ಡಿ.ಕೆ. ಶಿವಕುಮಾರ್ ಮುಳ್ಳಿನ ಹಾಸಿಗೆಯಲ್ಲಿ ಮಲಗಿದ್ದಾರೆ: ಸದಾನಂದ ಗೌಡ ವ್ಯಂಗ್ಯ
ಪುತ್ತೂರು, ಜೂನ್ 5: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡಿರುವ ಸಮಯ ಸೂಕ್ತವಾಗಿದೆ ಎಂದು ತಮಗೆ ಅನಿಸುತ್ತಿಲ್ಲ. ಕಳೆದ ಮೂರು ವರ್ಷಗಳ ಆಡಳಿತದ ಹಾದಿಯನ್ನು ಮೀರಿ ಹೊಸ ದಿಕ್ಕಿನಲ್ಲಿ ಸಾಗಿದರೆ ಮಾತ್ರ ಅವರು ಯಶಸ್ವಿಯಾಗಬಹುದು. ಪ್ರಸ್ತುತ ಅವರು ಮುಳ್ಳಿನ ಹಾಸಿಗೆಯಲ್ಲಿ ಮಲಗಿರುವಂತಹ ಪರಿಸ್ಥಿತಿಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು. ಪುತ್ತೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ…