ಒಡಿಯೂರು : ಗ್ರಾಮೋತ್ಸವ 2025 ಆಗಸ್ಟ್ 8 ರಂದು

ಮಂಗಳೂರು: ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಗ್ರಾಮೋತ್ಸವದ ಪ್ರಯುಕ್ತ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ . ಈ ಭಾರಿಯ ಗ್ರಾಮೋತ್ಸವ ೨೦೨೫ ಕಾರ್ಯಕ್ರಮವು ಆಗಸ್ಟ್ ೮ ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ , ಗಣ್ಯರ ಸಮ್ಮುಖದೊಂದಿಗೆ ಜರಗಲಿದೆ ಎಂದು ಜನ್ಮದಿನೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ಸಹಕಾರ ರತ್ನ ಲ / ಎ . ಸುರೇಶ್ ರೈ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು ,…

Read More

ಮಂಜೇಶ್ವರ ತೀರ ಪ್ರದೇಶದಲ್ಲಿ ತೀವ್ರಗೊಂಡ ಕಡಲ್ಕೊರೆತ ಸ್ಥಳಕ್ಕೆ ಬೇಟಿ ನೀಡಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಸಿ ಪಿ ಎಂ ಜಿಲ್ಲಾ ಸೆಕ್ರಟರಿಯೇಟ್ ಸದಸ್ಯ-ಕೆ ಆರ್ ಜಯಾನಂದ

ಮಂಜೇಶ್ವರ: ಉಪ್ಪಳ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಶಾರದಾ ನಗರ, ಮಣಿಮುಂಡ ಕಡಪ್ಪುರ, ಹನುಮಾನ್ ನಗರ, ಬಾಂಗ್ಲಾ, ಶಾರದಾ ಮಂದಿರ ಸಮೀಪದ ಪ್ರದೇಶ, ಐಲಾ ಹನುಮಾನ್ ನಗರ ಎಂಬಿಡೆಗಳಲ್ಲಿ ಕಡಲ್ಕೊರೆತ ತೀವೃಗೊಂಡಿದೆ. ಅದೇ ರೀತಿ ಪೆರಿಂಗಡಿ ಹಾಗೂ ಬೇರಿಕೆ ಗಳಲ್ಲಿ ಕಡಲ್ಕೊರೆತ ತೀವ್ರ ರೀತಿಯಲ್ಲಿ ಮುಂದುವರಿಯುತ್ತಿದ್ದು, ಸುಮಾರು 5ರಷ್ಟು ವಿದ್ಯುತ್ ಕಂಬಗಳು ಸಮುದ್ರ ಪಾಲಾಗಿವೆ. 20ರಷ್ಟು ಕಂಬಗಳು ಇನ್ನೂ ಅಪಾಯದಂಚಿನಲ್ಲಿದೆ. ಈ ಪರಿಸರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಸುಮಾರು 50ರಷ್ಟು ಮನೆಗಳು ಅಪಾಯದಂಚಿನಲ್ಲಿವೆ. ಈ ಪ್ರದೇಶದಲ್ಲಿ ವಿದ್ಯುತ್…

Read More

ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ

ಮಂಜೇಶ್ವರ: ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆನಡಾ ಕಂದಸಾಮಿ ದೇವಸ್ಥಾನದಲ್ಲಿ ಲೆಜೆಂಡರಿ ಸಂಗೀತಗಾರರಾದ ಡಾ.ಎಂ.ಪಿ.ನಕೀಂತೀರನ್ (ನಾಥಸ್ವರಂ) ಅಣ್ಣಾ ಮತ್ತು ಡಾ.ಟಿ.ಜಿ.ಮುತ್ತುಕುಮಾರಸ್ವಾಮಿ ಅಣ್ಣಾ (ಥವಿಲ್) ಅವರ ಗೌರವಾನ್ವಿತ ಸಮ್ಮುಖದಲ್ಲಿ ದೇವಾಲಯದ ಅಧ್ಯಕ್ಷರಾದ ಶ್ರೀ ಎಸ್.ಮುತ್ತುರಾಜಲಿಂಗಂ ಅವರಿಂದ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಜಯರಾಮ ಮಂಜೇಶ್ವರ ‘ಈ ಮನ್ನಣೆಯನ್ನು ಪಡೆದಿದ್ದಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಮತ್ತು ನಿಜವಾಗಿಯೂ ವಿನಮ್ರನಾಗಿದ್ದೇನೆ ಎಂದರು . ‘ನನ್ನ ಪ್ರತಿಭೆಯನ್ನು ಗುರುತಿಸಿ ನನ್ನ…

Read More

ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ

ಕಾಸರಗೋಡು : ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ನಿವೃತ್ತ ಪ್ರಾಂಶುಪಾಲ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ – 2025’ ಆ.2ರಂದು ಬೆಳಗ್ಗೆ 10 ಗಂಟೆಗೆ ಎಡನೀರಿನ ಸ್ವಾಮೀಜಿಸ್ ಪ್ರೌಢ ಶಾಲೆಯಲ್ಲಿ ಪ್ರದಾನ ಮಾಡಲಾಗುವುದು. ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುವ ಶಾಲೆಗಳಲ್ಲಿ ಕನ್ನಡ ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜೇಂದ್ರ ಕಲ್ಲೂರಾಯರು ಧಾರ್ಮಿಕ,…

