ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಜೂನ್ 7ರಿಂದ ಜ್ಞಾನೇಶ್ವರಿ ಪಾರಾಯಣ, ಹರಿನಾಮ ಸಪ್ತಾಹ

ಅಧಿಕ ಮಾಸದ ಅಂಗವಾಗಿ ಕನ್ಯಾಡಿಯ ಶ್ರೀರಾಮ ಕ್ಷೇತ್ರದಲ್ಲಿ ಜೂನ್ 7ರಿಂದ 13ರವರೆಗೆ ಶ್ರೀ ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶ್ರೀ ಚೈತನ್ಯ ಸದ್ಗುರು ಹರಿಪ್ರಸಾದ್ ಮಹಾರಾಜ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಪ್ರಸಿದ್ಧ ಪುಣ್ಯಕ್ಷೇತ್ರ ಪಂಢರಪುರ, ಶ್ರೀ ಚೈತನ್ಯ ಸದ್ಗುರು ಹರದಾಸ್ವಾಮಿ ಹ. ಹಿರೇಹರಕರ ಬಹುಉದ್ದೇಶೀಯ ಸಂಸ್ಥೆ ಹಾಗೂ ಪಂಢರಪುರದ ಸಹಯೋಗದಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ…

Read More

ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಕನ್ನಡ ಶಾಲೆಗಳ ಉಳಿವಿಗೆ ಅರ್ಥಪೂರ್ಣ ಹೆಜ್ಜೆ

ಮುಡಿಪು: ದಾನಿಗಳ ಸಹಕಾರವೇ ಆಧಾರವಾಗಿರುವ ಭಾರತಿ ಅನುದಾನಿತ ಶಾಲೆ, ಮುಡಿಪು ಕುರ್ನಾಡಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ, ಪೆನ್ನು ಹಾಗೂ ಬಳಪ ವಿತರಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ಕೈಗೊಳ್ಳಲಾಗಿದೆ. ಕನ್ನಡ ಜಾಗೃತಿ ಸಮಿತಿಯ ಸದಸ್ಯರೂ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸೈನಾರ್ ತಾಳಿತ್ತನೂಜಿ, ಸಾಮಾಜಿಕ ಟ್ರಸ್ಟ್‌ನ ನೆರವು ಹಾಗೂ ಖ್ಯಾತ ವ್ಲಾಗರ್ ಸಲಾಂ ಸಮ್ಮಿ ಅವರ ಸಹಯೋಗದೊಂದಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು….

Read More

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು: ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ ಪಡೆದಿರುವ ಬಂದೂಕು ಪರವಾನಗಿಯ ನವೀಕರಣ ಅರ್ಜಿಗಳನ್ನು ಕಠಿಣ ನಿಯಮಗಳ ನೆಪವೊಡ್ಡಿ ಅಧಿಕಾರಿಗಳು ವ್ಯವಸ್ಥಿತವಾಗಿ ತಿರಸ್ಕರಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಇದರಿಂದ ಕೃಷಿಕರು…

Read More

ಯಕ್ಷಗಾನದ ಪವಿತ್ರತೆಗೆ ಧಕ್ಕೆ: ಅನಧಿಕೃತ ಚಿಕ್ಕಮೇಳಗಳ ವಿರುದ್ಧ ಕಠಿಣ ಕ್ರಮ

ಕರಾವಳಿಯ ಹೆಮ್ಮೆಯ ಗಂಡುಕಲೆ ಯಕ್ಷಗಾನದ ಪವಿತ್ರತೆಯನ್ನು ಹಾಳುಮಾಡಿ, ‘ಚಿಕ್ಕಮೇಳ’ಗಳ ಹೆಸರಿನಲ್ಲಿ ಹಣ ಸಂಪಾದನೆಯ ದಂಧೆ ನಡೆಸುವ ಅನಧಿಕೃತ ತಂಡಗಳ ವಿರುದ್ಧ ತೆಂಕುತಿಟ್ಟು ಸಣ್ಣ ಮೇಳಗಳ ಒಕ್ಕೂಟ ಕಠಿಣ ನಿಲುವು ತಾಳಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಸರಪಾಡಿ ಅಶೋಕ ಶೆಟ್ಟಿ, ಒಕ್ಕೂಟದ ಅಧಿಕೃತ ಪರವಾನಗಿ ಇಲ್ಲದೆ ಯಾವುದೇ ಸಣ್ಣ ಮೇಳಗಳು ತಿರುಗಾಟ ನಡೆಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು. ಯಕ್ಷಗಾನದ ಜ್ಞಾನವಿಲ್ಲದವರು ತಂಡಗಳನ್ನು ಕಟ್ಟಿಕೊಂಡು ಕಲೆಯ ಘನತೆಗೆ ಧಕ್ಕೆ ತರುತ್ತಿದ್ದು, ಇಂತಹ ಚಟುವಟಿಕೆಗಳಿಗೆ…

Read More

ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಹಿಫ್‌ಝ್ ಸಾಧನೆಗೆ ಗೌರವ, ಶೈಕ್ಷಣಿಕ ವರ್ಷಕ್ಕೆ ಭಕ್ತಿಪೂರ್ಣ ಚಾಲನೆ

