ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ವೈಫಲ್ಯವೇ ಕಾರಣ, ಯಾರನ್ನಾದರೂ ಹೊಣೆಗಾರರನ್ನಾಗಿ ಮಾಡಬೇಕು-ಮಾಜಿ ಸೇನಾ ಮುಖ್ಯಸ್ಥ

ಕೋಲ್ಕತ್ತಾ: ಪಹಲ್ಗಾಮ್ ಉಗ್ರರ ದಾಳಿಗೆ ಗುಪ್ತಚರ ವೈಫಲ್ಯಯೇ ಕಾರಣ ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಶಂಕರ್ ರಾಯ್ ಚೌಧರಿ ಶುಕ್ರವಾರ ಹೇಳಿದ್ದಾರೆ. ಪಿಟಿಐ ಜೊತೆ ಮಾತನಾಡಿದ ದೇಶದ 18 ನೇ ಸೇನಾ ಮುಖ್ಯಸ್ಥ ರಾಯ್‌ ಚೌಧರಿ, ಉಗ್ರ ದಾಳಿಗೆ ಗುಪ್ತಚರ ವೈಫಲ್ಯವೇ ಪ್ರಮುಖ ಕಾರಣವಾಗಿದೆ. ಲೋಪದೋಷಗಳಿಗೆ ಯಾರಾದರೂ ಉತ್ತರಿಸಬೇಕು. ನಿರ್ಲಕ್ಷ್ಯಕ್ಕೆ ಖಂಡಿತವಾಗಿಯೂ ಯಾರಾದರೂ ಜವಾಬ್ದಾರರಾಗಿರುತ್ತಾರೆ ಮತ್ತು ಪರಿಣಾಮಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದರು. ಪಹಲ್ಗಾಮ್ ದಾಳಿಯ ಹಿಂದೆ ಪಾಕಿಸ್ತಾನ ಮತ್ತು ಅದರ ಗುಪ್ತಚರ ಸಂಸ್ಥೆ ISI…

Read More

ಮಡಿಕೇರಿ:ನಾಲ್ಕು ವರ್ಷದ ಬಳಿಕ ಲವ್ವರ್ ಜತೆ ಸಿಕ್ಕಿಬಿದ್ದ ಕೊಲೆಗೀಡಾದ್ದಾಳೆ ಎನ್ನಲಾದ ಪತ್ನಿ!,2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಪತಿ

 ಪತ್ನಿಯನ್ನು ಕೊಂದಿದ್ದಾನೆ ಎಂಬ ಆರೋಪದಲ್ಲಿ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಪತಿಗೆ ಕೊನೆಗೂ ನ್ಯಾಯಾಲಯವು ನಿರಪರಾಧಿ ಎಂದು ಘೋಷಿಸಿದೆ. ವಿಶೇಷವೆಂದರೆ, ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ನ್ಯಾಯಾಲಯವೇ ಶಿಕ್ಷೆ ವಿಧಿಸಿತ್ತು. ಇದೀಗ ‘ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದೆ.ತಾನು ಯಾವುದೇ ರೀತಿಯ ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿಯನ್ನು ಗೌರವಯುತವಾಗಿ ಬಿಡುಗಡೆ ಮಾಡಿದೆ. ಸುಮಾರು 4 ವರ್ಷದ ಹಿಂದೆ ಮೈಸೂರು ಜಿಲ್ಲೆಯ ಬೆಟ್ಟದಪುರದ…

