ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಅಡ್ಕತ್ತಬೈಲು ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಅಡ್ಕತ್ತಬೈಲು ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಇತೀಚೆಗೆ ನಡೆಯಿತ್ತು . ಕಾಸರಗೋಡು ತಾಲೂಕಿನ ಯೋಜನಾಧಿಕಾರಿ ಶ್ರೀ ದಿನೇಶ್ ಅವರು ದೇವಸ್ಥಾನದ ವಠಾರ ಸ್ವಚ್ಛತಾ ಇದ್ರೆ ಬರುವ ಭಕ್ತರ ಮನಸ್ಸಿಗೆ ನೆಮ್ಮದಿ , ಶಾಂತಿಯನ್ನ ನೀಡುತ್ತದೆ ಎoದು ತಿಳಿಸುತ್ತಾ , ತಾಲೂಕಿನಲ್ಲಿ ಪ್ರಥಮವಾಗಿ ನಡೆಯುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷರಾದ…

Read More

ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ಭಾರೀ ಮೊತ್ತದ ನಗದು ವಶ ಪಡಿಸಿದ ಮಂಜೇಶ್ವರ ಅಬಕಾರಿ

ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 20 ಲಕ್ಷದ 80ಸಾವಿರ ರೂ ನಗದನ್ನು ವಶ ಪಡಿಸಿ ಓರ್ವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜಯಶೀಲ ಪುಟ್ಟಣ್ಣ ಶೆಟ್ಟಿ (52) ಎಂಬ ವ್ಯಕ್ತಿ ಬಂಧಿತ ಆರೋಪಿಯೆಂದು ಹೆಸರಿಸಲಾಗಿದೆ. ಶುಕ್ರವಾರ ಸಂಜೆ ಮಂಜೇಶ್ವರ ಅಬಕಾರಿ ಚೆಕೋಸ್ಟಿನಲ್ಲಿ ಅಬಕಾರಿ ಸರ್ಕಲ್ ಇನ್ಸೆಕ್ಟರ್ ಷಿಜಿಲ್ ಕುಮಾ‌ರ್ ನೇತೃತ್ವದಲ್ಲಿ ನಡೆಸಿದ ಬಸ್‌ ತಪಾಸಣೆಯಲ್ಲಿ ದಾಖಲೆ ರಹಿತ ನಗದು ವಶಪಡಿಸಲಾಯಿತು. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್ಸಿನಲ್ಲಿ ಹಣ ಸಾಗಾಟ ನಡೆದಿತ್ತು. ಈ ಸಂಬಂಧ ವಿಚಾರಣೆ ನಡೆಯುತ್ತಿದ್ದು, ಈ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ .ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ಶ್ರೀ ಗೋಪಾಲಕೃಷ್ಣ ಶಾಲೆ ಕೂಡ್ಲುನಲ್ಲಿ ನಿನ್ನೆ ನಡೆಯಿತ್ತು . ಕೂಡ್ಲು ಶಾಲಾ ಮುಖ್ಯೋಪಾಧ್ಯಾರಾದ ಶ್ರೀಮತಿ ಶ್ರೀಜಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು . ಕೂಡ್ಲು ಶಾಲೆಯ PTA ಅಧ್ಯಕ್ಷರಾದ ಶ್ರೀ ಶ್ರೀಧರ ಅಧ್ಯಕ್ಷ ಸ್ಥಾನ ವಹಿಸಿದರು . ಎಕ್ಸೈಸಸ್ ಆಫೀಸರ್ ಶ್ರೀ ಕಣ್ಣನ್ ಕುಂಞಿ ಅವರು ದುಶ್ಟಟಗಳ ಬಗ್ಗೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಜಾಗೃತಿ…

Read More

ಜನರ ಅನುಕೂಲಕ್ಕಾಗಿ ಮೇಲ್ಸೇತುವೆ ನಿರ್ಮಿಸಿದ್ದರೂಅಪಾಯಕ್ಕೆ ಹೆದೆಗೊಟ್ಟು ಸಾಗುತ್ತಿರುವ ಪಾದಚಾರಿಗಳು

