ಮುಸುಕುದಾರಿಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣದ ದೂರುದಾರ ತನಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣದ ಬೆನ್ನಲ್ಲೇ ದೂರುದಾರ ತನ್ನ ಮೇಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ತನಗೆ ಗನ್ ಮ್ಯಾನ್ ಭದ್ರತೆ ಒದಗಿಸುವಂತೆ ಮನವಿ ಮಾಡಿದದಗಿ ದೂರುದಾರ ಪರ ವಕೀಲರು ಎಸ್ ಐಟಿ ತಂಡಕ್ಕೆ ಲಿಖಿತ ಮನವಿ ಮಾಡಿದ್ದಾರೆ.ಶೋಧಕಾರ್ಯ ಮುಕ್ತಾಯವಾದ ಬಳಿಕವೂ ತನಗೆ ಗನ್ ಮ್ಯಾನ್ ಭದ್ರತೆ ಕಲ್ಪಿಸುವಂತೆ ಎಸ್ ಐಟಿ ಎಸ್‌ ಪಿ ಜಿತೇಂದ್ರ ದಯಾಮ್…

Read More

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ, ಹಿಂದೂ ರುದ್ರಭೂಮಿಗಳ ನವೀಕರಣ, ಸ್ತ್ರೀ ಸಬಲೀಕರಣ,…

Read More

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ’ಧರ್ಮಸ್ಥಳ’ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಆಘಾತಕಾರಿ ಸಂಗತಿ

ಮಂಗಳೂರು ಹೊರ ವಲಯದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣಾ ಮಾಹಿತಿ ಆರೋಪಿಯು, ಧರ್ಮಸ್ಥಳದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಎನ್ನುವುದನ್ನು ಬೆಳಕಿಗೆ ತಂದಿದೆ.ನವೆಂಬರ್ 2022ರಲ್ಲಿ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ಮಂಗಳೂರಿನಲ್ಲಿ ಹಿಂದೆ ಆಟೋರಿಕ್ಷಾದಲ್ಲಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿತ್ತು. ಜಾರಿ ನಿರ್ದೇಶನಾಲಯವು, ಪ್ರಮುಖ ಆರೋಪಿ ಸಯ್ಯದ್ ಯಾಸಿನ್ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮುಟ್ಟುಗೋಲು…

Read More

ನಿಟ್ಟೆ ಗ್ರಾಮದಲ್ಲಿ ಶ್ರೀ ಗಂಧದ ಮರ ಕಳವು ಪ್ರಕರಣ – ಸೊತ್ತು ಸಹಿತ ಮೂವರ ಅಂಧರ್

ಕಾರ್ಕಳ : ಜೂನ್ 16ರಂದು ರಾತ್ರಿ ಸಮಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ತೋಟದಲ್ಲಿದ್ದ ಶ್ರೀಗಂಧದ ಮರವನ್ನು ಕಳವು ಮಾಡಿರುವ ಕೇಸ್ ಗೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹೇನೊಟ್ಟುವಿನ ದಿನೇಶ್ ಶೆಟ್ಟಿಗಾರ್ ಎಂಬುವವರಿಗೆ ಸೇರಿದ್ದ 4 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಗೈದಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂ.17ರಂದು ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್. ಮತ್ತು…

Read More

ಸರ್ಕಾರದ ಬೊಕ್ಕಸದಿಂದ ಪಿಂಚಣಿ ಕೊಡಿ. ಜನರ ಜೇಬಿನಿಂದ ಅಲ್ಲ :- ಶಾಸಕ ಕಾಮತ್

ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು, ಮುಚ್ಚಿಕೊಳ್ಳಲು ಪ್ರಯತ್ನಿಸಿ, “ಆ ನಿರ್ಧಾರ ನಮ್ಮದಲ್ಲ, ಹಿಂದಿನ ಸರ್ಕಾರದ್ದು” ಎಂದು ಬಾಲಿಶ ಹೇಳಿಕೆ ನೀಡಿ ಜನತೆಯ ಮುಂದೆ ಇನ್ನಷ್ಟು ಬೆತ್ತಲಾಗುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಅವಧಿಯ ಕರೆಂಟ್ ಬಿಲ್ಲುಗಳಲ್ಲಿ ಪಿಂಚಣಿ ಹಾಗೂ ಗ್ರ್ಯಾಚುಟಿ ಹೆಸರಿನಲ್ಲಿ ಒಂದೇ ಒಂದು…

Read More

ಮಂಜೇಶ್ವರ: ಗ್ರಾಮ ಪಂಚಾಯತ್ ನ ನೂತನ ಕಾಂಪ್ಲೆಕ್ಸ್‌ ಗೆ ಶಂಕುಸ್ಥಾಪನೆ

ಮಂಜೇಶ್ವರ: ಮಂಜೇಶ್ವರ ಜನತೆಯ ಬಹುಕಾಲದ ಕನಸು ಇಂದು ಸಾಕಾರಗೊಂಡಿದೆ! ಮಂಜೇಶ್ವರ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸದಸ್ಯರ ಬಹುದಿನಗಳ ನಿರೀಕ್ಷೆಯಾದ ನೂತನ ಪಂಚಾಯತ್ ಕಾಂಪ್ಲೆಕ್ಸ್‌ನ ಶಂಕುಸ್ಥಾಪನೆ ಇಂದು ವಿಜೃಂಭಣೆಯಿಂದ ನೆರವೇರಿತು. ₹1,30,86,923 ರೂಪಾಯಿ ವೆಚ್ಚದಲ್ಲಿ ಈ ಮೂರು ಅಂತಸ್ಥನ ನೂತನ ಕಟ್ಟಡವನ್ನು ಮಂಜೇಶ್ವರ ಮೀನು ಮಾರುಕಟ್ಟೆ ಪರಿಸರದಲ್ಲಿ ನಿರ್ಮಿಸಲಾಗುತ್ತಿದೆ. ಶಿಲಾನ್ಯಾಸ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಅವರು ನೆರವೇರಿಸಿದರು. ಈ ಕಾಮಗಾರಿ ಪೂರ್ಣಗೊಂಡ ನಂತರ, ಮಂಜೇಶ್ವರ ಗ್ರಾಮ ಪಂಚಾಯತ್‌ಗೆ ಉತ್ತಮ ಕಾರ್ಯನಿರ್ವಹಣೆ…