Read More

ಆಧ್ಯಾತ್ಮಿಕ ಶೋಷಣೆ ಹಾಗೂ ವಾಮಾಚಾರದ ವಿರುದ್ಧ ಎಚ್ಚರಿಕೆಯ ಕರೆಗಂಟೆ

ಮಂಜೇಶ್ವರ: ಕೆಎನ್‌ಎಂ ಜಿಲ್ಲಾ ಸಮಿತಿಯ ವತಿಯಿಂದ ಕಳೆದ ನಾಲ್ಕು ತಿಂಗಳಿನಿಂದ “ಆಧ್ಯಾತ್ಮಿಕ ಶೋಷಣೆ ಹಾಗೂ ವಾಮಾಚಾರದ ವಿರುದ್ಧ” ಎಂಬ ಕಾರ್ಯಸೂಚಿಯಂತೆ ಆಯೋಜಿಸಿದ್ದ ಅಭಿಯಾನದ ಸಮಾರೋಪ ಅಧಿವೇಶನವು ಮಾನವ ಸಂಪತ್ತು ಮತ್ತು ಘನತೆಯನ್ನು ಶೋಷಿಸುವ ಸುಳ್ಳು ಆಧ್ಯಾತ್ಮಿಕತೆಯ ಪ್ರತಿಪಾದಕರ ಹಾಗೂ ಕಪಟ ಮಂತ್ರವಾದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಿ ಎಲ್ಲಾ ಆಧ್ಯಾತ್ಮಿಕ ಶೋಷಣೆಗಳನ್ನು ಕೊನೆಗೊಳಿಸುವಂತೆ ಕರೆ ನೀಡಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಪಿ. ಉಣ್ಣೀನ್ ಕುಟ್ಟಿ ಮೌಲವಿ ಸಮಾರೋಪ ಸಮಾರಂಭ ಉದ್ಘಾಟಿಸಿದರು. ಆಧ್ಯಾತ್ಮಿಕ ಶೋಷಣೆ ದಿನೇ ದಿನೇ…

Read More

ಬಂದ್ಯೋಡ್ ಮುಟ್ಟಂ ರಾ.ಹೆದ್ದಾರಿಯಲ್ಲಿ ವ್ಯಕ್ತಿಗೆ ಕಾರು ಡಿಕ್ಕಿ ಅಪಘಾತದಲ್ಲಿ ಮುಟ್ಟಂ ನಿವಾಸಿ ದಾರುಣ ಸಾವು

ಮಂಜೇಶ್ವರ : ಬಂದ್ಯೋಡ್ ಮುಟ್ಟಂ ರಾ. ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವ ಮಧ್ಯೆ ಕಾರು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಮನೆ ಯಜಮಾನ ದಾರುಣವಾಗಿ ಸಾವನ್ನಪ್ಪಿದ್ದಾರೆ.ಮುಟ್ಟಂ ನಿವಾಸಿ ಅಬೂಬಕ್ಕರ್ ಹಾಜಿ (70) ಸಾವನ್ನಪ್ಪಿದ ದುರ್ದೈವಿ.ಬಾನುವಾರ ಸಂಜೆ 3 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಆರಿಕ್ಕಾಡಿ ಮಖಾಂ ಉರೂಸ್ ನ ಸಮಾರೋಪ ಸಮಾರಂಭಕ್ಕೆ ತೆರಳಿ ಮರಳುತ್ತಿರುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವೃತೆಗೆ ರಸ್ತೆಗೆಸೆಯಲ್ಪಟ್ಟ ಅಬೂಬಕ್ಕರ್ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು ನಿಲ್ಲಿಸದೆ ಪರಾರಿಯಾಗಿ…

Read More

ಉದ್ಯಾವರ ಸಾವಿರ ಜಮಾಅತ್‌ ಮಸೀದಿಗೆ ದೈವಗಳ ಭೇಟಿಕೊಟ್ಟ ದೈವಗಳು

ಮಂಜೇಶ್ವರ : ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಅಣ್ಣ ತಮ್ಮ ದೈವಗಳ ಕ್ಷೇತ್ರದ ಜಾತ್ರೆಯ ಪೂರ್ವಭಾವಿಯಾಗಿ ಉದ್ಯಾವರ ಸಾವಿರ ಜಮಾಅತ್‌ ಮಸೀದಿಗೆ ದೈವಗಳ ಭೇಟಿ ಕಾರ್ಯಕ್ರಮ ಶುಕ್ರವಾರ ಸಾಂಪ್ರದಾಯಿಕ ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿತು. ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದೊಂದಿಗೆ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಉದ್ಯಾವರ ಶ್ರೀ ಅರಸು ದೈವಗಳು ವರ್ಷಂಪ್ರತಿಯ ಪದ್ಧತಿಯಂತೆ ಶುಕ್ರವಾರ ಮಧ್ಯಾಹ್ನ ಅರಸು ದೈವ ಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗೂ ಸಹಸ್ರಾರು ಹಿಂದೂ ಬಾಂಧವರು ಜೊತೆಯಾಗಿ ಉದ್ಯಾವರ ಸಾವಿರ…

Read More
error: Content is protected !!