ಕರುವಿನ ಶಿರಚ್ಛೇದ ಮಾಡಿ ದೇಹವನ್ನು ಬಿಸಾಡಿ ಹೋದ ಗೋ ಹಂತಕರು
ಗದಗ:ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಗದಗ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ….