ಮಂಜೇಶ್ವರ ಸರ್ವೀಸ್ ರಸ್ತೆಯ ಬಸ್ ನಿಲ್ದಾಣಕ್ಕೆ ತಾಗಿಕೊಂಡ ವಿದ್ಯುತ್ ಟ್ರಾನ್ಸ್‌ಫಾರ್ಮರ್ -ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ಹಾಗೂ ರೈಲ್ವೇ ನಿಲ್ದಾಣದ ಎದುರು ಭಾಗದ ರಾಷ್ಟ್ರೀಯ ಷಟ್ಪಥ ರಸ್ತೆಗೆ ತಾಗಿಕೊಂಡಿರುವ ಸರ್ವೀಸ್ ರಸ್ತೆಯ ಬಸ್ ನಿಲ್ದಾಣಕ್ಕೆ ತಾಗಿಕೊಂಡೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಾಪಿಸಿರುವುದು ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿ ಮಾಡಿದೆ. ಪ್ರತಿದಿನವೂ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಬಸ್ ನಿಲ್ದಾಣವನ್ನು ಉಪಯೋಗಿಸುತ್ತಿರುವುದು ಈ ಆತಂಕಕ್ಕೆ ಮತ್ತಷ್ಟು ಕಾರಣವಾಗಿದೆ. ಸ್ಥಳೀಯ ನಿವಾಸಿಗಳ ಹೇಳಿಕೆಯ ಪ್ರಕಾರ ಬಸ್ ನಿಲ್ದಾಣದ ಬಳಿ, ನಿರಂತರವಾಗಿ ಜನರ ಓಡಾಟ ಇರುವ ಸ್ಥಳದಲ್ಲೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಾಪಿಸಿರುವುದು…

Read More

ತ್ರಿಸ್ತರ ಸ್ಥಳೀಯಾಡಳಿತ ಚುನಾವಣೆ : ಅಗೋಸ್ಟ್ 30 ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಕಾಸರಗೋಡು: ಮುಂಬರುವ ಸ್ಥಳೀಯಾಡಳಿತ ಚುನಾವಣೆಯ ಮತದಾರರ ಅಂತಿಮ ಪಟ್ಟಿ ಅಗೋಸ್ಟ್ 30 ಕ್ಕೆ ಪ್ರಕಟಗೊಳ್ಳಲಿದೆ.ಈಗಾಗಲೇ ಪೂರ್ವ ಭಾವಿ ಮತದಾರರ ಕರಡು ಪಟ್ಟಿ ಪ್ರಕಟಗೊಂಡಿದೆ. 1034 ಸ್ಥಳೀಯಾಡಳಿತ ಸಂಸ್ಥೆಗಳ 20,998 ವಾರ್ಡುಗಳಲ್ಲಿ ಒಟ್ಟು 2,66,78,256 ಮತದಾರರಿದ್ದಾರೆ. ಈಪೈಕಿ 1,26,32,186 ಮಂದಿ ಪುರುಷರು , 1,40,45,837ಮಂದಿ ಮಹಿಳೆಯರಾಗಿದ್ದಾರೆ. 233ಮಂದಿ ಟ್ರಾನ್ಸ್ಜೆಂಡರ್ಸ್ ಇದ್ದಾರೆ. ಆಗಸ್ಟ್ 7ರ ತನಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಇದೆ. 2025 ಜನವರಿ 1ರೊಳಗೆ 18ವಯಸ್ಸು ಪೂರ್ಣಗೊಂಡವರನ್ನು ಮತದಾರರ ಯಾದಿಗೆ ಸೇರಿಸಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ…

Read More

ಸ್ಮಾರ್ಟ್ ಸಿಟಿ ಮತ್ತೊಮ್ಮೆ ಸ್ಮಾರ್ಟ್ ಕ್ಲೀನ್ ಸಿಟಿ ಅಲ್ಲವೆಂದು ಸಾಬೀತು-ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು

