ಡಾ. ಸದಾಶಿವ ಶೆಟ್ಟಿ ಪ್ರಾಯೋಜಕತ್ವದ ಉಚಿತ ವಿಮೆ ಪಾಲಿಸಿ ವಿತರಣಾ ಕಾರ್ಯಕ್ರಮ:
ಮಂಜೇಶ್ವರ : ತನ್ನ ದುಡಿಮೆಯ ಒಂದಂಶವನ್ನು ಸಮಾಜಕ್ಕೆ ಅರ್ಪಿಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿರುವ ಅಶಕ್ತರ ಪಾಲಿಗೆ ಬೆಳಕಾಗಬೇಕೆಂದು ಕಷ್ಟಕ್ಕೆ ಸ್ಪಂದಿಸುತ್ತಾ ಬಂದಿರುವ ಕುಳೂರು ಕನ್ಯಾನ ಡಾ. ಸದಾಶಿವ ಶೆಟ್ಟಿಯವರ ಕನಸಿನ ಕೂಸಾದ ಉಚಿತ ಆರೋಗ್ಯ ವಿಮೆ/ ಅಪಘಾತ ವಿಮೆಯ ಯೋಜನೆಯು ಈಗಾಗಲೇ ಕೈಗೂಡಿದ್ದು ಇದರ ಅಪಘಾತ ವಿಮಾ ಪಾಲಿಸಿ ವಿತರಣೆ ಚಿಗುರುಪಾದೆಯಲ್ಲಿರುವ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರ ಸಮಿತಿಯ ಕಚೇರಿಯಲ್ಲಿ ಜರಗಿತು. ಕುಳೂರು ಕನ್ಯಾನ ಶ್ರೀ ಸದಾಶಿವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಯೋಜನೆಯ…