ದಿ.ಮನೋಜ್ ಕುಮಾರ್ ಶೆಟ್ಟಿ ಸ್ಮರಣಾರ್ಥ ಉಚಿತ ಪುಸ್ತಕ ವಿತರಣೆ
ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಿ.ಮನೋಜ್ ಕುಮಾರ್ ರವರು ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದವರು. ವೈಯಕ್ತಿಕವಾಗಿ ನನಗೂ ಬಹಳ ಆತ್ಮೀಯರಾಗಿದ್ದ ಅವರು ಈ ಭಾಗದ ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಮಾದರಿಯಾಗುವಂತೆ ತೊಡಗಿಸಿಕೊಂಡಿದ್ದರು. ಸಮಾಜಕ್ಕಾಗಿ ಏನಾದರೂ ಮಾಡಬೇಕು ಎನ್ನುತ್ತಲೇ ಸದಾ ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರ ಸೇವಾ…