ಸ್ಮಾರ್ಟ್ ಸಿಟಿ ಮತ್ತೊಮ್ಮೆ ಸ್ಮಾರ್ಟ್ ಕ್ಲೀನ್ ಸಿಟಿ ಅಲ್ಲವೆಂದು ಸಾಬೀತು ಮಾಡಲು ಹೊರಡ್ತಾ ಇದೆ ಎಂದ್ರೆ ನೀವೆಲ್ಲರೂ ನಂಬಲೇ ಬೇಕು. ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾದಂತಹ ಖಾಯಿಲೆಗಳು ಹರಡದಂತೆ ಎಚ್ಚರ ವಹಿಸೋ ಆರೋಗ್ಯ ಇಲಾಖೆಯ ನಿರ್ದೇಶನಕ್ಕೆ ಇಲ್ಲಿ ಎಳ್ಳು ನೀರು ಬಿಡುವುದು ಸ್ಪಷ್ಟವಾಗಿ ನೋಡ ಬಹುದು . ಕಿವಿ ಕೆಪ್ಪು, ಕಣ್ಣು ಕುರುಡು, ಮೊಸಳೆಯ ಮನಸ್ಸು ಇದ್ದ ಅಧಿಕಾರಿಗಳು ಮಾತ್ರವೇ ಇಂತಹ ಸ್ಥಿತಿಯನ್ನು ನಿರ್ಮಾಣ ಮಾಡಬಲ್ಲರು. ಓಟ್ ಬರುವಾಗ ಹೋದರೆ ಸಾಕು ಅಲ್ಲಿ ತನಕ ಗೋಡೆಗೆ ಕಾಲು…

Read More

ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಶಾಸಕ ಮಂಜುನಾಥ ಭಂಡಾರಿ ಮನವಿ!

ಮಂಗಳೂರು: ರೈಲುಗಳ ಸಂಖ್ಯೆ ಹೆಚ್ಚಾದರೂ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಿದರೂ ರೈಲ್ವೇ ಪೊಲೀಸ್ ಮಾತ್ರ ತುಂಬಾ ಹಳೆಯ ವ್ಯವಸ್ಥೆಯನ್ನೇ ಹೊಂದಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಬಳಿ ಠಾಣೆಯನ್ನು ಹೊಂದಿರುವ ಮಂಗಳೂರು ರೈಲ್ವೇ ಪೊಲೀಸ್ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಕೂಡಲೇ ಸಿಬ್ಬಂದಿಯ ನೇಮಕಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ. ಮಂಗಳೂರು ರೈಲ್ವೇ ಪೊಲೀಸ್ ತಲಪಾಡಿ, ತೊಕ್ಕೊಟ್ಟು…

Read More

ಕೊಂಕಣಿ ಸಾಹಿತ್ಯದ ವೀರ ಮಹಿಳೆ ನಾಮಾಂಕಿತ ಗ್ಲ್ಯಾಡಿಸ್ ರೇಗೊಗೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ವತಿಯಿಂದ ಶೃದ್ಧಾಂಜಲಿ.

ಕೊಂಕಣಿ ಭಾಷಾ ಕರ್ನಾಟಕ ಇದರ ಕಾರ್ಯಕಾರಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಕೊಂಕಣಿ ಭಾಷೆಗೆ 27 ಪುಸ್ತಕ ದೇಣಿಗೆ ನೀಡಿದ ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಕೆಬಿಎಂಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ, ಲೈಬ್ರೆರಿಗಳಲ್ಲಿ ಹುಡುಕಿ ಹಲವು ಸಾಹಿತ್ಯದ ವಿವಿಧ ದಾಖಲೆಗಳನ್ನು ತೆಗೆದು ತನ್ನ ಸ್ವಂತ ಖರ್ಚಿನಲ್ಲಿ ಪುಸ್ತಕ ಪ್ರಕಾಶನ ಮಾಡಿದ ಸಾಹಿತ್ಯದ ಶ್ರಮಜೀವಿ ಗ್ಲ್ಯಾಡಿಸ್ ರೇಗೊ ಆಗಿದ್ದರು ಎಂದು ಗುಣಗಾನ ಮಾಡಿದರು. ಕವಿ ಜೊಸ್ಸಿ ಪಿಂಟೊ ಮಾತನಾಡಿ,ಕೊಂಕಣಿ ಪತ್ರಿಕೆಗಳಿಗೆ…

