ಕಾರ್ಮಿಕ ವಿರೋಧಿ ಶ್ರಮಶಕ್ತಿ ನೀತಿ – 2025 ಕರಡು ಪ್ರತಿ ದಹನ ; ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ಕೇಂದ್ರದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ಕಾರ್ಮಿಕ ವರ್ಗದ ವಿರುದ್ಧ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಶ್ರಮಶಕ್ತಿ ನೀತಿ – 2025 ನ್ನು ಜಾರಿಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದು,ಇದರ ವಿರುದ್ಧ ಇಂದು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ರವರು, 1969ರಲ್ಲಿ ಅಂದಿನ ಕೇಂದ್ರ ಸರಕಾರದ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ. 29ನೇ ವಾರ್ಷಿಕ ಮಹಾಸಭೆ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ…

Read More

ಸಾರಿಗೆ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ -ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲು

ಮಂಜೇಶ್ವರ : ಸಾರಿಗೆ ಬಸ್ಸಿನಲ್ಲಿ ಸಂಚರಿಸುತಿದ್ದ ವಿದ್ಯಾರ್ಥಿನಿಗೆ ನಿರ್ವಾಹಕ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯನ್ನು ಇತರ ಪ್ರಯಾಣಿಕರ ಮುಂದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದಾರಿ ಮಧ್ಯೆ ಕೆಳಗಿಳಿಸಿರುವುದಾಗಿ ವಿದ್ಯಾರ್ಥಿನಿ ದೂರಿದ್ದಾಳೆ. ಮಂಗಳವಾರ ಬೆಳಿಗ್ಗೆ ಬಂದ್ಯೋಡ್ ನಲ್ಲಿ ಈ ಘಟನೆ ನಡೆದಿದೆ.ಗಡಿ ಪ್ರದೇಶದಲ್ಲಿರುವ ಕಾಲೇಜೊಂದರಲ್ಲಿ ಅಂತಿಮ ಬಿ ಸಿ ಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಬಂದ್ಯೋಡ್ ನಿಂದ ಕರ್ನಾಟಕ ಸಾರಿಗೆ ಬಸ್ಸು ನೋಂದಣಿ ಸಂಖ್ಯೆ ಕೆ ಎ 19 ಎಫ್ 3421 ಬಸ್ಸಿಗೆ ಹತ್ತಿದ್ದಾಳೆ. ಇಂತಹ ಪ್ರಯಾಣದ…

Read More

ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ , ಹೀಗೆಂದರೇಕೆ ಸ್ಪೀಕರ್ ಯು.ಟಿ.ಖಾದರ್ …. !

ಮಂಗಳೂರು: ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ರಾಜ್ಯದಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಬಗ್ಗೆ ಮಾತನಾಡಿದ ಅವರು , ನಾನು ಇತರರು ಮಾತನಾಡಿದ ರೀತಿಯಲ್ಲಿ ಮಾತನಾಡಲು ಆಗುವುದಿಲ್ಲ. ಈ ವಿಷಯ ನನಗೆ ನಿಮ್ಮಿಂದಲೇ ತಿಳಿದಿರುವುದು. ಸ್ಪೀಕ‌ರ್ ಆದ ಬಳಿಕ ನನ್ನ ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು…

