ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಸಾವು

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ.ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತ ವ್ಯಕ್ತಿ. ಇಸ್ಮಾಯಿಲ್ ಕಬ್ಬಿಣದ ದೋಟಿ ಬಳಸಿ ತೆಂಗಿನ ಮರದಿಂದ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Read More

ಮಾಣಿ ಸಮೀಪದ ಕೊಡಾಜೆಯಲ್ಲಿ ಓಮ್ನಿ ಕಾರು ಪಲ್ಟಿ

ಬಂಟ್ವಾಳ: ಓಮ್ನಿ ಕಾರು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನ.02ರಂದು ನಡೆದಿದೆ. ಕುಶಾಲನಗರ ಮೂಲದ ಕುಟುಂಬವಿದ್ದ ಓಮ್ನಿ ಕಾರು ಮಂಗಳೂರಿನಿಂದ ಬರುತ್ತಿದ್ದ ವೇಳೆ ಕೊಡಾಜೆಯಲ್ಲಿ ವೀಲ್ ತುಂಡಾಗಿ ರಸ್ತೆ ಸಮೀಪದ ಹೊಂಡಕ್ಕೆ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಐವರು ಪ್ರಯಾಣಿಕರಲ್ಲಿ ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯವಾಗಿದ್ದು, ಇತರರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಅಪಘಾತದಿಂದಾಗಿ ಕಾರು ಜಖಂಗೊಂಡಿದ್ದು, ಕಾರಿನೊಳಗೆ ಸಿಲುಕಿದವರನ್ನು ಸ್ಥಳೀಯ ಯುವಕರ ಸಹಾಯದಿಂದ ಹೊರತೆಗೆಯಲಾಯಿತು. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು…

Read More

ಕಡು ಬಡತನ ಮುಕ್ತ ಕೇರಳ.”ಜನ ಸದಸ್ಸು

ಚಿಗುರುಪಾದೆ: ದೇಶದಲ್ಲೇ ಪ್ರಥಮ ಬಾರಿಗೆ ಕೇರಳ ರಾಜ್ಯವು ಕಡುಬಡತನ ಮುಕ್ತ ರಾಜ್ಯವಾಗಿ ಕೇರಳ ರಾಜ್ಯ ಸರಕಾರ ಘೋಷಿಸಿದ ಸಂಭ್ರಮಾಚರಣೆಯ ಭಾಗವಾಗಿ ಮೀಂಜ ಚಿಗುರು ಪಾದೆ ವಾರ್ಡ್ ಮಟ್ಟದ ಕಾರ್ಯಕ್ರಮವನ್ನು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಶ್ರೀ ಕೆ. ಆರ್. ಜಯಾನಂದ ಉದ್ಘಾಟಿಸಿ ಮಾತನಾಡಿದರು. ಸಭೆಯಲ್ಲಿ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಶ್ರೀ ಡಿ.ಕಮಲಾಕ್ಷ, “ಮೀಂಜ_ಮಂಗಲ್ಪಾಡಿ” ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ, ಶ್ರೀ ರಾಮಚಂದ್ರ ಟಿ.ಉಪಸ್ಥಿತರಿದ್ದರು. ಶ್ರೀ ಉದಯ ಸಿ.ಹೆಚ್.ಸ್ವಾಗತಿಸಿದರು.

Read More

ಗಣಪತಿಯ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡುವರ ಪರ ಸರ್ಕಾರ ನಿಲ್ಲುತ್ತದೆ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಮಂಗಳೂರು : ಗಣಪತಿಯ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡುವರ ಪರ ಸರ್ಕಾರ ನಿಲ್ಲುತ್ತದೆ. ತಲ್ವಾರ್ ಗಳು ಪ್ರದರ್ಶನ ಮಾಡುವವರ ಮೇಲೆ ಕ್ರಮ ಇಲ್ಲ. ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸರಕಾರದ ವಿರುದ್ಧ ಗುಡುಗಿದರು. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕರ್ನಾಟಕದಲ್ಲಿ 65 ಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆಯಾಗಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ, ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಯಾದಗಿರಿ…

Read More

ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ರಾಜ್ಯೋತ್ಸವ ಹಕ್ಕುಗಳಿಗಾಗಿ ಹೋರಾಡುವುದು ನಮ್ಮ ಹಕ್ಕು: ಮುರಳೀಧರ ಬಳ್ಳಕುರಾಯ

ಕಾಸರಗೋಡು : ನಮ್ಮ ಹಕ್ಕುಗಳು ಮತ್ತು ಸಂವಿಧಾನಾತ್ಮಕ ಸವಲತ್ತುಗಳು ನಿರಾಕರಿಸಲ್ಪಟ್ಟಾಗ ಅವುಗಳನ್ನು ಮರಳಿ ಪಡೆಯಲು ಹೋರಾಡುವುದು ನಮ್ಮ ಹಕ್ಕು. ಕೇರಳ ಸರಕಾರ ಈ ಬಗ್ಗೆ ತಿಳಿದುಕೊಂಡು ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಬೇಕಾಗಿದೆ ಎಂದು ಕರ್ನಾಟಕ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಮುರಳೀಧರ ಬಳ್ಳಕುರಾಯ ಹೇಳಿದರು. ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಆಶ್ರಯದಲ್ಲಿ ನಡೆದ ಕಾಸರಗೋಡು ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವದಾಖಲೆ ಸೃಷ್ಟಿಸಿದ ಶಾಸ್ತ್ರೀಯ ನೃತ್ಯ ಕಲಾವಿದೆ ಮಂಗಳೂರಿನ ರೆಮೊನಾ ಇವೆಟ್…