ಮಂಜೇಶ್ವರ: ನೂತನವಾಗಿ ನಿರ್ಮಾಣಗೊಂಡ ಮಂಜೇಶ್ವರದ ರಾಗಂ ಜಂಕ್ಷನ್ ರಾಷ್ಟ್ರೀಯ ಷಟ್ಪಥ ರಸ್ತೆ ಹೆದ್ದಾರಿಗಳು ದಿನದಿಂದ ದಿನಕ್ಕೆ ಅಪಾಯಕರವಾಗುತ್ತಿದೆ ಈ ರಸ್ತೆಯಲ್ಲಿ ಕಂಡುಬರುತ್ತಿರುವ ಕೆಲವ್ಲೆಂದು ದೃಶ್ಯಗಳು ಜನರಲ್ಲಿ ಆತಂಕ ಹಾಗೂ ಭಯವನ್ನು ಮೂಡಿಸುತ್ತಿವೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಮೇಲ್ಸೇತುವೆ (ಫ್ಲೈಓವರ್) ನಿರ್ಮಿಸಲಾಗಿದ್ದರೂ, ವಿದ್ಯಾರ್ಥಿಗಳು ಸುರಕ್ಷಿತವಾಗಿ ಅದನ್ನು ಬಳಸದೆ ಅಪಾಯಕರವಾದ ರೀತಿಯಲ್ಲಿ ತಡೆಗೋಡೆಗಳ ಮೇಲಿಂದ ಹಾರಿ ರಸ್ತೆ ದಾಟುತ್ತಿರುವುದು ನಿತ್ಯ ದರ್ಶನವಾಗಿದೆ. ಮಂಜೇಶ್ವರ ರಾಗಂ ಜಂಕ್ಷನ್ ಬಳಿಯ ರೈಲ್ವೇ ನಿಲ್ದಾಣಕ್ಕೆ ತಲುಪಲು ಮಂಜೇಶ್ವರ ಗೋವಿಂದ ಪೈ ಕಾಲೇಜು ಹಾಗೂ…

Read More

ತಂಡಗಳ ಮಧ್ಯೆ ಮಾರಾಮಾರಿ: 17 ಮಂದಿ ವಿರುದ್ಧ ಕೇಸು ಒಬ್ಬ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯ ಉದ್ಯಾವರ ಮಾಡ ಎಂಬಲ್ಲಿ ಗುರುವಾರ ಎರಡು ತಂಡಗಳ ಮಧ್ಯೆ ನಡೆದ ಮಾರಾಮಾರಿಗೆ ಸಂಬಂಧಿಸಿ 17 ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಗುರುವಾರದಂದು ಉದ್ಯಾವರ ಮಾಡ ಪರಿಸರದಲ್ಲಿ ಎರಡು ತಂಡಗಳ ಮಧ್ಯ ಪರಸ್ಪರ ಘರ್ಷಣೆ ನಡೆದಿದೆ. ಇದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿದ ತಂಡಗಳನ್ನು ಚದುರಿಸಿದ್ದಾರೆ. ಈ ಸಂದರ್ಭ ಉದ್ಯಾವರ ಬಿ.ಎಸ್‌.ನಗರ ನಿವಾಸಿ ಮೊಹಮ್ಮದ್ ಬಿಲಾಲ್…

Read More

ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ,ದ್ವಿಚಕ್ರ ವಾಹನಕ್ಕೆ ಡಿಕ್ಕಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರನಿಗೆ ಗಂಭೀರವಾಗಿ ಗಾಯಗೊಂಡಿದ್ದು,ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.‌ಕಲ್ಲಡ್ಕ ನಿವಾಸಿ ಸುಶಾಂತ್ ಕುಮಾರ್ ಎಂಬಾತನಿಗೆ ಲಾರಿ ಡಿಕ್ಕಿಯಾಗಿದೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್ .ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದ್ದು, ಚಾಲಕ ಅಬ್ದುಲ್‌ ನೂರ್ ಖಾಜಿ ಎಂಬಾತ ನೆಹರುನಗರದಲ್ಲಿರುವ ಅನಧಿಕೃತ ‌ಕ್ರಾಸ್ ನಲ್ಲಿ ಬಂದಿದ್ದಲ್ಲದೆ ರಾಂಗ್ ಸೈಡ್ ನಲ್ಲಿ ಚಲಾಯಿಸಿಕೊಂಡು…

