ಮಂಜೇಶ್ವರ ತೂಮಿನಾಡಿನಿಂದ ಎಸ್‌ಐಆರ್ ಪರಿಷ್ಕರಣೆಗೆ ಅಧಿಕೃತ ಚಾಲನೆ

ಮಂಜೇಶ್ವರ : ಕೇರಳ–ಕರ್ನಾಟಕ ಗಡಿ ಪ್ರದೇಶವಾದ ತೂಮಿನಾಡಿನಿಂದ ಎಸ್‌ಐಆರ್ ಪರಿಷ್ಕರಣೆಗೆ ಅಧಿಕೃತ ಚಾಲನೆ ದೊರಕಿತು. ಸ್ಥಳೀಯ ಹಿರಿಯ ಪತ್ರಕರ್ತ ಅಬ್ದುಲ್ ರಹ್ಮಾನ್ ರವರಿಗೆ ಬೂತ್ ಲೆವಲ್ ಅಧಿಕಾರಿ ಹರಿಣಾಕ್ಷಿ ಫಾರಂ ಹಸ್ತಾಂತರಿಸುವ ಮೂಲಕ ಈ ಪ್ರಕ್ರಿಯೆಗೆ ಕೇರಳದ ತುದಿಯಿಂದ ಆರಂಭವಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತದಾರರ ಪಟ್ಟಿಯ ನಿಖರತೆ ಮತ್ತು ನವೀಕರಣದ ಅಗತ್ಯವನ್ನು ಒತ್ತಿ ಹೇಳಿದರು. ಪ್ರತಿ ಅರ್ಹ ನಾಗರಿಕರೂ ತಮ್ಮ ಹೆಸರು, ವಿಳಾಸ ಮತ್ತು ಇತರೆ ವಿವರಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡುವಂತೆ ಮನವಿ ಮಾಡಿದರು. ಎಸ್‌ಐಆರ್…

Read More

ಕಾಸರಗೋಡು: ಸ್ಕೂಟರ್-ಕಾರಿನ ನಡುವೆ ಅಪಘಾತ; ಬಿಜೆಪಿ ಕಾರ್ಯಕರ್ತ ಮೃತ್ಯು .

ಸ್ಕೂಟರ್ ಹಾಗೂ ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ ನಲ್ಲಿ ನಡೆದಿದೆ. ಆರಿಕ್ಕಾಡಿ ಪಾರೆಸ್ಥಾನ ಸಮೀಪದ ಎನ್.ಹರೀಶ್ ಕುಮಾರ್ (37) ಮೃತ ದುರ್ದೈವಿ. ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಹರೀಶ್ ಬಿಜೆಪಿ ಕಾರ್ಯಕರ್ತರಾಗಿದ್ದರು. ಅಪಘಾತದಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಗಾಯಗೊಂಡ ಹರೀಶ್ ಕುಮಾರ್ ರನ್ನು ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಸಲಾಗಲಿಲ್ಲ.ಸ್ಕೂಟರ್ ಕಾಸರಗೋಡಿನಿಂದ ಕುಂಬಳೆ ಕಡೆಗೆ…

Read More

ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಚಾಂಪಿಯನ್ ಶಿಪ್ ಪಡೆದುಕೊಂಡ ಜಿ.ಎಲ್.ಪಿ.ಯಸ್. ವಾಮಂಜೂರು ಶಾಲೆ

ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಜಿ.ಎಲ್.ಪಿ.ಯಸ್.ವಾಮಂಜೂರು ಶಾಲೆ ಎಲ್.ಪಿ ಜನರಲ್ ವಿಭಾಗದಲ್ಲಿ ಪ್ರಥಮ ಸ್ಥಾನ ವನ್ನು ಗಳಿಸಿ ಚಾಂಪಿಯನ್ ಶಿಪ್ ಪಡೆದುಕೊಂಡಿದೆ.ಅರೆಬಿಕ್ ಶಾಲಾ ಕಲೋತ್ಸವದಲ್ಲಿ ರನ್ನರ್ ಅಪ್ ಆಗಿ ಮೂಡಿಬಂದಿದೆ. ಈ ಸಂತೋಷದ ವಿಚಾರವನ್ನು ಪ್ರಕಟ ಪಡಿಸಲು ಶಾಲೆಯಿಂದ ಹೊರಟು ಹೊಸಂಗಡಿ ಪೇಟೆಗೆ ಮೆರವಣಿಗೆಯ ಮೂಲಕ ಸಾಗಿ ವಿಜಯೋತ್ಸವವನ್ನು ಆಚರಿಸಲಾಯಿತು.. ಮೆರವಣಿಗೆಯ ನೇತೃತ್ವವನ್ನು ಪಿ.ಟಿ.ಎ.ಅಧ್ಯಕ್ಷ ರಾದ ಶ್ರೀಯುತ ಕಲಂದರ್ ತಾಜುದ್ದೀನ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾದ ಶ್ರೀಯುತ ಶೇಖ್ ಉಸ್ಮಾನ್, ಯಂ.ಪಿ.ಟಿ.ಎ ಅಧ್ಯಕ್ಷೆಯಾದ ಶ್ರೀಮತಿ ರಮೀಝ,…

