ಪೊಳಲಿಯಲ್ಲಿ ಅನಾಥ ಸ್ಥಿತಿಯಲ್ಲಿ ಮೃತಪಟ್ಟ ವ್ಯಕ್ತಿ; ವಾರಸುದಾರರಿಗಾಗಿ ಪೊಲೀಸರ ಮನವಿ

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರೀಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ (೬೪) ಮೃತಪಟ್ಟವರು. ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7 – 8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು.ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್‌…

Read More

‘ರೂಪಾಯಿಯ ಸಮಸ್ಯೆ’ ಕುರಿತು ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಉಪನ್ಯಾಸ

ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶ್ವವಿದ್ಯಾನಿಲಯ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ `ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮಕ್ಕೆರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಚಾಲನೆ ನೀಡಿದರು.ಬಳಿಕ‌ ಮಾತನಾಡಿದ ಅವರು ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಡಾಲರ್…

Read More

ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ಎಚ್.ವಿ. ದರ್ಶನ್

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್ ತಿಳಿಸಿದ್ದಾರೆ. 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಪರಿಷ್ಕರಣೆ ನಡೆಯಲಿದೆ. ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ…

Read More

ಗಡಿನಾಡಿನಲ್ಲಿ ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ: ಎಲ್.ಜಿ. ಜ್ಯೋತಿಶ್ವರ

ಕಾಸರಗೋಡು, ಜೂನ್ 5: ಕರ್ನಾಟಕದೊಳಗೆ ಎಲ್ಲಿಯೂ ಕಾಣಸಿಗದ ವಿಶಿಷ್ಟ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿ ನಿರ್ಮಾಣಗೊಂಡಿದ್ದು, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಆಶ್ರಯಧಾಮವಾಗಿ ಬೆಳೆದಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಜಾಹೀರಾತು ಹಾಗೂ ವೈದ್ಯಕೀಯ ಸಂವಹನ ತಜ್ಞ ಎಲ್.ಜಿ. ಜ್ಯೋತಿಶ್ವರ ಅಭಿಪ್ರಾಯಪಟ್ಟರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿ ಮಾಡಲು ಕನ್ನಡ ಗ್ರಾಮಕ್ಕೆ ಆಗಮಿಸಿದ್ದ ಜ್ಯೋತಿಶ್ವರ ದಂಪತಿಯನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು,…

Read More

ಜೋಕಟ್ಟೆ: 21 ವರ್ಷದ ಯುವತಿ ಕಾಣೆ, ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಅವರು ಮೇ 29ರಂದು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಅವರು ಜೋಕಟ್ಟೆ ಹಳೇ ಮಸೀದಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಹಸೀನಾ ಖತೂನ್ ಅವರ ಎತ್ತರ ಸುಮಾರು 5 ಅಡಿ 2 ಇಂಚು ಇದ್ದು, ಸಾಧಾರಣ ಶರೀರ, ಬಿಳಿ ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಅವರ ಎಡ ತುಟಿಯ ಕೆಳಭಾಗದಲ್ಲಿ ಕಪ್ಪು…

Read More

ಪುತ್ತಿಗೆಯಲ್ಲಿ ಪಂಚಾಯತ್ ಆಸ್ತಿ ಲೂಟಿ: ಮರಗಳ್ಳತನಕ್ಕೆ ಡಿವೈಎಫ್‌ಐ ಆಕ್ರೋಶ

​ಕಾಸರಗೋಡು: ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಎಡನಾಡು ಕೋರ್ನಕಂಡದಲ್ಲಿ, ಪಂಚಾಯತ್ ಆಡಳಿತಕ್ಕೆ ಸೇರಿದ ಸುಮಾರು 50 ವರ್ಷಗಳ ಹಳೆಯ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲಾಗಿದೆ. ಸುಮಾರು 1 ಲಕ್ಷ ರೂ. ಮೌಲ್ಯದ ಮಾವು, ಹಾಲೆ ಮತ್ತು ಅಕೇಶಿಯಾ ಮರಗಳನ್ನು ಮೇ 26ರಂದು ಸದ್ದಿಲ್ಲದೆ ಕಳ್ಳತನ ಮಾಡಲಾಗಿದೆ.ಖಾಸಗಿ ಜಮೀನಿನ ಮರಗಳನ್ನು ಕಡಿಯುವ ನೆಪದಲ್ಲಿ ಪಂಚಾಯತ್ ಒಡೆತನದ ತೋಡಿನ ಬದಿಯಲ್ಲಿದ್ದ ಮರಗಳನ್ನೂ ಕಡಿದು ಸಾಗಿಸಲಾಗಿದೆ ಎಂದು ಪಂಚಾಯತ್ ಕಾರ್ಯದರ್ಶಿ ಸುದೀಶ್ ಅವರು ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ….