Read More

ತಿರೂರಂಗಾಡಿ ನಿವಾಸಿ ಮೆಟ್ರೋ ರೈಲು ಸೇತುವೆಯಿಂದ ಜಿಗಿದು ಸಾವು

ಕೊಚ್ಚಿ: ಮೆಟ್ರೋ ರೈಲು ಸೇತುವೆಯ ಮೇಲಿಂದ ಜಿಗಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತಪಟ್ಟವರು ತಿರೂರಂಗಾಡಿ ಚುಳ್ಳಿಪ್ಪಾರ ವೀರಾಶೇರಿ ಕುಂಞಿಮೊಯ್ದೀನ್ ಅವರ ಪುತ್ರ ನಿಸಾರ್. ಈ ಘಟನೆ ತ್ರಿಪ್ಪುಣಿತುರ ವಡಕ್ಕೇಕೋಟ-ಎಸ್.ಎನ್. ಜಂಕ್ಷನ್ ಮೆಟ್ರೋ ನಿಲ್ದಾಣಗಳ ನಡುವೆ ನಡೆದಿದೆ. ಆತನನ್ನು ತೀವ್ರ ಗಾಯಗಳೊಂದಿಗೆ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತದೇಹವನ್ನು ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು. ವಡಕ್ಕೇಕೋಟದಿಂದ ತ್ರಿಪ್ಪುಣಿತುರಾಗೆ ಟಿಕೆಟ್ ಪಡೆದ ನಂತರ ನಿಸಾರ್ ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಿದ್ದ. ನಂತರ ಆತ ಪ್ಲಾಟ್‌ಫಾರ್ಮ್‌ನಿಂದ ಹೊರಗೆ ಓಡಿ ಹೋಗಿದ್ದಾನೆ. ಇದನ್ನು…

Read More

ಜೀಪು ಪಲ್ಟಿಯಾಗಿ ಕೃಷಿಕ ಸಾವು

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ ಜೀಪನ್ನು ಹತ್ತಿಸಲು ಪ್ರಯತ್ನಿಸಿದಾಗ…

Read More

ಕುಡ್ತಮುಗೇರು: ಕಾರು ಡಿಕ್ಕಿ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ

ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ‌ ಗಾಯಗೊಂಡ ಘಟನೆ ಆ.೮ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರ‌ವಾಹನದ‌ ಟಯರ್ ಪಂಚರ್ ಆಗಿತ್ತು. ಆದ್ದರಿಂದ ಅವರು ತಮ್ಮ ವಾಹನವನ್ನು‌ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೆ ಪಕ್ಕದಲ್ಲಿ ನಿಂತಿದ್ದ ವೇಳೆ ಪುತ್ತೂರು ಭಾಗದಿಂದ ಸಾಲೆತ್ತೂರು…

Read More

ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಇನ್ನಿಲ್ಲ

ಉಡುಪಿ: ಕಾಂತಾರ ಚಿತ್ರದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಹೃದಯಾಘಾತದಿಂದ ನಿಧನರಾದರು.ಪೆರ್ಡೂರಿನ ಮೂಲದವರು ಮತ್ತು ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಅಧಿಕಾರಿಯಾಗಿದ್ದ ಪ್ರಭಾಕರ್, ‘ಕಾಂತಾರ’ದಲ್ಲಿ ವಕೀಲರ ಪಾತ್ರವನ್ನು ನಿರ್ವಹಿಸುವ ಮೂಲಕ ಪ್ರಸಿದ್ದರಾಗಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರು ಎರಡು ದಿನಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More
error: Content is protected !!