ನೋ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್..? ಸೂಚನಾ ಫಲಕಕ್ಕೆ ಡೋಂಟ್ ಕೇರ್ …!

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಹಿಂಬದ್ದಿಗೆ ಅತ್ತಾವರ ಮತ್ತು ಹಂಪನಕಟ್ಟೆಯ ನಡುವೆ ಸಂಪರ್ಕಿಸುವ ರಸ್ತೆ ಇದ್ದು ಈ ರಸ್ತೆಯ ಬದಿಗೆ ನೋ ಪಾರ್ಕಿಂಗ್ ಎಂದು ಸೂಚನಾ ಫಲಕವನ್ನು ಹಾಕಲಾಗಿದೆ . ಆದರೆ ನೋ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ತುರ್ತು ವಾಹನಗಳ ಹೊರತಾಗಿ ರಿಕ್ಷಾ, ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿದೆ. ಇದರಿಂದ ಆ ಮಾರ್ಗವಾಗಿ ಸಂಚಾರ ಮಾಡುವ ಇತರೇ ವಾಹನಗಳಿಗೆ ಮತ್ತು ಆ ಹಾದಿಯಾಗಿ ನಡೆದುಕೊಂಡು ಹೋಗುವ ಪ್ರಯಾಣಿಕರಿಗೆ ತೊಂದರೆಯನ್ನು ನೀಡುತ್ತದೆ . ನೋ ಪಾರ್ಕಿಂಗ್ ಸ್ಥಳದಲ್ಲಿ ಈ…

Read More

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ನಿಯೋಗದ ಭೇಟಿ: ಪೂರಕವಾಗಿ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು

ಮಂಗಳೂರು: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ಯಾಗಿ ಮನವಿಯನ್ನು ಸಲ್ಲಿಸಲಾಯಿತು. ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ವಿಧಾನ ಪರಿಷತ್ ನ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರಿಗೆ ಮನವಿಯನ್ನು ಸಲ್ಲಿಸಿದರು….

Read More

ಸ್ವರ್ಣ ಕಸಿದ ಪ್ರಕರಣ ಬೆನ್ನೆಟ್ಟುತ್ತಿದ್ದ ಪೊಲೀಸರ ಬಲೆಗೆ ಬಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳ.. !

ಮಂಗಳೂರು: ಚಿನ್ನದ ಸರ ಕಸಿದ ಪ್ರಕರಣದ ಬೆನ್ನತ್ತಿದ ಕದ್ರಿ ಠಾಣೆ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಸೆರೆಹಿಡಿದು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ವೆಲ್ಲಟ್ಟಿ ವೀಡು, ವಲಿಯರ್ತಲ ನಿವಾಸಿ ಆದಿತ್ ಗೋಪಾನ್ @ ಮುತ್ತು ಕೃಷ್ಣ (32) ಎಂದು ಗುರುತಿಸಲಾಗಿದೆ. ಕಳೆದ ನ.21ರಂದು ಸಂಜೆ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ಧ ಮಹಿಳೆಯು ತನ್ನ ಮನೆಯ ಬಳಿಯಲ್ಲಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನದಲ್ಲಿ…

Read More

ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅದ್ದೂರಿಯಾಗಿ ನಡೆದ ಶಾಲಾ ವಾರ್ಷಿಕ ಕ್ರೀಡೋತ್ಸವ

ಮಂಜೇಶ್ವರ: ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಶಾಲಾ ಪರಿಸರವು ಹಬ್ಬದ ಸಂಭ್ರಮದಿಂದ ಕಂಗೊಳಿಸಿತು. ಬೆಳಗಿನ ನಸುಕುದಿಂದಲೇ ವಿದ್ಯಾರ್ಥಿಗಳ ಹರ್ಷೋದ್ಗಾರ, ಬಣ್ಣಬಣ್ಣದ ಧ್ವಜಗಳು ಮತ್ತು ಕ್ರೀಡಾಂಗಣದ ಸಜ್ಜು ಎಲ್ಲರ ಗಮನ ಸೆಳೆಯುವಂತಿತ್ತು. ಶಾಲಾ ಚೇಯರ್ಮ್ಯಾನ್ ಹಾಜಿ ಅಬ್ದುಲ್ ರಹ್ಮಾನ್ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ಶುಭಾರಂಭವು ಭವ್ಯ ಮೆರವಣಿಗೆಯಿಂದ ಜರುಗಿತು. ವಿದ್ಯಾರ್ಥಿಗಳು ತಮ್ಮ ತಮ್ಮ ಹೌಸ್‌ಗಳ ವಿಶಿಷ್ಟ ವೇಷಭೂಷಣ ಮತ್ತು…

Read More

ಮಂಗಳೂರು ಸರಕಾರಿ ಸಂಸ್ಥೆಯಿಂದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಣೆ .. !

ಮಂಗಳೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಪೊಲೀಸ್ ಇಲಾಖೆಗಳ , ಜಂಟಿ ಆಶ್ರಯದಲ್ಲಿ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತ್ತು . ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ. ಮಾತನಾಡಿ , ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ ಭಾರತದ ನಾಗರಿಕರಿಗೆ ಮುಖ್ಯವಾಗಿದೆ . ಡಾ.ಬಿ.ಆರ್.ಅಂಬೇಡ್ಕರ್ ಅವರು ನಾಗರಿಕರಿಗೆ ಸರಕಾರದಿಂದ ಬರುವ ಎಲ್ಲಾ ಅವಶ್ಯಕ…

Read More

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿದ್ದೆ : ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. ಅಷ್ಟೇಅಲ್ಲ, ಈ…

Read More

ಭಾರತದ ಕಾಂಗ್ರೇಸ್ ಪಕ್ಷ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಅಂತ್ಯ ಕ್ರಿಯೆಗೆ ದೆಹಲಿಯಲ್ಲಿ ಸ್ಥಳಾವಕಾಶ ನೀಡಿತ್ತೇ ….. ? : ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಆಡಳಿತ ಅಧಿಕಾರಗಳ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ SC ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಮಾಲಾರ್ಪಣೆ ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ , ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು…

Read More

ರಷ್ಯಾ ಅಧ್ಯಕ್ಷ ಪುಟಿನ್ಗೆ ಪ್ರಧಾನಿಯವರು ಭಗವದ್ಗೀತೆ ಉಡುಗೊರೆ ನೀಡಿದ ವಿಚಾರಕ್ಕೆ ಉಡುಪಿ ಪುತ್ತಿಗೆ ಮಠದ ಸ್ವಾಮೀಜಿ ಸಂತಸ… !

ಉಡುಪಿ: ರಷ್ಯಾ ಅಧ್ಯಕ್ಷರಿಗೆ ಪ್ರಧಾನಿಯವರು ಭಗವದ್ಗೀತೆ ಉಡುಗೊರೆ ನೀಡಿದ ವಿಚಾರಕ್ಕೆ ಉಡುಪಿ ಪುತ್ತಿಗೆ ಮಠದ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ರಷ್ಯಾ ಅಧ್ಯಕ್ಷರಿಗೆ ಪ್ರಧಾನಿ ಭಗವದ್ಗೀತೆ ಕೊಟ್ಟಿದ್ದಾರೆ, ರಷ್ಯನ್ ಭಾಷೆಯಲ್ಲಿ ಬರೆದ ಭಗವದ್ಗೀತೆ ಕೊಟ್ಟಿರುವುದು ಸಂತೋಷ ನೀಡಿದೆ. ಇದೇ ಕಾರಣಕ್ಕೆ ಅವರನ್ನು ಭಾರತ ಭಾಗ್ಯವಿದಾತ ಎಂದು ನಾವು ಕರೆದಿದ್ದೇವೆ ಎಂದರು. ಪ್ರಧಾನಿ ಮೋದಿಯವರಿಗೆ ವಿಶೇಷ ಅಭಿನಂದನೆಗಳು, ಎಲ್ಲಿಗೆ ಹೋದರೂ ಭಗವದ್ಗೀತೆಯನ್ನೇ ಅವರು ಕೊಡುಗೆಯಾಗಿ…

Read More

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಭೇಟಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪತ್ನಿಗೆ ಅವಕಾಶ ನೀಡಿರುವುದನ್ನು ಸಮರ್ಥಿಸಿಕೊಂಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ …. !

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಭೇಟಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪತ್ನಿಗೆ ಅವಕಾಶ ನೀಡಿರುವುದನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಮರ್ಥಿಸಿಕೊಂಡಿದ್ದಾರೆ. ಅವರೇನು ಕ್ರಿಮಿನಲ್ ಅಲ್ಲ ಅವರು ಬಿಜೆಪಿ ಪಕ್ಷದ ಸದಸ್ಯೆ ಎಂದು ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ನೀಡಬೇಕು ಅನ್ನೋ ವಿಚಾರದ ಪರವಾಗಿ ನಾನೂ‌ ಇದ್ದೇನೆ. ಸಾಮಾನ್ಯ ಕಾರ್ಯಕರ್ತನಿಗೆ ಈ ಅವಕಾಶ ಕೊಡಬೇಕು ಅನ್ನುವವರ ವಾದ ಸರಿಯಿದೆ. ಆದರೆ ಕಿಶೋರ್ ಕುಮಾರ್ ಅವರ ಪತ್ನಿಯ ವಿಚಾರವಾಗಿ ನಡೆಯುತ್ತಿರುವ ವಿವಾದ…

Read More

ಡಿಸೆಂಬರ್ 8: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಸಿಪಿಐಎಂನಿಂದ ಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆ ಬೃಹತ್ ಹೋರಾಟ… !

ಮಂಗಳೂರು: ಜಿಲ್ಲೆಯ ಜನ ಸಾಮಾನ್ಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ, ಜಿಲ್ಲೆಯ ಜನರ ಬದುಕಿನ ಮೌಲ್ಯಗಳ ಬಲವರ್ಧನೆಗಾಗಿ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾ. 08-12-2025ರಂದು “ಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆ” ಎಂಬ ಘೋಷಣೆ ಅಡಿಯಲ್ಲಿ ಬೃಹತ್ ಹೋರಾಟ ರೂಪಿಸಲಾಗಿದ್ದು ಈ ಬೃಹತ್ ಹೋರಾಟದಲ್ಲಿ ಮಂಗಳೂರು ನಗರದ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ….

Read More
error: Content is protected !!