ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿ
ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿಯನ್ನು ಶನಿವಾರ ನಡೆಸಿತು.ಧರಣಿಯನ್ನು ದೇಶೀಯ ಅಧ್ಯಾಪಕ ಪರಿಷತ್ ನ ರಾಜ್ಯ ಸಮಿತಿ ಉಪಾಧ್ಯಕ್ಷ ಕೆ.ಕೆ ರಾಜೇಶ್ ಉದ್ಘಾಟಿಸಿ ಸರಕಾರ ಅಧ್ಯಾಪಕ ವರ್ಗವನ್ನು ಕಡೆಗಣಿಸುತ್ತಿದೆ. ನ್ಯಾಯವಾಗಿ ಸಿಗಬೇಕಾದ ಸವಲತ್ತುಗಳನ್ನು ಕೊಡದೆ ಶೋಷಣೆ ಮಾಡುತ್ತಿದೆ. ಅಧ್ಯಾಪಕರ ಬದುಕಿಗೆ ಭದ್ರತೆಯೇ ಇಲ್ಲದಾಗಿದೆ. ಸಾರ್ವಜನಿಕ ಶಿಕ್ಷಣ ರಂಗವನ್ನು ಅಧಃಪತನಗೊಳಿಸಿದ ಎಡರಂಗ ಸರಕಾರದ ಕಾರ್ಯವೈಖರಿಯ ವಿರುದ್ಧ ಹೋರಾಡುವ ಸಂದರ್ಭ ಒದಗಿ ಬಂದಿದೆ ಎಂದರು.ಸಾರ್ವಜನಿಕ…