ಮಂಜೇಶ್ವರ ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ತೀವ್ರ: ಅಶ್ರಪ್ ಪರ ಅಸ್ಮ ಹಸೈನಾರ್ ಪ್ರಚಾರ

ಕಾಸರಗೋಡು: ಕೇರಳ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಕಾವು ದಿನೇ ದಿನೇ ಹೆಚ್ಚುತ್ತಿದ್ದು, ತ್ರಿಕೋನ ಸ್ಪರ್ಧೆಯಿಂದ ಮಂಜೇಶ್ವರ ಕ್ಷೇತ್ರದಲ್ಲಿ ರಾಜಕೀಯ ಪೈಪೋಟಿ ತೀವ್ರಗೊಂಡಿದೆ. ವಿವಿಧ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯಗಳನ್ನು ವೇಗಗೊಳಿಸಿ ಮತದಾರರ ಮನಗೆಲ್ಲಲು ಹರಸಾಹಸ ಪಡುತ್ತಿವೆ. ಈ ಹಿನ್ನೆಲೆಯಲ್ಲಿ ಮಂಜೇಶ್ವರ, ಪಾವೂರು ಮತ್ತು ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಚುನಾವಣಾ ವೀಕ್ಷಕರಾಗಿ ಆಗಮಿಸಿದ್ದ ಮಹಿಳಾ ಕಾಂಗ್ರೆಸ್ ಪ್ರಮುಖ ನಾಯಕಿ ಕೆ.ಎ. ಅಸ್ಮ ಹಸೈನಾರ್ ಭಾಗವಹಿಸಿ ಮತಯಾಚನೆ ನಡೆಸಿದರು….

Read More

ಸೂರಿಕುಮೇರು: ಅತೀವೇಗದ ಚಾಲನೆ – ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್

ಮಾಣಿ: ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದು ತಿಳಿದುಬಂದಿದೆ. ಮಾಹಿತಿಯಂತೆ, ಅತೀವೇಗದಲ್ಲಿ ಸಂಚರಿಸುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ವಾಹನದ ಮುಂಭಾಗಕ್ಕೆ ಭಾರೀ ಹಾನಿಯಾಗಿದೆ. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವುದರಿಂದ, ವಾಹನಗಳು ಹೆಚ್ಚುವರಿ…

Read More

ಗೇರುಕಟ್ಟೆ: ಸರ್ಕಾರಿ ಬಸ್ ಬಾಗಿಲು ತೆರೆದು ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು

ದಕ್ಷಿಣ ಕನ್ನಡ: ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ, ಸಂಚರಿಸುತ್ತಿದ್ದ ಸರ್ಕಾರಿ ಬಸ್‌ನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗಪ್ಪಳಿಸಿ ಗಾಯಗೊಂಡಿದ್ದಾರೆ. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ಬಸ್‌ನಿಂದ ಬಿದ್ದು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬಳು ಬೆಳ್ತಂಗಡಿಯ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಮತ್ತೊಬ್ಬಳು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯಾಗಿದ್ದು ಸಾರ್ವಜನಿಕ ಪರೀಕ್ಷೆ ಬರೆಯಲು ತೆರಳುತ್ತಿದ್ದಳು ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು…

Read More

ಮಾನವೀಯತೆ ಮೆರೆದ ತಲಪಾಡಿ ಬಿಎಂಎಸ್ ಲಾಟರಿ ಮಾರಾಟಗಾರರು: ಕ್ಯಾನ್ಸರ್ ಪೀಡಿತನಿಗೆ ಆರ್ಥಿಕ ನೆರವು

ಮಾನವೀಯತೆಯ ಮೆರುಗು ತೋರಿದ ತಲಪಾಡಿ ಬಿಎಂಎಸ್ ಕೇರಳ ಲಾಟರಿ ಮಾರಾಟಗಾರರು, ಕ್ಯಾನ್ಸರ್‌ ಪೀಡಿತನಿಗೆ ಆರ್ಥಿಕ ನೆರವು ನೀಡಿ ಸಮಾಜ ಸೇವೆಗೆ ಮಾದರಿಯಾದರು. ಕಾಸರಗೋಡು ತಾಲೂಕಿನ ತಲಪಾಡಿ ಗ್ರಾಮದ ಮಾಧವ ಅವರ ಪುತ್ರ ಪ್ರದೀಪ್ ಅವರು ಕೊರಳು ಭಾಗದ ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದು, ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಚಿಕಿತ್ಸೆಗಾಗಿ ಈಗಾಗಲೇ ಲಕ್ಷಾಂತರ ರೂಪಾಯಿ ವೆಚ್ಚವಾಗಿದ್ದು, ಮುಂದಿನ ಚಿಕಿತ್ಸೆಗೆ ಸಹಾಯ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ತಲಪಾಡಿ ಬಿಎಂಎಸ್ ಲಾಟರಿ ಮಾರಾಟಗಾರರ ಸಂಘದ ಸದಸ್ಯರು ಒಟ್ಟುಗೂಡಿ ಸಂಗ್ರಹಿಸಿದ ನೆರವುಧನವನ್ನು ಶ್ರೀ ಭ್ರಾಮರಿ…