Read More

113 ವರ್ಷದ ಇತಿಹಾಸವಿರುವ ಎಂ. ಸಿ.ಸಿ. ಬ್ಯಾಂಕಿನ 20 ನೇ ಶಾಖೆ ಆಗಸ್ಟ್ 3 ರಂದು ಬೈಂದೂರಿನಲ್ಲಿ ಉದ್ಘಾಟನೆ-ಅನಿಲ್ ಲೋಬೋ

ಮಂಗಳೂರು : 113 ವರ್ಷದ ಇತಿಹಾಸವಿರುವ ಎಂ. ಸಿ.ಸಿ. ಬ್ಯಾಂಕಿನ 20 ನೇ ಶಾಖೆ ಆಗಸ್ಟ್ 3 ರಂದು ಬೈಂದೂರಿನಲ್ಲಿ ಉದ್ಘಾಟನೆಯಾಗಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಮಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಎಮ್.ಸಿ.ಸಿ ಬ್ಯಾಂಕ್ 2025 ರ ಮಾರ್ಚಿಗೆ ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ‌ ಎಂದು ಅವರು ವಿವರಿಸಿದರು.ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಪ್ರಸ್ತುತ ಆಡಳಿತ ಮಂಡಳಿ…

Read More

ಪತ್ತೆಯಾಗದ ಹೇಮಂತ್ ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿಕೆ

ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದೆ.ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ.ಹೇಮಂತ್ ನಿಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೋಲೀಸ್ ಇಲಾಖೆ ಅಗ್ನಿಶಾಮಕ ದಳದ ಸಿಬ್ಬಂದಿ ಮೂಲಕ ನಿನ್ನೆ ಮಧ್ಯಾಹ್ನ ದಿಂದ ಸಂಜೆ…

Read More

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ

ಮಂಗಳೂರು: ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಈ ನೇಮಕಾತಿ ಮಾಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇದನ್ನು ಅನುಮೋದಿಸಿದ್ದಾರೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಜವಾಬ್ದಾರಿ ನಿರ್ವಹಣೆಯಲ್ಲಿ ತೊಡಗಲು ಡೆನಿಸ್ ಅವರಿಗೆ ಸೂಚಿಸಲಾಗಿದೆ. ಜಿಲ್ಲಾಮಟ್ಟ, ಕ್ಷೇತ್ರವಾರು, ಬ್ಲಾಕ್ ಮಟ್ಟ, ಪಂಚಾಯತ್ ಮಟ್ಟದಲ್ಲಿ ಪ್ರಚಾರ…

Read More

ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ವೈಭವದ ಆಚರಣೆ .ಬಾಕುಡ ಸಮುದಾಯದ ನಾಗಬನಗಳಲ್ಲಿ ಬಾಕುಡರಿಂದಲೇ ತನು ಸಮರ್ಪಣೆ .

ಮಂಜೇಶ್ವರ : ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ವೈಭವದಿಂದ ನಾಡಿನೆಲ್ಲೆಡೆ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ವಿವಿಧ ನಾಗ ಕ್ಷೇತ್ರಗಳಿಗೆ , ನಾಗಬನಗಳಿಗೆ, ತರವಾಡು , ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ತೆರಳಿ ನಾಗನಿಗೆ ತನು ಸಮರ್ಪಣೆ ಮಾಡಿ ಸಂಪನ್ನರಾದರು. ಸಪ್ತ ಭಾಷಾ ಸಂಗಮ ಭೂಮಿಯಾದ ಕಾಸರಗೋಡು ಮತ್ತು ಮಂಜೇಶ್ವರ ಪ್ರದೇಶದಲ್ಲಿ ಬರುವ ಬಾಕುಡ ಸಮುದಾಯದ ಇತಿಹಾಸ ಪ್ರಸಿದ್ಧ ನಾಗ ಬನಗಳಲ್ಲಿ ಬೆಳಗ್ಗಿನಿಂದಲೇ ವೈಭವದ ನಾಗರ ಪಂಚಮಿಯನ್ನು ಆಚರಿಸಲಾಯಿತು. ಆದರೆ ಈ ಬಾಕುಡ ಸಮುದಾಯ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿಯನ್ನು ಭೇಟಿಯಾದ ದ.ಕ ಬಿಜೆಪಿ ಸಮಿತಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು…

Read More

ಕಣಿವೆ ನಾಡಿನಲ್ಲಿ ಭಾರಿ ಮಳೆ ಅಮರನಾಥ ಯಾತ್ರೆ ಮತ್ತೊಮ್ಮೆ ಸ್ಥಗಿತ !

ಜಮ್ಮು ಕಾಶ್ಮೀರ: ಕಣಿವೆ ನಾಡಿನಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಅಮರನಾಥ ಯಾತ್ರೆಯನ್ನು ಮತ್ತೊಮ್ಮೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಯಾಮ್ ಮತ್ತು ಬಲ್ಕಾಲ್‌ನ ಬೇಸ್ ಕ್ಯಾಂಪ್ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಡಿಐಪಿಆರ್, ಪಹಲ್ಯಾಮ್ ಮತ್ತು ಬಲ್ತಾಲ್ ಮಾರ್ಗವಾಗಿ ಸಾಗುವ ಅಮರನಾಥ ಯಾತ್ರೆಯನ್ನು ಇಂದು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ವಲಯ ಆಯುಕ್ತ ವಿಜಯ್ ಕುಮಾರ್ ಬಿಧುರಿ ಮಾತನಾಡಿ, “ಬುಧವಾರ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು,…

Read More
error: Content is protected !!