Read More

ಬೈಕ್‌ನಲ್ಲಿ ಸಾಗಿಸಲಾಗುತ್ತಿದ್ದ ಮಾದಕ ದ್ರವ್ಯ ಎಂಡಿಎಂಎ ಯೊಂದಿಗೆ ಯುವಕನೊಬ್ಬನ ಸೆರೆ

ಮಂಜೇಶ್ವರ: ಬೈಕ್‌ನಲ್ಲಿ ಸಾಗಿಸಲಾಗುತ್ತಿದ್ದ 26.81 ಗ್ರಾಂ ಮಾದಕ ದ್ರವ್ಯ ಎಂಡಿಎಂಎ ಯೊಂದಿಗೆ ಯುವಕನೊಬ್ಬನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಸೋಮವಾರ ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ ಬಂಗ್ರಮಂಜೇಶ್ವರ ನಿವಾಸಿ ಅಬೂಬಕರ್ ಆಬೀದ್ (25) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಈತ ಚಲಾಯಿಸುತಿದ್ದ ಬೈಕನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹೊಸಂಗಡಿ ರಾಷ್ಟ್ರೀಯ ಹೆದ್ದಾರಿ ಓವ‌ರ್ ಬ್ರಿಡ್ಜ್ ರಸ್ತೆಯಲ್ಲಿ ಈ ಕಾರ್ಯಾಚರಣೆ ನಡೆಸುತ್ತಿರುವ ಮಧ್ಯೆ ವಾಹನ ತಪಾಸಣೆಯಲ್ಲಿ ಮಾದಕ ದ್ರವ್ಯ ಪತ್ತೆಹಚ್ಚಲಾಗಿದೆ.ಬಂಧಿತನ ಪ್ಯಾಂಟ್ ಜೇಬಿನಲ್ಲಿ ಎಂಡಿಎಂಎ ಪತ್ತೆಯಾಗಿರುವುದಾಗಿಯೂ ಬಂಧಿತ ಇತರ ಹಲವು…

Read More

ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಕೊಲೆ ಪ್ರಕರಣಕ್ಕೆ ಇನ್ನಷ್ಟು ಟ್ವಿಸ್ಟ್ …. !

ಮಂಗಳೂರು ನಗರ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್(42) ಕೊಲೆಯಾಗಿದ್ದಲ್ಲ. ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಮೃತದೇಹದ ಪೋಸ್ಟ್ ಮಾರ್ಟಂ ನಡೆಸಿದ ಕಾಸರಗೋಡಿನ ವೈದ್ಯರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಲಭಿಸಿತ್ತು. ನೌಫಾಲ್ ಮಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದುದರಿಂದ ಯಾರೋ ಮಾತುಕತೆಗೆ ಕರೆದು ಕೊಲೆ ಮಾಡಿದ್ದಾರೆಂದು ಮಾಹಿತಿ ಲಭಿಸಿತ್ತು. ಕುತ್ತಿಗೆ, ತಲೆಯಲ್ಲಿ ರಕ್ತ ಜಿನುಗಿದ್ದು ಹೊಡೆದು ಹಾಕಿದ ರೀತಿಯ ಕಲೆಗಳಿದ್ದುದರಿಂದ ಯಾರೋ…

Read More

ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು

ಮಂಗಳೂರು : ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ. ಘಟನೆಯಲ್ಲಿ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿಯಾದ…

Read More

ರೌಡಿಶೀಟರ್ ಟೊಪ್ಪಿ ನೌಫಲ್ ಹತ್ಯೆ ಪ್ರಕರಣದ ಸುತ್ತ ನೂರಾರು ಅನುಮಾನದ ಹುತ್ತ

ಮಂಗಳೂರು: ಉಪ್ಪಳ ರೈಲ್ವೆ ಗೇಟ್ ಬಳಿ ನಿಗೂಢವಾಗಿ ಹತ್ಯೆಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ರೌಡಿಶೀಟರ್ ಬಜಾಲ್ ನಿವಾಸಿ ಟೊಪ್ಪಿ ನೌಫಲ್ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಆತನ ಶವವನ್ನು ಪೊಲೀಸರು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮರಣೋತ್ತರ (ಪೋಸ್ಟ್ ಮಾರ್ಟಂ) ಪರೀಕ್ಷೆ ನಡೆಸಿ ಶವವನ್ನು ಮೃತನ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಮೂಲಗಳ ಪ್ರಕಾರ ಟೊಪ್ಪಿಯ ತಲೆ ಹಾಗೂ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗಳು ಕಂಡು ಬಂದಿರುವುದರಿಂದ ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ, ಪೊಲೀಸರು ಅನುಮಾನಿಸಿದ್ದಾರೆ. ಶವದ ಪ್ಯಾಂಟ್…

Read More

ಕಾಸರಗೋಡಿನ ಕನ್ನಡಿಗರ ಮೇಲಿನ ಮಲತಾಯಿ ಧೋರಣೆಗೆ ಕೊನೆ ಯಾವಾಗ …. ?!

ಕಾಸರಗೋಡು ಒಂದು ಕಾಲದಲ್ಲಿ ಕರ್ನಾಟಕದ ನಾಡಿ ಮಿಡಿತವೇ ಆಗಿತ್ತು ಆದರೆ ಭಾಷಾವಾರು ಪ್ರಾಂತ್ಯದ ರಚನೆಯ ಸಂದರ್ಭದಲ್ಲಿ ತಾಯಿಯ ಮಡಿಲಿನಿಂದ ಮಗುವನ್ನು ಬೇರ್ಪಡಿಸಿದಂತೆ ಕಾಸರಗೋಡನ್ನು ಕನ್ನಡನಾಡಿನಿಂದ ಬೇರ್ಪಡಿಸಿದರು. ಆ ದಿನ ಬೇರ್ಪಡಿಸಿದ್ದು ಬರೀ ನೆಲವಾಗದೇ ಕನ್ನಡಮ್ಮನ ಆಸರೆಯಲ್ಲಿದ್ದ ಕನ್ನಡಿಗರ ಮೇಲೆ ಮಾಡಿದ ಅನ್ಯಾಯವೇ ಆಗಿತ್ತು. 1956 ನವೆಂಬರ್ 1 ರಂದು ಕಾಸರಗೋಡು ಜಿಲ್ಲೆಯು ತಿರಸ್ಕಾರದ ಭಾವದಿಂದ ಕೇರಳ ರಾಜ್ಯಕ್ಕೆ ಸೇರಿತ್ತು. ಕೇರಳ ರಾಜ್ಯಕ್ಕೆ ಸೇರಿದ ಮೇಲೆ ಶುರುವಾಯಿತು ಕನ್ನಡಿಗರಿಗೆ ವ್ಯಥೆ. ಅಂದು ಶುರುವಾದ ವ್ಯಥೆ ಇಂದಿಗೂ ಅನುಭವಿಸಿಕೊಂಡು ಬರುವುದು…

Read More

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ

02 ನವೆಂಬರ್ 1990 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು. ಹಿಂದೂ ಮುಖಂಡರಾದ ಮುರಳೀಕೃಷ್ಣ ಹಸಂತಡ್ಕ, ಖ್ಯಾತ ವೈದ್ಯರಾದ ಸುರೇಶ್ ಪುತ್ತೂರಾಯ ಸಹಿತ ಒಟ್ಟು 33 ಜನ ಕಾರ್ಯಕರ್ತರು ರಕ್ತದಾನ…

Read More

ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜು ಮಂಗಳೂರಿನಲ್ಲಿ “ಸಿನರ್ಜಿಯಾ 2025” ವಿಜ್ಞಾನ ಕೌಶಲ್ಯ ಮೇಳ … !

ಮಂಗಳೂರು: ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜು, ಮಂಗಳೂರು, “ಶೈನ್ ಫೌಂಡೇಶನ್” ಸಹಯೋಗದೊಂದಿಗೆ “ಸಿನರ್ಜಿಯಾ 2025” ಎಂಬ ರಾಷ್ಟ್ರೀಯ ಮಟ್ಟದ ಸೃಜನಾತ್ಮಕ ನವೋದ್ಯಮ ಮೇಳವು ನವೆಂಬರ್ 6ರಿಂದ 8ರವರೆಗೆ ನಡೆಯಲಿದ್ದು , ಈ ಕಾರ್ಯಕ್ರಮವು ವಿಜ್ಞಾನ, ತಂತ್ರಜ್ಞಾನ ಹಾಗೂ ಸೃಜನಶೀಲತೆಯ ಸಂಯೋಜನೆಯ ಮೂಲಕ ಸಾಮಾಜಿಕ ಸವಾಲುಗಳಿಗೆ ಪರಿಹಾರ ಕಂಡುಹಿಡಿಯುವ ವೇದಿಕೆಯಾಗಿ ಪರಿವರ್ತನೆಗೊಳ್ಳಲಿದೆ ಎಂದು ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ…

Read More
error: Content is protected !!