ಕಡಲ್ಕೊರೆತ ತಡೆಗೆ 300 ಕೋಟಿ ರೂ.ಗಳ ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ.ಮೂಳೂರು ಗ್ರಾಮದ ತೊಟ್ಟಂನಲ್ಲಿ ಕಡಲ್ಕೊರೆತದಿಂದ ಹಾನಿಗೊಂಡ ಪ್ರದೇಶಗಳ ವೀಕ್ಷಣೆ
ಉಡುಪಿ: ರಾಜ್ಯ ಕರಾವಳಿಯ ಪ್ರಮುಖ ಸಮಸ್ಯೆಯಾಗಿರುವ ಕಡಲು ಕೊರೆತದ ಕುರಿತಂತೆ ಮುಖ್ಯ ಮಂತ್ರಿಗಳ ಸೂಚನೆಯಂತೆ ತಜ್ಞರ ತಂಡದಿಂದ ವೈಜ್ಞಾನಿಕ ಅಧ್ಯಯನ ನಡೆಸಿ 300 ಕೋಟಿ ರೂಗಳ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಬುಧವಾರ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ ಸಚಿವರು ಕಾಪು ತಾಲೂಕು ಮೂಳೂರು ಗ್ರಾಮದ ತೊಟ್ಟಂನಲ್ಲಿ ಕಡಲ್ಕೊರೆತದಿಂದ ಹಾನಿಗೊಂಡ ಪ್ರದೇಶಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.ಕಳೆದ 20-30 ವರ್ಷಗಳಿಂದ ಪ್ರತಿಮಳೆಗಾಲದಲ್ಲಿ ನಿರಂತರ ಸಮಸ್ಯೆಗೆ ಕಾರಣವಾಗುತ್ತಿರುವ ಕಡಲ್ಕೊರೆತಕ್ಕೆ ಶಾಶ್ವತ…