ಮಂಜೇಶ್ವರ, ಜೂನ್ 3: ರಾಷ್ಟ್ರವನ್ನು ಸರಿಯಾದ ಶಿಕ್ಷಣದ ಮೂಲಕ ಸಬಲಗೊಳಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕುಂಜತ್ತೂರಿನ ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭವು ಅರ್ಥಪೂರ್ಣ ಮತ್ತು ಭಕ್ತಿಪೂರ್ಣ ಕಾರ್ಯಕ್ರಮದೊಂದಿಗೆ ನೆರವೇರಿತು. ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವ ಜೊತೆಗೆ, ಕುರ್‌ಆನ್ ಅನ್ನು ಸಂಪೂರ್ಣವಾಗಿ ಕಂಠಪಾಠ (ಹಿಫ್‌ಝ್) ಮಾಡಿದ ಇಬ್ಬರು ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಗುಣಮಟ್ಟದ ಶಿಕ್ಷಣದೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಮರುಆರಂಭದ ಸಂಭ್ರಮದಲ್ಲಿ ಈ ಸಾಧನೆ ವಿಶೇಷ ಮೆರಗು ನೀಡಿತು. ಸಾಹುಲ್ ಹಮೀದ್–ರಜಿಯಾ ದಂಪತಿಗಳ ಪುತ್ರ ಹಾಫಿಲ್…

Read More

​ಮಂಜೇಶ್ವರ: ಉದ್ಯಾವರದಲ್ಲಿ ಕೋಳಿ ಅಂಗಡಿಗೆ ಕಳ್ಳರ ಲಗ್ಗೆ; 20 ಸಾವಿರ ರೂಪಾಯಿ ನಗದು ಕಳವು

​ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಕೋಳಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ನಗದನ್ನು ದೋಚಿರುವ ಘಟನೆ ನಡೆದಿದೆ. ​ಉದ್ಯಾವರದ ರಫೀಕ್ ಎಂಬುವರಿಗೆ ಸೇರಿದ ಕೋಳಿ ಅಂಗಡಿಯನ್ನು ಗುರಿಯಾಗಿಸಿ ಈ ಕೃತ್ಯ ನಡೆದಿದೆ. ಅಂಗಡಿಯ ಡ್ರಾಯರ್‌ನಲ್ಲಿ ಇರಿಸಿದ್ದ ಸುಮಾರು 20,000 ರೂಪಾಯಿ ನಗದನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.​ಬುಧವಾರ ಬೆಳಿಗ್ಗೆ ಅಂಗಡಿಯ ಮಾಲಕರು ಬಂದಾಗ ಕಳ್ಳತನದ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಅವರು ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ…

Read More

ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು, ಜೂನ್ 03 : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು…

Read More

ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ – 2026ಕ್ಕೆ ಚಾಲನೆ

ಬೆಂಗಳೂರು, ಜೂನ್ 3:ಕನ್ನಡ ಸಾಹಿತ್ಯದ ಮೂಲಕ ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಆರೋಗ್ಯ ಸಾಹಿತ್ಯ ಪರಿಷತ್ ವತಿಯಿಂದ “ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ – 2026” ಆರಂಭಿಸಲಾಗಿದೆ. ಈ ಸ್ಪರ್ಧೆಗೆ “ವೈದ್ಯಲೋಕ” ಆರೋಗ್ಯ ಮಾಸಪತ್ರಿಕೆ ಮತ್ತು ಮೀಡಿಯಾ ಐಕಾನ್ ಸಂಸ್ಥೆಗಳು ಸಹಯೋಗ ನೀಡುತ್ತಿವೆ. ಬರವಣಿಗೆಯ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ಹಾಗೂ ಸ್ವಾಸ್ಥ್ಯದ ಕುರಿತು ಅರಿವು ಮೂಡಿಸುವುದು ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಪ್ರೇರಣೆ ನೀಡುವುದು ಈ ಸ್ಪರ್ಧೆಯ ಪ್ರಮುಖ…

Read More

ಕಾಣೆಯಾದ ವ್ಯಕ್ತಿಗಾಗಿ ಸಾರ್ವಜನಿಕರ ಸಹಾಯಕ್ಕೆ ಮನವಿ

ಮಂಗಳೂರು, ಜೂನ್ 3:ನಗರದ ಕಣ್ಣೂರು ವೀರನಗರ ನಿವಾಸಿಯಾದ 59 ವರ್ಷದ ಸುರೇಶ್ ಅವರು ಮೇ 29ರಂದು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಕಾಣೆಯಾದ ಸುರೇಶ್ ಅವರ ವೈಶಿಷ್ಟ್ಯಗಳು ಹೀಗಿವೆ: ಸುಮಾರು 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹಾಗೂ ಸಪೂರ ದೇಹ ಹೊಂದಿದ್ದಾರೆ. ಅವರ ಹಣೆಯ ಬಲಭಾಗದಲ್ಲಿ ಕಪ್ಪು ಮಚ್ಚೆ ಇರುವುದೂ ಗುರುತು. ಅವರು ಕೊನೆಯಾಗಿ ಕಾಣಿಸಿಕೊಂಡಾಗ ಕೆಂಪು…

Read More

ಹಿರಿಯ ಕಾಂಗ್ರೆಸ್ ನಾಯಕ ಅಬ್ದುಲ್ ರಹಿಮಾನ್ ಕನ್ಯಾನಗೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಹುದ್ದೆ

ಬಂಟ್ವಾಳ: ಪಕ್ಷವನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಹಾಗೂ ಸಂಘಟನಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ಉದ್ದೇಶದಿಂದ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ಕನ್ಯಾನ ಅವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇಮಕ‌ ಮಾಡಿರುತ್ತಾರೆ. ಅಬ್ದುಲ್ ರಹಿಮಾನ್ ಅವರು ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದು, ಗಡಿನಾಡು ಗ್ರಾಮ ಪಂಚಾಯತ್‌ನಲ್ಲಿ ನಾಲ್ಕು ಬಾರಿ ಸದಸ್ಯರಾಗಿ, ಎರಡು ಬಾರಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಗಮನಾರ್ಹ…

Read More
error: Content is protected !!