ತೃತೀಯ ಲಿಂಗಿಗಳ ಬಗ್ಗೆ ಜಾಗೃತಿ: ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ

ಮಂಗಳೂರು, ಜೂನ್ 4: ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು. ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇದರ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಗಳ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೀದಿ ನಾಟಕದ ಮೂಲಕ ತೃತೀಯ ಲಿಂಗಿಗಳ ಹಕ್ಕುಗಳು, ಸಾಮಾಜಿಕ ಸ್ವೀಕಾರ, ಸಮಾನ ಅವಕಾಶಗಳು…

Read More

ಡಿ.ಕೆ. ಶಿವಕುಮಾರ್ ಸಿಎಂ: ಉಡುಪಿಯಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಉಡುಪಿ, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ D. K. Shivakumar ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ನಗರದ ಕಿನ್ನಿಮೂಲ್ಕಿ ಸಮೀಪ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಜೈಕಾರ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು. ನೂತನ ಮುಖ್ಯಮಂತ್ರಿಯ ನೇತೃತ್ವಕ್ಕೆ ಬೆಂಬಲ ಸೂಚಿಸಿದ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಹೆಚ್ಚಿನ…

Read More

ವಿದೇಶಿ ಪ್ರಜೆಗಳೇ ಹೆಚ್ಚು ಬಲಿ: ದೆಹಲಿ ಅಗ್ನಿ ಅವಘಡದ ಬೆಚ್ಚಿಬೀಳಿಸುವ ವಿವರ

ರಾಷ್ಟ್ರ ರಾಜಧಾನಿ ದೆಹಲಿಯ ದಕ್ಷಿಣ ಭಾಗದ ಮಾಳವೀಯ ನಗರದಲ್ಲಿರುವ ಹೌಜ್ ರಾಣಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮೃತರಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ವಿದೇಶಿ ಪ್ರಜೆಗಳು ಎನ್ನಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ, ಬೆಳಿಗ್ಗೆ ಸುಮಾರು 8.50ರ ವೇಳೆಗೆ ಐದು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿದ್ದ ಮಿಕಾಸಾ ಇನ್ ಹಾಗೂ ಫ್ಲರಿಶ್ ಸ್ಟೇ ಹೋಟೆಲ್‌ಗಳ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಹೋಟೆಲ್‌ನ…

Read More

ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿ: ಸರ್ವಧರ್ಮ ಸೌಹಾರ್ದದ ನಡುವೆ ಭವ್ಯ ಪ್ರಮಾಣವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ 12 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಸ್ವೀಕರಿಸಿ ನೂತನ ಸಚಿವ ಸಂಪುಟವನ್ನು ಸೇರ್ಪಡೆಗೊಂಡರು. ಪ್ರಮಾಣವಚನ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ…

Read More

ಜುಲೈ 4-5ರಂದು ಕಾಸರಗೋಡಿನಲ್ಲಿ ಹಲಸು ಮತ್ತು ಮಾವು ಮೇಳ: ವಿವಿಧ ತಳಿಗಳ ಪ್ರದರ್ಶನ, ಮಾರಾಟಕ್ಕೆ ಅವಕಾಶ

ಕಾಸರಗೋಡು, ಜೂನ್ 4: ಹಲಸು ಹಾಗೂ ಮಾವು ಪ್ರಿಯರಿಗಾಗಿ ಸಪ್ತಭಾಷಾ ಸಂಗಮ ನೆಲ ಕಾಸರಗೋಡಿನಲ್ಲಿ ಜುಲೈ 4 ಮತ್ತು 5ರಂದು ಎರಡು ದಿನಗಳ ‘ಹಲಸು ಮತ್ತು ಮಾವು ಮೇಳ’ ಆಯೋಜಿಸಲಾಗಿದೆ. ಕೋಟೆಕಣಿಯ ಜೀವಾಸ್ ಮಾನಸ ಆಡಿಟೋರಿಯಂನಲ್ಲಿ ನಡೆಯಲಿರುವ ಈ ಮೇಳದಲ್ಲಿ ಹಲಸು ಮತ್ತು ಮಾವಿನ ವಿವಿಧ ತಳಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದ್ದು, ಇವುಗಳಿಂದ ತಯಾರಿಸಲಾದ ವೈವಿಧ್ಯಮಯ ಆಹಾರ ಉತ್ಪನ್ನಗಳ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ. ಮೇಳದಲ್ಲಿ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ರೈತರಿಗೆ ತಮ್ಮ…