Read More

ಮಂಜೇಶ್ವರದ ಸಬಾಮರಿಯಂ ದೇರಳಕಟ್ಟೆ ನಿಟ್ಟೆ ಕಾಲೇಜಿನ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ : ಕಾಲೇಜಿನ ಟಾಪರ್ ಆಗಿ ಮೆರಗು.

ಮಂಜೇಶ್ವರ: ಮಂಜೇಶ್ವರ ಗುಡ್ಡಕ್ಕೇರಿ ನಿವಾಸಿ ಮೊಹಮ್ಮದ್ ಎಂ ಪಿ ಹಾಗೂ ಸಪ್ರೀನಾ ದಂಪತಿಗಳ ಪುತ್ರಿ ಸಬಾ ಮರಿಯಂ ದೇರಳಕಟ್ಟೆ ಕೆ ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ವೈದ್ಯಕೀಯ ಚಿತ್ರಣ ತಂತ್ರಜ್ಞಾನ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿನ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ. ಸಬಾ ಮರಿಯಂ ಅವರ ಈ ಸಾಧನೆಗೆ ಪಠ್ಯ ಮತ್ತು ಪ್ರಯೋಗಶೀಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಶ್ರಮದ ಫಲ ಎಂದು ಕಾಲೇಜಿನ ಪ್ರಾಧ್ಯಾಪಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಟ್ಟೆ ಸಂಸ್ಥೆಯು…

Read More

‘ಕೃಷಿಯೇ ನಮ್ಮ ಜೀವನವಾಗಿದೆ’ -ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ:ದ.ಕ.ಜಿಲ್ಲೆಯ ಪ್ರತಿ ಮನೆಯಲ್ಲೂ ಒಂದಲ್ಲ ಒಂದು ಕೃಷಿಯನ್ನು ಮಾಡುತ್ತಿದ್ದು, ನಾವೆಲ್ಲರೂ ಕೃಷಿಕರಾಗಿದ್ದೇವೆ ,ಕೃಷಿಯೇ ನಮ್ಮ ಜೀವನವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಕೃಷಿ ಇಲಾಖೆ ಬಂಟ್ವಾಳ ಇದರ , 2025 -26 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಉಪ ಅಭಿಯಾನ,ATMA ( ಆತ್ಮ) ಯೋಜನೆಯಡಿ ” ಕಿಸಾನ್ ಗೋಷ್ಠಿ “ವಿವೇಚನಾತ್ಮಕ ಕೀಟನಾಶಕಗಳ ಬಳಕೆ ಹಾಗೂ ಬೆಳೆಗಳಲ್ಲಿ ಶೇಷಾಂಶ ತಗ್ಗಿಸಲು ಅಗತ್ಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ಖಾಸಗಿ ನಿವಾಸಿಗಳಿಗೆ ಬೆಳೆ ಸಮೀಕ್ಷೆ…

Read More

ಚಿಕಿತ್ಸೆಗೆಂದು ಬಂದ ಮಾನಸಿಕ ಅಸ್ವಸ್ಥನನ್ನು ಮದುವೆಯಾದ ಮನೋ ವೈಧ್ಯೆ.ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣು.

ಹೈದರಾಬಾದ್ :ಚಿಕಿತ್ಸೆಗೆಂದು ಬಂದ ಮಾನಸಿಕ ಅಸ್ವಸ್ಥನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋ ವೈದ್ಯರೊಬ್ಬರು ಕಡೆಗೆ ಆತನ ಕಿರುಕುಲವನ್ನೇ ತಡೆದುಕೊಳ್ಳಲ್ಲು ಆಗದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಹೈದರ್ ಬಾದ್ ನಲ್ಲಿ ನಡೆದಿದೆ . ಮೃತಳನ್ನು ಜೆ ಕೆ ಕಾಲೋನಿಯ 33 ಹರೆಯದ ರಜಿತಾ ಎಂದು ಗುರುತಿಸಲಾಗಿದೆ . ರಜಿತಾ ಮನೋ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿಯ ವ್ಯಾಸಂಗ ಮಾಡುವಾಗ ರೋಹಿತ್ ನನ್ನ ಭೇಟಿಯಾಗಿದ್ದರು . ಬಂಜಾರ್ ಹಿಲ್ಸ್ ಮಾನಸಿಕ ಆಸ್ಪತ್ರೆಯಲ್ಲಿ ಇಂಟರ್ಶಿಪ್ ಮಾಡುವಾಗ ರೋಹಿತ್ ಅಲ್ಲಿಗೆ ರೋಗಿಯಾಗಿ ಬಂದಿದ್ದರು ….

Read More

ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಆರೋಪ : ತಿಮರೋಡಿ, ಮಟ್ಟಣ್ಣನವ‌ರ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಉಜಿರೆ: ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸಹಿತ ಹಲವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಹರೀಶ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಗೆ ವರದಿ ಮಾಡಲೆಂದು ತೆರಳಿದ ವೇಳೆ ಚಾನೆಲ್ ನ ಲೋಗೊ ನೋಡಿ ತಡೆದ ತಂಡ ತನ್ನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಬೆಳ್ತಂಗಡಿ…

Read More
error: Content is protected !!