Read More

ಪ್ರಧಾನಿ ಮೋದಿ ಕೃಷ್ಣ ನಗರಿ ಭೇಟಿ ಹಿನ್ನಲೆ – ಎಸ್ ಪಿಜಿ ಮತ್ತು ಎಎಸ್ ಟಿ ತಂಡದಿಂದ ಉನ್ನತ ಮಟ್ಟದ ಭದ್ರತಾ ಸೂಕ್ಷ್ಮ ತಪಾಸಣೆ…. !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ‌. ಈ ಹಿನ್ನೆಲೆಯಲ್ಲಿ ಎಸ್ ಪಿಜಿ ಮತ್ತು ಆ್ಯಂಟಿ ಸಬೋಟೇಜ್ ಚೆಕ್ ತಂಡವು ಕಾರ್ಯಕ್ರಮದ ಸಿದ್ಧತೆ ಮತ್ತು ವೇದಿಕೆ ನಿರ್ಮಾಣ ಕಾರ್ಯದ ಪರಿಶೀಲನೆಯನ್ನು ನಡೆಸುತ್ತಿವೆ. ಎಸ್ ಪಿಜಿ ಮತ್ತು ಎಎಸ್ ಟಿ ತಂಡವು ಆದಿಉಡುಪಿಯ ಹೆಲಿಪ್ಯಾಡ್,ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಜೊತೆಗೆ ಕೃಷ್ಣಮಠ ಮತ್ತು ಪೆಂಡಾಲ್ ಜಾಗದಲ್ಲೂ ತೀವ್ರ ತಪಾಸಣೆ…

Read More

500 ವರ್ಷಗಳ ಸಂಕಲ್ಪ ಸಂಪೂರ್ಣ : ರಾಮ ಜನ್ಮ ಭೂಮಿ ಅಯೋಧ್ಯೆಯ ಶಿಖರದಲ್ಲಿ ಧರ್ಮಧ್ವಜ ಹಾರಿಸಿದ ಪ್ರಧಾನಿ ಮೋದಿ!

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಬೆನ್ನಲೇ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಧರ್ಮಧ್ವಜವನ್ನು ಪ್ರಧಾನಿ ಮೋದಿಯವರು ಹಾರಿಸಿದ್ದಾರೆ .ಧ್ವಜದಲ್ಲಿರುವ ಕೇಸರಿ ಬಣ್ಣ ಸೂರ್ಯವಂಶದ ಚಿಹ್ನೆ, ಓಂ ಪದ ಮತ್ತು ಕೋವಿದಾರ ಮರವು ರಾಮ ರಾಜ್ಯದ ವೈಭವವನ್ನು ಅನಾವರಣಗೊಳಿಸುತ್ತದೆ. ಈ ಧ್ವಜವು ಒಂದು ಸಂಕಲ್ಪ ಯಶಸ್ಸು ಸೃಷ್ಟಿಗಾಗಿ ನಡೆದ ಹೋರಾಟದ ಕಥೆ, 100 ವರ್ಷಗಳ ಹೋರಾಟದ ಭೌತಿಕ ರೂಪ ಮುಂಬರುವ ಸಾವಿರಾರು ಶತಮಾನಗಳವರೆಗೆ ಈ ಧ್ವಜವು ಭಗವಾನ್ ರಾಮನ ಮೌಲ್ಯಗಳನ್ನು…

Read More

ನ.28 ಕ್ಕೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ತನಕ ಪ್ರಧಾನಿ ಮೋದಿ ‘ರೋಡ್ ಶೋ’

ಉಡುಪಿ: ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆಯ ನಾರಾಯಣಗುರು ಸರ್ಕಲ್ ನಿಂದ ಕಲ್ಸಂಕದವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಬಳಿಕ‌ ಅವರು ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ…

Read More

ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ಅನಾರೋಗ್ಯ ಪೀಡಿತ ಯುವತಿ ಆತ್ಮಹತ್ಯೆ

ಪುತ್ತೂರು: ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ. ಗುಡ್ಡಪ್ಪ ರೈ ಎಂಬವರ ಪುತ್ರಿ ನೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಬಗ್ಗೆ ಮೃತಳ ಅಕ್ಕ ಗೀತಾ ಪಿ. ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡ್ಡಪ್ಪ ರೈ ಅವರು 20 ವರ್ಷಗಳ ಹಿಂದೆ ಕುಟುಂಬದಿಂದ ದೂರವಾಗಿದ್ದು,…

Read More

ಪಶುಗಳ ಆಕೃತಿಯನ್ನು ಹೋಲುವ ಎರಡು ಆದಿ ಕಾಲದ ಶಿಲಾ ವರ್ಣಚಿತ್ರಗಳ ಪತ್ತೆ….. !