Read More

ಬೈಕಂಪಾಡಿ ನಂತೂರು ನಡುವೆ ಭಾರಿ ಟ್ರಾಫಿಕ್ ಜಾಮ್- ಸಂಕಷ್ಟಕ್ಕೆ ಸಿಲುಕಿದ ವಾಹನ ಸವಾರರು

ಮಂಗಳೂರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್. ಜಂಕ್ಷನ್ ನಿಂದ ಅಯ್ಯಪ್ಪ ಗುಡಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಮಾಡಿರುವ ಮಾರ್ಪಾಡಿನಿಂದ ಬೈಕಂಪಾಡಿಯಿಂದ ನಂತೂರು ವರೆಗೆ ಭಾರೀ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ. ಬೆಳಗ್ಗೆಯಿಂದಲೇ ಕೊಟ್ಟಾರ ಚೌಕಿ ಬಳಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದೆ. ಕಿಲೋ ಮೀಟರ್ ವರೆಗೆ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ. ಈ ಕಡೆ ಕೆಪಿಟಿ, ನಂತೂರು, ಕೊಟ್ಟಾರದ…

Read More

ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ

24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಫಯಾನ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ…

Read More

ಮಾತಾ ಅಮೃತಾನಂದಮಯಿ ಮಠ ಬೋಳೂರಿನಲ್ಲಿ ಜುಲೈ 27ರಂದು ಗುರುಪೂರ್ಣಿಮಾ ಉತ್ಸವ

ಅಮ್ಮ,ತಾನಂದಮಯಿ ಮಠದಲ್ಲಿ ಗುರುಪೂರ್ಣಿಮಾ ಉತ್ಸವ ಜುಲೈ 27ರಂದು ಮಾತಾ ಅಮೃತಾನಂದಮಯಿ ಮಠ ಬೋಳೂರು ಇಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುರೇಶ್ ಅಮೀನ್ ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುಪೂರ್ಣಿಮಾ ಆಚರಣೆಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಗುವುದು. ಅಂದು ಬೆಳಗೆ, 7.00 ಗಂಟೆಗೆ ಮಂಗಳೂರು ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಪ್ರಧಾನ ಅರ್ಚಕರಾದ ಬ್ರಹ್ಮಚಾರಿ ರತೀಶ್ ಮತ್ತು ಅರ್ಚಕ ವೃಂದದವರಿಂದ ಮಹಾಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಗುರುಹೋಮ,…

Read More

ಹಿರಿಯ ರಂಗ ಭೂಮಿ ಕಲಾವಿದ ರಮೇಶ್ ಕಲ್ಲಡ್ಕ ಇನ್ನಿಲ್ಲ

ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಪುತ್ರ, ಪುತ್ರಿಯನ್ನು ಹೊಂದಿದ್ದರು. ರಂಗಭೂಮಿಯಲ್ಲಿ 30 ವರ್ಷಕ್ಕೂ ಮಿಕ್ಕಿ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ “ಶಿವದೂತಗುಳಿಗೆ” ನಾಟಕದ…

Read More

ದಿ.ಮನೋಜ್ ಕುಮಾರ್ ಶೆಟ್ಟಿ ಸ್ಮರಣಾರ್ಥ ಉಚಿತ ಪುಸ್ತಕ ವಿತರಣೆ

ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಿ.ಮನೋಜ್ ಕುಮಾರ್ ರವರು ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದವರು. ವೈಯಕ್ತಿಕವಾಗಿ ನನಗೂ ಬಹಳ ಆತ್ಮೀಯರಾಗಿದ್ದ ಅವರು ಈ ಭಾಗದ ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಮಾದರಿಯಾಗುವಂತೆ ತೊಡಗಿಸಿಕೊಂಡಿದ್ದರು. ಸಮಾಜಕ್ಕಾಗಿ ಏನಾದರೂ ಮಾಡಬೇಕು ಎನ್ನುತ್ತಲೇ ಸದಾ ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರ ಸೇವಾ…

Read More
error: Content is protected !!