Read More

ಚಿತ್ರದುರ್ಗ-ತುಮಕೂರು ಗಡಿಭಾಗದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಹುಳಿಯಾರು: ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗದಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ಕಾರಿಗೆ ಎದುರಿನಿಂದ ಬಂದ ಓಮಿನಿ ವಾಹನ ಡಿಕ್ಕಿ ಹೊಡೆದ ಪರಿಣಾಮ, ಮತ್ತೊಂದು ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಆಂಧ್ರಪ್ರದೇಶ ಮೂಲದವರಾಗಿರುವ ಸಾಧ್ಯತೆ ಇದ್ದು, ಅವರ ಗುರುತು ಪತ್ತೆ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು…

Read More

ಅಶ್ವತ ಎಲೆಯಲ್ಲಿ ಡಿ.ಕೆ. ಶಿವಕುಮಾರ್ ಭಾವಚಿತ್ರ; ಕಲಾವಿದ ಮಹೇಶ್ ಮರ್ಣೆಯವರಿಂದ ವಿಶಿಷ್ಟ ಅಭಿನಂದನೆ

ಉಡುಪಿ, ಜೂನ್ 4: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅವರು ವಿಶಿಷ್ಟ ಕಲಾಕೃತಿಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಮಹೇಶ್ ಮರ್ಣೆ ಅವರು ಅಶ್ವತ (ಅರಳಿ) ಎಲೆಯ ಮೇಲೆ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಸೂಕ್ಷ್ಮವಾಗಿ ರಚಿಸಿ ಶುಭಾಶಯ ಕೋರಿದ್ದಾರೆ. ಅತ್ಯಂತ ನಿಖರತೆ ಹಾಗೂ ಕಲಾತ್ಮಕ ಕೌಶಲ್ಯದಿಂದ ಮೂಡಿಬಂದಿರುವ ಈ ಭಾವಚಿತ್ರ ಸಾರ್ವಜನಿಕರ ಗಮನ ಸೆಳೆದಿದ್ದು, ನೂತನ ಮುಖ್ಯಮಂತ್ರಿಗೆ…

Read More

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು; ನಾಲ್ಕು ತಿಂಗಳ ಮಳೆಗಾಲಕ್ಕೆ ಅಧಿಕೃತ ಚಾಲನೆ

ನವದೆಹಲಿ: ನೈಋತ್ಯ ಮುಂಗಾರು ಗುರುವಾರ ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿದ್ದು, ಇದರೊಂದಿಗೆ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸಾಗುವ ನಾಲ್ಕು ತಿಂಗಳ ಮಳೆಗಾಲಕ್ಕೆ ಚಾಲನೆ ದೊರೆತಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳವನ್ನು ತಲುಪುವ ಮುಂಗಾರು ಈ ಬಾರಿ ಕೆಲ ದಿನಗಳ ವಿಳಂಬದೊಂದಿಗೆ ರಾಜ್ಯ ಪ್ರವೇಶಿಸಿದೆ. ಹವಾಮಾನ ಇಲಾಖೆಯು ಈ ಹಿಂದೆ ಮೇ 26ರಂದು ಮುಂಗಾರು ಕೇರಳಕ್ಕೆ ಆಗಮಿಸಲಿದೆ ಎಂದು ಅಂದಾಜಿಸಿತ್ತಾದರೂ, ವಿವಿಧ ವಾತಾವರಣೀಯ ಕಾರಣಗಳಿಂದ ಅದರ ಆಗಮನ ತಡವಾಯಿತು. ಐಎಂಡಿ ಪ್ರಕಟಣೆಯ…

Read More

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಕನ್ನರ್ಪಾಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಉಡುಪಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಿಗೆ 136 ಅಟ್ಟೆ ಮಲ್ಲಿಗೆ ಹೂಗಳನ್ನು ಸಮರ್ಪಿಸಿ ವಿಶೇಷ ಆರತಿ ಬೆಳಗಲಾಯಿತು. ನೂತನ ಮುಖ್ಯಮಂತ್ರಿಯ ಯಶಸ್ವಿ ಆಡಳಿತ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಯುವರಾಜ್, ಮಾಜಿ ಉಪಾಧ್ಯಕ್ಷೆ ಅಮೃತಾ ಕೃಷ್ಣಮೂರ್ತಿ, ಸದಾಶಿವ ಅಮೀನ್…

Read More
error: Content is protected !!