ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಅಪಾಯಕಾರಿ: ಶಿವರುದ್ರಪ್ಪ ಎನ್.ಬಿ.

ಮಂಗಳೂರು, ಜೂನ್ 4: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿದ್ದು, ಈ ಬೆಳವಣಿಗೆ ಮುಂದುವರಿದರೆ ಜನಸಾಮಾನ್ಯರ ಮೇಲೂ ಅದರ ನೇರ ಪರಿಣಾಮ ಬೀಳಲಿದೆ ಎಂದು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಎಚ್ಚರಿಸಿದರು. ನಗರದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶ್ವವಿದ್ಯಾಲಯ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ…

Read More

ಬೈಕ್–ಸ್ಕೂಟರ್ ಡಿಕ್ಕಿ: ಬಂಟ್ವಾಳದಲ್ಲಿ 10 ವರ್ಷದ ಬಾಲಕಿ ಸಾವಿಗೆ ಶರಣು

ಬಂಟ್ವಾಳ: ಕಲ್ಲಡ್ಕದಿಂದ ಮಾಣಿಗೆ ತೆರಳುತ್ತಿದ್ದ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ (10) ಮೃತಪಟ್ಟ ಬಾಲಕಿ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿಯ ವೇಳೆ ಮೃತಪಟ್ಟಿದ್ದಾಳೆ. ನೆಟ್ಲ ಸದಾಶಿವ ದೇವಸ್ಥಾನದಲ್ಲಿ…

Read More

ಜೂನ್ 14ರಂದು ಬಾಕುಡ ಸಮಾಜ ಸೇವಾ ಸಮಿತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹೊಸಂಗಡಿ: ಬಾಕುಡ ಸಮಾಜ ಸೇವಾ ಸಮಿತಿ (ರಿ) ಕೇರಳ-ಕರ್ನಾಟಕ ಕೇಂದ್ರ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಉಚಿತ ಪುಸ್ತಕ ವಿತರಣೆ ಹಾಗೂ ಕಲಿಕಾ ಕಿಟ್‌ಗಳ ವಿತರಣೆಯನ್ನು ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಈ ಸಾಲಿನ ಉಚಿತ ಪುಸ್ತಕ ವಿತರಣೆ, ಕಲಿಕಾ ಕಿಟ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 14ರಂದು ಆದಿತ್ಯವಾರ ಹೊಸಂಗಡಿ ಸಮೀಪದ ಪ್ರೇರಣಾ ಹಾಲ್‌ನಲ್ಲಿ ನಡೆಯಲಿದೆ ಎಂದು ಸಮಿತಿಯು ತಿಳಿಸಿದೆ. ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ…

Read More

ಮಂಗಳೂರು: NRAI ಮಂಗಳೂರು–ಪಶ್ಚಿಮ ಕರ್ನಾಟಕ ಅಧ್ಯಾಯ ಉದ್ಘಾಟನೆ ಇಂದು ಸಂಜೆ ಅವತಾರ್ ಹೋಟೆಲ್‌ನಲ್ಲಿ

ಮಂಗಳೂರು, ಜೂನ್ 4: ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವನ್ನು ಪ್ರತಿನಿಧಿಸುವ ಸರ್ವೋಚ್ಛ ಸಂಸ್ಥೆಯಾದ National Restaurant Association of India (NRAI)ಯ ಮಂಗಳೂರು ಮತ್ತು ಪಶ್ಚಿಮ ಕರ್ನಾಟಕ ಅಧ್ಯಾಯದ ಅಧಿಕೃತ ಉದ್ಘಾಟನಾ ಸಮಾರಂಭವು ಇಂದು ಸಂಜೆ 6 ಗಂಟೆಗೆ ನಗರದ ಹೋಟೆಲ್ ಅವತಾರ್‌ನಲ್ಲಿ ನಡೆಯಲಿದೆ ಎಂದು NRAI ಪ್ರಧಾನ ಕಾರ್ಯದರ್ಶಿ ಪ್ರಕುಲ್ ಕುಮಾರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಆಹಾರ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸುವುದು, ಆತಿಥ್ಯ ಕ್ಷೇತ್ರದ…

Read More

ಪೈವಳಿಕೆ ಅಂಚೆ ಕಚೇರಿ ಎದುರು ಸಿಪಿಐಎಂ ಧರಣಿ: ಪೆಟ್ರೋಲಿಯಂ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಮಂಜೇಶ್ವರ: ಜನಜೀವನವನ್ನು ದುಸ್ತರಗೊಳಿಸುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಐಎಂ ನೇತೃತ್ವದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಭಾಗವಾಗಿ, ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ವತಿಯಿಂದ ಪೈವಳಿಕೆ ಅಂಚೆ ಕಚೇರಿ ಎದುರು ಧರಣಿ ನಡೆಸಲಾಯಿತು. ಧರಣಿಯನ್ನು ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಕೆ. ಪಿ. ಸತೀಶ್ಚಂದ್ರನ್ ಉದ್ಘಾಟಿಸಿ ಮಾತನಾಡಿದರು. ಬಳಿಕ ಸಿಪಿಐಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಆರ್. ಜಯಾನಂದ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಏರಿಯಾ ಸಮಿತಿ ಸದಸ್ಯ ರಝಾಕ್ ಚಿಪ್ಪಾರ್ ವಹಿಸಿದ್ದರು….

