ಪ್ರೇರಣಾ ಗ್ರಂಥಾಲಯ ಗುವೇದಪಡ್ಪು ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.
ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ (ರಿ) ಗುವೇದಪಡ್ಪು ಇದರ ನೇತೃತ್ವದಲ್ಲಿ ಎಸೆಸೆಲ್ಸಿ,ಪಿಯುಸಿ ಹಾಗೂ ಡಿಗ್ರಿ ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಸದಸ್ಯೆ ಶ್ರೀಮತಿ ಮೀನಾಕ್ಷಿ ಬೊಡ್ಡೋಡಿ ನೆರವೇರಿಸಿ ,”ಪುಸ್ತಕಗಳ ಓದುವಿಕೆಯಿಂದ ಜೀವನದ ಮೌಲ್ಯಗಳು ಹೆಚ್ಚಾಗುತ್ತವೆ ಮತ್ತು ಅದರಿಂದ ಉತ್ತಮ ಸಂಸ್ಕಾರಯುತ ಜೀವನ ನಡೆಸಲು ಪ್ರೇರಣೆಯನ್ನು ನೀಡುತ್ತದೆ.ಆದ್ದರಿಂದ ಓದಿ ಬೆಳೆಯಿರಿ ಎಂಬ ಹಿತನುಡಿಯನ್ನು ತಿಳಿಸಿದರು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ…