ತೃತೀಯ ಲಿಂಗಿಗಳ ಬಗ್ಗೆ ಜಾಗೃತಿ: ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ
ಮಂಗಳೂರು, ಜೂನ್ 4: ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಲಾಲ್ಬಾಗ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು. ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇದರ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಗಳ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೀದಿ ನಾಟಕದ ಮೂಲಕ ತೃತೀಯ ಲಿಂಗಿಗಳ ಹಕ್ಕುಗಳು, ಸಾಮಾಜಿಕ ಸ್ವೀಕಾರ, ಸಮಾನ ಅವಕಾಶಗಳು…