Read More

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿ: ರಿತಬ್ರತಾ ಬ್ಯಾನರ್ಜಿ ಪ್ರತಿಪಕ್ಷ ನಾಯಕರಾಗಿ ಆಯ್ಕೆ

ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಟಿಎಂಸಿ ಪಕ್ಷದಲ್ಲಿ ಉಂಟಾದ ಆಂತರಿಕ ಭಿನ್ನಾಭಿಪ್ರಾಯಗಳ ಪರಿಣಾಮವಾಗಿ ಪಕ್ಷವು ಎರಡು ಬಣಗಳಾಗಿ ವಿಭಜನೆಯಾಗಿರುವುದಾಗಿ ವರದಿಯಾಗಿದೆ. ಈ ಬೆಳವಣಿಗೆ ಪಕ್ಷದ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜಕೀಯವಾಗಿ ದೊಡ್ಡ…

Read More

ಅನಂತಪುರ ಕೈಗಾರಿಕಾ ಪಾರ್ಕ್ ದುರ್ವಾಸನೆ ವಿರುದ್ಧ ಜನರ ಆಕ್ರೋಶ: ಜೂನ್ 8ರಂದು ಪ್ರತಿಭಟನೆ

ಕುಂಬಳೆ, ಜೂನ್ 4: ಅನಂತಪುರ ಕೈಗಾರಿಕಾ ಪಾರ್ಕ್‌ನ ಕಾರ್ಖಾನೆಗಳಿಂದ ಹೊರಹೊಮ್ಮುತ್ತಿರುವ ದುರ್ವಾಸನೆಯನ್ನು ತಕ್ಷಣ ನಿಯಂತ್ರಿಸಲು ಸಂಬಂಧಿತ ಅಧಿಕಾರಿಗಳು ಮಧ್ಯಪ್ರವೇಶಿಸಬೇಕು ಹಾಗೂ ಮಾನವ ಜೀವ ಮತ್ತು ಆಸ್ತಿಗೆ ಅಪಾಯಕಾರಿಯಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ಕುಂಬಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ಅನಂತಪುರ ಕೈಗಾರಿಕಾ ಪಾರ್ಕ್‌ನಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದಿಂದ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಹೊಸದಾಗಿ ಆರಂಭಗೊಳ್ಳಲಿರುವ ಕೈಗಾರಿಕೆಗಳಿಗೆ ಅನುಮತಿ ನೀಡಬಾರದು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಾಲಿನ್ಯಯುಕ್ತ…

Read More

ಕಡಬದಲ್ಲಿ ಸಂಚಾರಿ ನ್ಯಾಯಾಲಯಕ್ಕೆ ಚಾಲನೆ: ಶೀಘ್ರ ನ್ಯಾಯದಾನಕ್ಕೆ ನ್ಯಾಯಾಧೀಶ ಬಸವರಾಜ್ ಕರೆ

ತಾಲೂಕು ಮಟ್ಟದಲ್ಲಿ ನ್ಯಾಯಾಲಯ ಗಳನ್ನು ಪ್ರಾರಂಭಿಸಿ ಶೀಘ್ರ ನ್ಯಾಯದಾನ ನೀಡಬೇಕು ಎನ್ನುವುದು ನ್ಯಾಯಾಂಗ ವ್ಯವಸ್ಥೆಯ ಆಶಯವಾಗಿದೆ. ಈ ನಿಟ್ಟಿನಲ್ಲಿ ಕಕ್ಷಿದಾರರಿಗೆ ಶೀಘ್ರ ನ್ಯಾಯ ದಾನ ಒದಗಿಸಲು ಎಲ್ಲ ವಕೀಲರು ಹಾಗೂ ನಾವು ಶ್ರಮಿಸುಬೇಕಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಬಸವರಾಜ್ ಹೇಳಿದರು. ಕಡಬ ಗಣೇಶ್ ಬಿಲ್ಡಿಂಗ್‌ನಲ್ಲಿ ಪ್ರಾರಂಭವಾದ ಪುತ್ತೂರು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಕಡಬ ಸಂಚಾರಿ ನ್ಯಾಯಾಲಯವನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತ ನಾಡಿದರು. ಗ್ರಾಮೀಣ ಪ್ರದೇಶವಾದ ಕಡಬ ದಿಂದ…

Read More

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಹತ್ಯೆಗೈದ ಪತಿ; 13 ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬಳ್ಳಾರಿ, ಜೂನ್ 4: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಘಟನೆ ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೃತ ಮಹಿಳೆಯನ್ನು ಆಫ್ರೀನ್ ಬಾನು ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ನೂರ್ ಅಹ್ಮದ್ ಎಂದು ತಿಳಿದುಬಂದಿದೆ. ಇಬ್ಬರೂ ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗುವಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಫ್ರೀನ್ ಬಾನು ತವರು ಮನೆಯಲ್ಲಿ…

Read More

ತೃತೀಯ ಲಿಂಗಿಗಳ ಬಗ್ಗೆ ಜಾಗೃತಿ: ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ

ಮಂಗಳೂರು, ಜೂನ್ 4: ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು. ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇದರ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಗಳ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೀದಿ ನಾಟಕದ ಮೂಲಕ ತೃತೀಯ ಲಿಂಗಿಗಳ ಹಕ್ಕುಗಳು, ಸಾಮಾಜಿಕ ಸ್ವೀಕಾರ, ಸಮಾನ ಅವಕಾಶಗಳು…

Read More
error: Content is protected !!