Read More

ಬಂದ್ಯೋಡು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಕೆ.ಸಿ. ರೋಡ್ ಯುವಕನ ದಾರುಣ ಅಂತ್ಯ

​ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ​ತಲಪಾಡಿ ಸಮೀಪದ ಕೆ. ಸಿ. ರೋಡ್ ನಿವಾಸಿ ಮುಹ್ಯುದ್ದೀನ್ ನಿಸಾನ್ (28) ಸಾವನ್ನಪ್ಪಿದ ದುರ್ದೈವಿ. ​ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಬಂದ್ಯೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದ ಲಾರಿಯ ಹಿಂಭಾಗಕ್ಕೆ ನಿಸಾನ್ ಚಲಾಯಿಸುತ್ತಿದ್ದ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಸಾನ್ ಗಂಭೀರವಾಗಿ…

Read More

ಕಾಸರಗೋಡು ಕನ್ನಡ ಗ್ರಾಮದಲ್ಲಿ ಕೇರಳ ಸರಕಾರದ ಮಲಯಾಳಂ ಭಾಷಾ ಬಿಲ್ಸ್- 2025 ತಿದ್ದುಪಡಿಗೆ ಆಗ್ರಹಿಸಿ, ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು ಗಣ್ಯರ ಸಭೆ ಯಶಸ್ವಿ

ಕೇರಳ ಸರಕಾರವು (Malayalam Bhasha Bills -2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಾ ಅಲ್ಪ ಸಂಖ್ಯಾತರನ್ನು ಹೊರತುಪಡಿಸಲು ಆಗ್ರಹಿಸಿ, ಮುಂದಿನ ಕೇರಳ ವಿಧಾನ ಸಭಾ ಚುನಾವಣೆಯಲ್ಲಿ ಚುನಾಯಿತರಾದ ನೂತನ ಮುಖ್ಯಮಂತ್ರಿಗಳು,ಸಚಿವರು, ಶಾಸಕರು ಒಮ್ಮತದಿಂದ ಈ ಮಸೂದೆಯನ್ನು ಮರು ಪರಿಶೀಲಿಸಿ ಸೂಕ್ತ ತಿದ್ದುಪಡಿ ಯೊಂದಿಗೆ ಪುನ: ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಕಾಸರಗೋಡು ಪ್ರದೇಶದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು, ಮಾಧ್ಯಮದವರು ಒಗ್ಗೂಡಿ, “ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು” ಮೂಲಕ ಮನವಿಯನ್ನು ಸಿದ್ಧಪಡಿಸಿ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು….

Read More

ಮಂಜೇಶ್ವರ ಯು ಡಿ ಎಫ್ ಅಭ್ಯರ್ಥಿಯಿಂದ ಮೀoಜ – ಪೈವಳಿಕೆ ಪಂಚಾಯತಿನಲ್ಲಿ ಎರಡನೇ ದಿನದ ಮಂಡಲ ಪರ್ಯಟನೆ

ಮಿಯಾಪದವು : ಯು.ಡಿ.ಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್ ಅವರ ಕ್ಷೇತ್ರ ಪರ್ಯಟನೆಎರಡನೇ ದಿನವೂ ಭಾರೀ ಉತ್ಸಾಹದಿಂದ ಮುಂದುವರಿಯಿತು. ಎ.ಕೆ.ಎಂ ಅಶ್ರಫ್ ಅವರು ಮೀoಜಾ ಹಾಗೂ ಪೈವಳಿಕೆ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಪರ್ಯಟನೆ ನಡೆಸಿದರು. ಬೆಳಗ್ಗೆ ದೈಗೋಳಿ ಪ್ರದೇಶದಿಂದ ಆರಂಭವಾದ ಈ ಪರ್ಯಟನೆ ಮಜೀರ್ಪಳ್ಳ, ಗಾಂಧಿನಗರ, ಮದಂಕಲ್, ಮಿಯಾಪದವು, ಚಿಗುರುಪಾದೆ , ಬಾಳಿಯೂರು, ಮೂಡಂಬೈಲ್ , ಕಡಂಬಾರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚರಿಸಿ ಕಡಂಬಾರ್‌ನಲ್ಲಿ ಸಮಾರೋಪಗೊಂಡಿತು . ಮಧ್ಯಾಹ್ನದ ನಂತರ ಲಾಲ್‌ಬಾಗ್, ಬಾಯಾರಪದವು, ಸಿರಂತಡ್ಕ, ಸುಂಕದಕಟ್ಟೆ , ಕುರುಡಪದವು,…