Read More

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ

ಮಂಗಳೂರು:ಎಕ್ಸ್‍ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು.ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ

ಕಡಬ: ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕಡಬ ತಾಲೂಕು ಆಡಳಿತ ಕಚೇರಿ ಉಪತಹಶೀಲ್ದಾರ ಸಯ್ಯುದುಲ್ ಖಾನ್ ಮಾಹಿತಿ ನೀಡಿ, ಕಡಬದಲ್ಲಿ ಕೆ.ಎಸ್ ಆರ್ ಟಿಸಿ ಬಸ್ಸು ನಿಲ್ದಾಣಕ್ಕೆ ಗುರುತಿಸಲಾದ ಕೋಡಿಂಬಾಳ ಗ್ರಾಮದ ೧೪೩/೧ಎ ಸರ್ವೆ ನಂಬರಿನ ೨.೮೩ ಎಕ್ರೆ ಜಾಗಕ್ಕೆ ಉಚ್ಚ ನ್ಯಾಯಲಯದ ತಡೆಯಾಜ್ಞೆಯಿದೆ. ಅಲ್ಲದೆ ಈ ಜಾಗಕ್ಕೆ ಸಂಪರ್ಕ ರಸ್ತೆ ಕಿರಿದಾಗಿದೆ ಎಂದು ಕೆ…

Read More

ದೆಹಲಿ ಅಗ್ನಿ ದುರಂತ: 21 ಸಾವು ಪ್ರಕರಣದಲ್ಲಿ ಅತಿಥಿಗೃಹ ಮಾಲೀಕ ಬಂಧನ

ಹೊಸದಿಲ್ಲಿ, ಜೂನ್ 4: ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿರುವ ಫರಿಶ್ ಸ್ಟೇ ಬಿ & ಬಿ ಅತಿಥಿಗೃಹದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಲವಕೇಶ್ ಬಜಾಜ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಗ್ನಿ ಸುರಕ್ಷತೆ ಮತ್ತು ಕಟ್ಟಡ ನಿರ್ಮಾಣ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ಹೌಝ್ ರಾಣಿ ಪ್ರದೇಶದಲ್ಲಿರುವ ಐದು ಮಹಡಿಯ ಅತಿಥಿಗೃಹದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದರು. ಮೃತರಲ್ಲಿ 18 ಮಂದಿ…

Read More

ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮ: ಕಲಾವಿದರಿಗೆ ಸನ್ಮಾನ

ಮಂಗಳೂರು: ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಸರಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಧರ್ಮದರ್ಶಿ ಸುರೇಶ್ ಸಾಲಿಯನ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟಕ್ಕೆ ಸಮಸ್ತ ಕಲಾಭಿಮಾನಿಗಳು ಸಹಕಾರ ನೀಡಬೇಕು. ಧರ್ಮ ಪ್ರಜ್ಞೆಯನ್ನು ಬೆಳೆಸುವ ಹಾಗೂ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ…

Read More

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ್‌ಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು, ಜೂನ್ 4: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿ.ಕೆ. ಹರಿಪ್ರಸಾದ್ ಹಾಗೂ ಪಿ.ವಿ. ಮೋಹನ್ ಅವರಿಗೆ ಅವಕಾಶ ನೀಡಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಧಾನ ಪರಿಷತ್ ಚುನಾವಣೆಗೆ ಬಿ.ಕೆ. ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಜೂನ್…

Read More
error: Content is protected !!