ಕಾಸರಗೋಡು: ಎರಿಕ್ಕುಲಂ ವಲಿಯ ಪಾರಾದಲ್ಲಿ ಪೂರಕ ಶಿಲಾ ಅಧ್ಯಯನದ ವೇಳೆ, 20 ಚದರ ಮೀಟರ್ ಪ್ರದೇಶದಲ್ಲಿರುವ ‘ಕರಿಂಪರಾ’ ಬಂಡೆಯಲ್ಲಿ ಇನ್ನೂ ಎರಡು ಹೊಸ ಶಿಲಾ ವರ್ಣಚಿತ್ರಗಳು ಪತ್ತೆಯಾಗಿವೆ ಕೇರಳ ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ ವೇಳೆ ಈ ಪತ್ತೆ ನಡೆದಿದೆ.ಹೊಸವಾಗಿ ಕಂಡುಬಂದಿರುವ ಚಿತ್ರಗಳು ಎಂಟುಕುಡುಕ ಮತ್ತು ಅರಿಯಟ್ಟ ಪಾರಾ ಪ್ರದೇಶಗಳಲ್ಲಿ ಕಂಡುಬರುವ ದನಗಳ ಆಕೃತಿಗಳನ್ನು ಹೋಲುತ್ತವೆ ಪ್ರಾಣಿಗಳ ಚಿತ್ರಗಳು ನೈಋತ್ಯ ದಿಕ್ಕಿಗೆ ಸಾಗುವ ರೀತಿಯಲ್ಲಿ ಕತ್ತಲ್ಪಟ್ಟಿರುವುದು ಗಮನಾರ್ಹ. ಶತಮಾನಗಳ ಹಿಂದೆ ಮಹಾರಾಷ್ಟ್ರದ ರತ್ನಗಿರಿಯಿಂದ ವಯನಾಡಿನವರಗಿನ ಕೆಂಪು…

Read More

ಸುದೀರ್ಘ 12,000 ವರ್ಷಗಳ ಬಳಿಕ ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಮುನ್ನುಗುತ್ತಿರುವ ಬೃಹತ್ ದೂದ್ ಮೋಡಗಳ ಸಾಲು !

ನವದೆಹಲಿ: ಸುಮಾರು 12,000 ವರ್ಷಗಳ ಬಳಿಕ ಇಥಿಯೋಪಿಯಾದ ಉತ್ತರ ಅಫಾರ್ ಪ್ರದೇಶದ ಹೈಲಿ ಗುಬ್ಬಿ, ಹ್ಯಾಲಾಮುಖಿ ಭಾನುವಾರ ಸ್ಫೋಟಗೊಂಡಿದ್ದು ಅದರ ಬೂದಿ ಮೋಡಗಳು ಗಂಟೆಗೆ 100-120 ಕಿಮೀ ವೇಗದಿಂದ ಭಾರತ ಸೇರಿದಂತೆ ಅನೇಕ ದೇಶಗಳತ್ತ ಸಾಗುತ್ತಿದೆ ಎಂದು ಹವಾಮಾನ ಸಂಸ್ಥೆಗಳು ಎಚ್ಚರಿಸಿಕ ನೀಡಿದೆ. ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಪೋಟದ ಪರಿಣಾಮವಾಗಿ ಉಂಟಾದ ದಪ್ಪ ಬೂದಿ ಮೋಡಗಳು ಮೊದಲು ಗುಜರಾತ್ ಪ್ರದೇಶವನ್ನು ಪ್ರವೇಶಿಸಿ ನಂತರ ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್ ಕಡೆಗೆ ಚಲಿಸಿವೆ. ಈಗಾಗಲೇ ವಿಷಕಾರಿ ಗಾಳಿಯಿಂದ…

Read More
error: Content is protected !!