Read More

ಕೊರಿಂಗಿಲ ಮದ್ರಸದಲ್ಲಿ ಮಿಹ್ರಜಾನುಲ್ ಬಿದಾಯ ಮದ್ರಸ ಪ್ರಾರಂಭೋತ್ಸವ

ಪುತ್ತೂರು: ಕೊರಿಂಗಿಲದಲ್ಲಿರುವ ಮಿಸ್ಬಾಹುಲ್ ಹುದಾ ಮದ್ರಸದಲ್ಲಿ 2026ನೇ ಸಾಲಿನ ಮದ್ರಸ ಅಧ್ಯಯನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಪ್ರಥಮ ತರಗತಿಗೆ ಸೇರ್ಪಡೆಗೊಂಡ ಹೊಸ ವಿದ್ಯಾರ್ಥಿಗಳನ್ನು ಬಲೂನ್ ಹಾಗೂ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ವಿಶೇಷವಾಗಿ, ಧಾರ್ಮಿಕ ಶಿಕ್ಷಣದಲ್ಲಿ ಸ್ವಫಾಹಿ ಬಿರುದು ಪಡೆದ ಕೀಲಂಪಾಡಿ ನಿಜಾರ್ ಸ್ವಫಾಹಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಖತೀಬರಾದ ಅಯ್ಯೂಬ್ ವಹಬಿ ಉಸ್ತಾದರು ಮದ್ರಸ ಶಿಕ್ಷಣದ ಅಗತ್ಯತೆ ಮತ್ತು ಮಹತ್ವವನ್ನು ವಿವರಿಸಿ, ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಹ ಅಧ್ಯಾಪಕರಾದ…

Read More

ಮಲಯಾಳ ಭಾಷಾ ಬಿಲ್–2025 ವಿರೋಧಕ್ಕೆ ಕಾಸರಗೋಡಿನಲ್ಲಿ ಕನ್ನಡ ಸಂಘಟನೆಗಳ ಆಕ್ರೋಶ

ಕಾಸರಗೋಡು: ಕೇರಳ ಸರ್ಕಾರ ಪ್ರಸ್ತಾಪಿಸಿರುವ ಮಲಯಾಳ ಭಾಷಾ ಬಿಲ್ಸ್–2025 ಕುರಿತು ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳು ತೀವ್ರ ಆತಂಕ ವ್ಯಕ್ತಪಡಿಸಿವೆ. ಈ ಮಸೂದೆ ಕನ್ನಡ ಭಾಷಿಕರು ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ ನೇತೃತ್ವದಲ್ಲಿ, ಕೇರಳದ ನೂತನ ಮುಖ್ಯಮಂತ್ರಿಗಳಿಗೆ ಈ ಸಂಬಂಧ ವಿವರವಾದ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಜೊತೆಗೆ, ಕಾಸರಗೋಡು ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳನ್ನು…

Read More

ಹಜ್ ಭವನ ನಿರ್ಮಾಣ ವಿಳಂಬಕ್ಕೆ ಎಸ್‌ಡಿಪಿಐ ಆಕ್ರೋಶ

ಹಜ್ ಭವನಕ್ಕೆ ಜಾಗವಿದ್ದರೂ, ಅನುದಾನವೂ ಲಭ್ಯವಿದ್ದರೂ ಕಾಮಗಾರಿ ವಿಳಂಬವಾಗುತ್ತಿರುವುದೇಕೆ ಎಂದು ಪ್ರಶ್ನಿಸಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್, ಮಂಗಳೂರಿನಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನವನ್ನು ಕೂಡಲೇ ನಿರ್ಮಿಸಬೇಕು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯವನ್ನು ಮರುಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಜ್ ಯಾತ್ರಿಕರು ಎದುರಿಸುತ್ತಿರುವ ಸಮಸ್ಯೆಗಳತ್ತ ಸರ್ಕಾರದ…

Read More
error: Content is protected !!