸಿ ನೋಡಿ, ಬದಲಾವಣೆಯ ಹೊಸ…

Read More

ಜನವಿರೋಧಿ ನೀತಿಗೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೈಂದೂರು, ಏಪ್ರಿಲ್ 3: ರಾಜ್ಯ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ Bharatiya Janata Party (ಬಿಜೆಪಿ) ಕಾರ್ಯಕರ್ತರು ಗುರುವಾರ ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರವು ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಬೈಂದೂರು ಮಂಡಲದ ವತಿಯಿಂದ ನಡೆದ ಪ್ರತಿಭಟನೆಯನ್ನು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ನೇತೃತ್ವ ವಹಿಸಿದ್ದರು. ಈ ವೇಳೆ ಪಿಡಿಒ ಮೂಲಕ…

Read More

ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು. ಗ್ರಾಮ ಪಂಚಾಯತ್‍ಗಳÀ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೇ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚಿಸಿದರು….

Read More

ಕನ್ನಡದ ಸಾಮರಸ್ಯದ ನೆಲೆಗಳು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಂದ ಭವ್ಯ ಲೋಕಾರ್ಪಣೆ – ಮಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ ಯಶಸ್ವಿ

ದಿನಾಂಕ 13/04/2026 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡದ ಸಾಮರಸ್ಯದ ನೆಲೆಗಳು” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗುತ್ತಿರುವ ಮಹತ್ವದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭವ್ಯವಾಗಿ ನಡೆಯಲಿದೆ. ಈ ಪುಸ್ತಕಗಳು ಕರ್ನಾಟಕದ ಸಾಮರಸ್ಯ ಸಂಸ್ಕೃತಿ, ಬಹುಮುಖ ಪರಂಪರೆ ಹಾಗೂ ವೈವಿಧ್ಯತೆಯೊಳಗಿನ ಏಕತೆಯನ್ನು ಪ್ರತಿಬಿಂಬಿಸುವ ಅಮೂಲ್ಯ ಕೃತಿಗಳಾಗಿವೆ. ಈ ಮಹತ್ವದ ಕಾರ್ಯಕ್ರಮದ ಸಿದ್ಧತೆಗಳ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಡಾ‌. ಪುರುಷೋತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಯಶಸ್ವಿಯಾಗಿ…

Read More

ಮಂಗಳೂರಿನಲ್ಲಿ CITU ರಾಜ್ಯ ಮಟ್ಟದ ಕಾರ್ಯಾಗಾರಕ್ಕೆ ನಾಳೆ ಚಾಲನೆ

ದೇಶದ ಬಲಿಷ್ಠ ಕೇಂದ್ರ ಕಾರ್ಮಿಕ ಸಂಘಟನೆಯಾದ CITUನ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ನಾಳೆಯಿಂದ ಮೂರು ದಿನಗಳ ಕಾಲ ಮಂಗಳೂರಿನ ಸಂದೇಶ ಸಂಸ್ಥೆಯಲ್ಲಿ ಜರುಗಲಿದ್ದು,ಈ ಹಿನ್ನೆಲೆಯಲ್ಲಿ CITUನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು CITU ಪ್ರಕಟಣೆಯೊಂದರಲ್ಲಿ ತಿಳಿಸಿದೆ. CITU ರಾಷ್ಟ್ರೀಯ ಕಾರ್ಯದರ್ಶಿಗಳಾದ ಕೆ ಎನ್ ಉಮೇಶ್,ರಾಷ್ಟ್ರೀಯ ಉಪಾಧ್ಯಕ್ಷರಾದ ಮೀನಾಕ್ಷಿ ಸುಂದರಂ,ಎಸ್ ವರಲಕ್ಷ್ಮಿ,ರಾಜ್ಯದ ಕಾರ್ಮಿಕ ಚಳುವಳಿಯ ಹಿರಿಯ ನಾಯಕರಾದ ವಿಜೆಕೆ ನಾಯರ್, ರಾಜ್ಯದ ನಾಯಕರಾದ ಕೆ ಮಹಾಂತೇಶ್,ಸೈಯ್ಯದ್ ಮುಜೀಬ್,ಪ್ರತಾಪ್…

Read More

ಮಂಜೇಶ್ವರದಲ್ಲಿ ಬಿಜೆಪಿ ಪರ ಚುನಾವಣಾ ಅಖಾಡಕ್ಕಿಳಿದ ಶಾಸಕ ಕಾಮತ್

ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಗಡಿಭಾಗದ ಪ್ರತಿಷ್ಠಿತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ರವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ ಪರಿಸರ, ಕುಂಬ್ಳೆ ಪಂಚಾಯತ್ ವ್ಯಾಪ್ತಿಯ ಕುಂಟಗೇರಡ್ಕದ ಪರಿಶಿಷ್ಟ ಪಂಗಡ ಕಾಲೋನಿ, ಗುಡ್ಡೆಕೇರಿ, ಬಡಾಜೆ ಪ್ರದೇಶಗಳು ಸೇರಿದಂತೆ ಹಲವು ಮನೆಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದರು. ನರೇಂದ್ರ ಮೋದಿ…

Read More
error: Content is protected !!