ಸೂಕ್ತ ಗಣಿ ನೀತಿ ರೂಪಿಸಿ ಪರಿಹರಿಸದಿದ್ದಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ : ಅಶ್ರಫ್ ತಲಪಾಡಿ
ಮಂಗಳೂರು:ಜು. 25 – ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ನಿಷೇದಿಂದಾಗಿ ಕಟ್ಟಡದ ಮಾಲೀಕರು, ಗುತ್ತಿಗೆದಾರರು ಹಾಗೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಆರ್ಥಿಕತೆಯು ದುರ್ಬಲಗೊಂಡಿದೆ. ದಿನಾ ಕೂಲಿ ಕೆಲಸ ಮಾಡಿ ಸಂಬಳ ಪಡೆದು ಮನೆಗೆ ಹೋಗುತ್ತಿದ್ದ ಕಾರ್ಮಿಕ ಎರಡು ತಿಂಗಳುಗಳಿಂದ ಸಂಜೆ ಹೊತ್ತಿಗೆ ಇಂದು ಬರಿಗೈಯ್ಯಲ್ಲಿ ಮನೆಗೆ ಹೇಗೆ ಹೋಗಲಿ ಎಂಬ ಚಿಂತೆಯಲ್ಲಿದ್ದಾನೆ. ಅಧಿಕಾರಿಗಳು, ಸಂಬಂಧಪಟ್ಟ ಚುನಾಯಿತ ಪ್ರತಿನಿಧಿಗಳು ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ. ಈ ಸಮಸ್ಯೆಗೆ ಸೂಕ್ತ ಗಣಿ ನೀತಿ ರೂಪಿಸಿ ಕೂಡಲೇ ಪರಿಹರಿಸಬೇಕು. ಇಲ್ಲದಿದ್ದಲ್ಲಿ…