ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಮೊಹಾಂತಿಯನ್ನು ಕೈಬಿಡುವಂತೆ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ಆಗ್ರಹ
ಮಂಗಳೂರು : ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ತಂಡದ ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರನಬ್ ಮೊಹಾಂತಿಯವರ ಬದಲು ಇದರ ಮುಂದಾಳತ್ವವನ್ನು ಡಾ.ಕೆ. ರಾಮಚಂದ್ರ ರಾವ್ ಅಥವಾ ದಯಾನಂದರಂತಹ ಐಪಿಎಸ್ ಅಧಿಕಾರಿಗಳಿಗೆ ನೀಡಬೇಕೆಂದು ಆಗ್ರಹಿಸಿ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ”ಪ್ರನಬ್ ಮೊಹಾಂತಿಯವರನ್ನು SITಯ ಮುಖ್ಯಸ್ಥರಾಗಿ ನೇಮಿಸುವ ಕುರಿತು ಮಾನ್ಯ ಘನ ಉಚ್ಚ ನ್ಯಾಯಾಲಯದ ರಿಟ್…