Read More

ಮಂಗಳೂರಿನ ನಟೋರಿಯಸ್ ರೌಡಿಶೀಟರ್ ನೌಫಲ್ ಅಲಿಯಾಸ್ ನೌಫ ಮರ್ಡರ್…!ಉಪ್ಪಳದ ರೈಲ್ವೇ ಹಳಿಯಲ್ಲಿ ಶವ ಪತ್ತೆ

ಮಂಗಳೂರಿನ ನಟ್ಟೋರಿಯಸ್ ರೌಡಿ ಶಿಟರ್ ನೌಫಲ್ ಅಲಿಯಾಸ್ ನೌಫನ ಶವ ಉಪ್ಪಳದ ರೈಲ್ವೇ ಹಳಿಯಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಉಪ್ಪಳದ ರೈಲ್ವೆ ಟ್ರಾಕ್ ನಲ್ಲಿ ಶವ ಬಿದಿದ್ದು ಕೊಲೆಯಾಗಿರಬಹುದು ಎಂದು ಶಂಕೆಯಿದೆ. ಸ್ಥಳಕ್ಕೆ ಕೇರಳ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಕೊಲೆಯಾದ ನೌಫಲ್ ನ ವಿರುದ್ಧ ಮಂಗಳೂರು ಮತ್ತು ದ.ಕ ಜಿಲ್ಲೆಯಲ್ಲಿ ಅನೇಕ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳಿವೆ.ಈತ ಮಂಗಳೂರಿನ ಫೈಸಲ್ ನಗರದ ನಿವಾಸಿ ಯಾಗಿರುತ್ತಾನೆ.

Read More

ಮಂಗಳೂರಿನ ಕೇಂದ್ರ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ

ಕನ್ನಡ ರಾಜ್ಯೋತ್ಸವ ಸಮಾರಂಭವೂ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮತ್ತು ಸಂಘ ಸಂಸ್ಥೆಗಳಿಗೆ ಸನ್ಮಾನ ಜರಗಿತು. 18 ದೈವಸ್ಥಾನದ ಮಂಗಳೂರು ಜಿಲ್ಲಾ ಬಾಕುಡ ಸಮಾಜ ಸೇವಾ ಸಮಿತಿಗೂ ಜಿಲ್ಲಾ ರಾಜ್ಯೊತ್ಸವ ಪ್ರಶಸ್ತಿ ಲಭಿಸಿತು. ಅಧ್ಯಕ್ಷರಾದ ಶ್ರೀ ದೇವಾನಂದ ಮಂಗಳೂರು ಪ್ರಶಸ್ತಿ ಪತ್ರ ಸಹಿತ ಗೌರವ ಪುರಸ್ಕಾರ ಪಡೆದರು. ಈ ಸಂಧರ್ಭದಲ್ಲಿ ನೇತಾರರಾದ ಶ್ರೀಮತಿ ಇಂದಿರಾ ನಾಗೇಶ್ ‘ ನವೀನ್. ಗಣೇಶ್. ವಿಜಯ ಪಂಡಿತ್ ಶ್ರೀಮತಿ ಸುನೀತಾ…

Read More

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ…

Read More

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ 11 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಮಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ದಲ್ಲಿ 11 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಜನರಲ್ಲಿ ಭಯ ಮೂಡಿಸುವುದಕ್ಕಾಗಿ ಕೊಲೆಯೆಂದು ಉಲ್ಲೇಖ ಮಾಡಲಾಗಿದೆ. ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್‌ಐಎ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೇಶದ್ರೋಹ ಕಾಯ್ದೆ ಸೇರಿದಂತೆ ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿತ್ತು. ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಸುಹಾಸ್ ಶೆಟ್ಟಿಯನ್ನು 2025ರ ಮೇ 1ರಂದು ಬಜ್ಜೆಯಲ್ಲಿ ಜನರು…

Read More

ಬಂಟ ಸಮಾಜ ಬಾಂಧವರೊಳಗೆ ಬಾಂಧವ್ಯ ನಶಿಸಿ ಹೋಗುತ್ತಿದೆ: ಕೆ ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಬಂಟ ಸಮಾಜ ಬಾಂಧವರೊಳಗೆ ಬಾಂಧವ್ಯ ನಶಿಸಿ ಹೋಗುತ್ತಿದೆ. ಸಮಾಜ ಬಾಂಧವರೊಳಗಿನ ಬಾಂಧವ್ಯವನ್ನು ಪುನರುತ್ಥಾನ ಮಾಡುವ ಮಹೋನ್ನತವಾದ ಕಾರ್ಯವನ್ನು ನಾವು ಮಾಡಬೇಕಾಗಿದೆ. ನಮ್ಮವರು ಜಗತ್ತಿನಾದ್ಯಂತ ಚದುರಿ, ಪಸರಿಸಿ ಹೋಗಿದ್ದಾರೆ. ಅವರು ಯಾವ ಪರಿಸ್ಥಿತಿಯಲ್ಲಿದ್ದಾರೆ, ಎಲ್ಲಿದ್ದಾರೆ ಎಂಬ ವಿಷಯ, ಮಾಹಿತಿ ನಮ್ಮಲಿಲ್ಲ. ಸಹಸ್ರಾರು ಸಮಾಜ ಬಾಂಧವರು ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅವರ ಕಣ್ಣೀರನ್ನು ಒರೆಸಿ ಅವರಿಗೆ ಸಹಾಯ ಮಾಡುವ ಹಾಗೂ ಬಂಟ ಸಮಾಜವನ್ನು ಒಗ್ಗೂಡಿಸಿ ಬಾಂಧವ್ಯವನ್ನು ಬೆಸೆಯುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಿದ್ದೇವೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ…

Read More
error: Content is protected !!